ಜೆ.ಸಿ ಮಾಧುಸ್ವಾಮಿ 
ರಾಜಕೀಯ

'ಸವೆಸಿದ ಹಾದಿಯ ಬಗ್ಗೆ ಹೆಮ್ಮಯಿದೆ: ಹಲಾಲುಟೋಪಿ ಕೆಲಸ ಮಾಡಿದವರಲ್ಲ, ಗೌಡರ ಬಗ್ಗೆ ಮಾತನಾಡದಿದ್ದರೆ ತಿಂದ ಅನ್ನ ಜೀರ್ಣವಾಗುವುದಿಲ್ಲವೆ? '

ನೆಟ್ಟಗೆ ಆಡಳಿತ ನಡೆಸಲು ಬಾರದ ರಾಜ್ಯ ಬಿಜೆಪಿ ಸರ್ಕಾರದ ಕುಕೃತ್ಯಗಳಿಗೆ ಬೌದ್ಧಿಕ ಪೋಷಾಕು ತೊಡಿಸಿ, ಸಮರ್ಥನೆಗೆ ಇಳಿಯುವ ಮೊಂಡುವಾದಿ ಸಚಿವ  ಜೆಸಿ ಮಾಧುಸ್ವಾಮಿ ಅವರೆ, ದೇವೇಗೌಡರ ಬಗ್ಗೆ ಮಾತನಾಡದಿದ್ದರೆ ತಿಂದ ಅನ್ನ ಜೀರ್ಣವಾಗುವುದಿಲ್ಲವೆ?

ಬೆಂಗಳೂರು: ನೆಟ್ಟಗೆ ಆಡಳಿತ ನಡೆಸಲು ಬಾರದ ರಾಜ್ಯ ಬಿಜೆಪಿ ಸರ್ಕಾರದ ಕುಕೃತ್ಯಗಳಿಗೆ ಬೌದ್ಧಿಕ ಪೋಷಾಕು ತೊಡಿಸಿ, ಸಮರ್ಥನೆಗೆ ಇಳಿಯುವ ಮೊಂಡುವಾದಿ ಸಚಿವ ಜೆಸಿ ಮಾಧುಸ್ವಾಮಿ ಅವರೆ, ದೇವೇಗೌಡರ ಬಗ್ಗೆ ಮಾತನಾಡದಿದ್ದರೆ ತಿಂದ ಅನ್ನ ಜೀರ್ಣವಾಗುವುದಿಲ್ಲವೆ? ಅಥವಾ ಈ ರೀತಿ ಮಾತಿನ ಬೇಧಿಯಿಂದ ಪ್ರಚಾರ ಗಿಟ್ಟಿಸಿಕೊಳ್ಳುವ ಹುನ್ನಾರವೆ? ಎಂದು ಜೆಡಿಎಸ್ ಪ್ರಶ್ನಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಜೆಡಿಎಸ್, ಆಡಳಿತ ನಡೆಸುವ ಬದಲು ಸರ್ಕಾರವು ಏನೋ ಒಂದು ನಿಭಾವಣೆ ಮಾಡುತ್ತಾ, ಕಾಲತಳ್ಳುತ್ತಿದ್ದೆ ಎಂದು ಹೇಳಿದ ಭೂಪ ನೀವೇ ಅಲ್ಲವೆ? 40% ಕಮಿಷನ್ ಸರ್ಕಾರವೆಂದೆ ಕುಖ್ಯಾತವಾಗಿರುವ ನಿಮ್ಮ ಸರ್ಕಾರ ದೋಚುತ್ತಿರುವ ಸಾರ್ವಜನಿಕರ ಹಣದ ಬಗ್ಗೆ ಲೆಕ್ಕ‌ ಇದೆಯೆ?ಯಾವ ಮುಖ ಇಟ್ಟುಕೊಂಡು ದೇವೇಗೌಡರ ಕುಟುಂಬದ ಬಗ್ಗೆ ಜನತೆಯ ಮುಂದೆ ಹಸಿಸುಳ್ಳು ಹೇಳುತ್ತಿದ್ದೀರಿ?  ಎಂದು ತಿರುಗೇಟು ನೀಡಿದೆ.

ಮಾಧುಸ್ವಾಮಿ ಅವರೆ, ದೇವೇಗೌಡರು ಕೆಳಮಟ್ಟದಿಂದ ಬೆಳೆದು ದೇಶದ ಪ್ರಧಾನಿ ಸ್ಥಾನ ಅಲಂಕರಿಸಿದವರು. ರಾಜ್ಯದ ಜನತೆಯ ಸ್ವಾಭಿಮಾನ ಮತ್ತು ನೆಮ್ಮದಿ ಕಾಪಾಡಲು ಈ ಇಳಿವಯಸ್ಸಲ್ಲೂ ಅವರು ಕೆಲಸ ಮಾಡುತ್ತಿದ್ದಾರೆ. ಸವೆಸಿದ ಹಾದಿಯ ಬಗ್ಗೆ ದೇವೇಗೌಡರ ಕುಟುಂಬಕ್ಕೆ ಹೆಮ್ಮಯಿದೆ. ಹಲಾಲುಟೋಪಿ ಕೆಲಸ ಮಾಡುತ್ತಾ, ಮೇಲೆ ಬಂದವರಲ್ಲ ಅವರು ಎಂದು ಟಾಂಗ್ ಕೊಟ್ಟಿದೆ.

ಸೋಲು-ಗೆಲುವುಗಳಿಂದ ಯಾರೂ ಹೊರತಾಗಿಲ್ಲ. ಆದರೆ, ಅಧಿಕಾರವಿಲ್ಲದಿದ್ದರೂ ಕನ್ನಡಿಗರ ಏಳ್ಗೆಗೆ ಪ್ರಾಮಾಣಿಕವಾಗಿ ದುಡಿಯುವ ದೇವೇಗೌಡರ ಬಗ್ಗೆ ನಾಲಿಗೆ ಹರಿಬಿಟ್ಟರೆ, ಜನತೆ ನಿಮಗೆ ಚುನಾವಣೆಯಲ್ಲಿ ಉತ್ತರ ನೀಡುತ್ತಾರೆ. ನಿಮ್ಮ ದುರಹಂಕಾರದ ಕತೆ ರಾಜ್ಯದ ಜನತೆಗೆ ಗೊತ್ತೇ ಇದೆ ಎಂದು ಜೆಡಿಎಸ್ ಟ್ವೀಟ್ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

4 ವರ್ಷಗಳಲ್ಲಿ ಮೊದಲ ಬಾರಿಗೆ ಖಜಾನೆ ಎಕ್ಸ್ಪೋಷರ್ ಕಡಿತಗೊಳಿಸಿದ ಆರ್‌ಬಿಐ

MGNREGA ಕುರಿತು ಚರ್ಚಿಸಲು ವಿಶೇಷ ಅಧಿವೇಶನ; ಜ. 26 ರಿಂದ ಕಾಂಗ್ರೆಸ್​​ನಿಂದ 'ಮನ್ರೇಗಾ ಉಳಿಸಿ' ಪಾದಯಾತ್ರೆ

ಛತ್ತೀಸ್‌ಗಢ: ಪೊಲೀಸ್ ವಾಹನದ ಚಾಲಕ ಸೇರಿ 5 ಜನರಿಂದ ಯುವತಿ ಮೇಲೆ ಗ್ಯಾಂಗ್ ರೇಪ್!

ಭೀಕರ: ಡಿವೈಡರ್ ಮೇಲೆ ಹಾರಿ ಜನರ ಮೇಲೆ ಬಿದ್ದ ದುಬಾರಿ ಕಾರು, ಬದುಕಿದ್ದೇ ಪವಾಡ.. Video Viral

SCROLL FOR NEXT