ಡಿಕೆ ಶಿವಕುಮಾರ್ 
ರಾಜಕೀಯ

ಅವನಿಗೆ ಪ್ಯಾಂಟ್‌ ಬಿಚ್ಚಲು ಹೇಳಿದ್ವಾ? ಕಾಂಗ್ರೆಸ್ ಪಕ್ಷ ಹಾಳು ಮಾಡಿದ್ದೇ ಅವನು!!: ರಮೇಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟು

ರಾಜ್ಯದಲ್ಲಿ ಸಿಡಿ ಪ್ರಕರಣ ಮತ್ತೆ ವ್ಯಾಪಕ ಚರ್ಚೆ ಹುಟ್ಟು  ಹಾಕಿದ್ದು, ರಮೇಶ್ ಜಾರಕಿಹೊಳಿ ಆರೋಪಗಳಿಗೆ ತಿರಗೇಟು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, 'ಅವನಿಗೆ ಪ್ಯಾಂಟ್‌ ಬಿಚ್ಚಲು ಹೇಳಿದ್ವಾ? ಕಾಂಗ್ರೆಸ್ ಪಕ್ಷ ಹಾಳು ಮಾಡಿದ್ದೇ ಅವನು' ಎಂದು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಸಿಡಿ ಪ್ರಕರಣ ಮತ್ತೆ ವ್ಯಾಪಕ ಚರ್ಚೆ ಹುಟ್ಟು  ಹಾಕಿದ್ದು, ರಮೇಶ್ ಜಾರಕಿಹೊಳಿ ಆರೋಪಗಳಿಗೆ ತಿರಗೇಟು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, 'ಅವನಿಗೆ ಪ್ಯಾಂಟ್‌ ಬಿಚ್ಚಲು ಹೇಳಿದ್ವಾ? ಕಾಂಗ್ರೆಸ್ ಪಕ್ಷ ಹಾಳು ಮಾಡಿದ್ದೇ ಅವನು' ಎಂದು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, 'ಅವನಿಗೆ ಪ್ಯಾಂಟ್‌ ಬಿಚ್ಚಲು ನಾನು ಹೇಳಿದ್ನಾ, ಲಂಚ ತೆಗೆದುಕೊಳ್ಳಲು ನಾನು ಹೇಳಿದ್ನಾ, ಜನರ ವೋಟಿಗೆ ಆರು ಸಾವಿರ ನೀಡಲು ನಾನು ಹೇಳಿದ್ನಾ, ಅವನು ಕಂಪ್ಲೇಂಟ್‌ ಆದರೂ ಕೊಡ್ಲಿ, ಏನಾದರೂ ಮಾಡಿಕೊಳ್ಳಿ, ನಾವಂತೂ ಹೆದರಲ್ಲ' ಎಂದು ಹೇಳಿದ್ದಾರೆ.

'ಅವನಿಗೆ ಪ್ಯಾಂಟ್ ಬಿಚ್ಚೋಕೆ ನಾನು ಹೇಳಿದ್ನಾ..?ನಮ್ಮ ಕಾಂಗ್ರೆಸ್ ಪಾರ್ಟಿ ಹಾಳು ಮಾಡಿದ್ದೇ ಅವನು.ಆಪರೇಷನ್ ಕಮಲ ಮಾಡಿ ಕಾಂಗ್ರೆಸ್ ಸರ್ಕಾರ ಬೀಳಿಸಿದ್ದನಲ್ಲಪ್ಪಾ.ಅದೇನೋ ತನಿಖೆ ಮಾಡಿಸ್ತೀನಿ ಅಂದ್ನಲ್ಲಾ ಮಾಡಿಸೋಕೆ ಹೇಳಿ, ಸಿಬಿಐ ತನಿಖೆ ಮಾಡಿಸೋಕೆ ಹೇಳಿ ಅಂತಾ ಡಿಕೆಶಿವಕುಮಾರ್ ರಮೇಶ್ ಜಾರಕಿಹೊಳಿ ವಿರುದ್ದ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

ಸಿಡಿ ಪ್ರಕರಣದಲ್ಲಿ ಜಾರಕಿಹೊಳಿ ರಾಜೀನಾಮೆ
ಜಲಸಂಪನ್ಮೂಲ ಸಚಿವರಾಗಿದ್ದ ರಮೇಶ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಯುವತಿಯೋರ್ವಳಿಗೆ ಆಮಿಷ ಒಡ್ಡಿ, ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿರುವ ಆರೋಪ ಜಾರಕಿಹೊಳಿ ಮೇಲೆ ಕೇಳಿಬಂದಿತ್ತು. ಯುವತಿಯೂ ಸಾರ್ವಜನಿಕವಾಗಿ ರಮೇಶ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದಳು. ಈ ವಿಚಾರ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT