ಎಚ್.ಡಿ ಕುಮಾರಸ್ವಾಮಿ ಮತ್ತು ಭವಾನಿ ರೇವಣ್ಣ 
ರಾಜಕೀಯ

ಕ್ಷೇತ್ರದಲ್ಲಿ ಸಮರ್ಥ ಅಭ್ಯರ್ಥಿ ಇದ್ದಾಗ ಕುಟುಂಬದವರನ್ನು ಸ್ಪರ್ಧೆಗೆ ಇಳಿಸಲ್ಲ-ಎಚ್.ಡಿಕೆ: ದೊಡ್ಡಗೌಡರ ಮನೆಯಲ್ಲಿ ತಾರಕಕ್ಕೇರಿದ ಟಿಕೆಟ್ ಫೈಟ್!

ಹಾಸನ ಕ್ಷೇತ್ರದಲ್ಲಿ ಸಮರ್ಥವಾದ ಅಭ್ಯರ್ಥಿ ಇದ್ದಾರೆ. ಅಲ್ಲಿ ಈಗ ಅನಿವಾರ್ಯತೆ ಇಲ್ಲ‌. ಈಗಾಗಲೇ ನಾಲ್ವರು ಮಹಿಳೆಯರಿಗೆ ಟಿಕೆಟ್ ಘೋಷಣೆ ಮಾಡಿದ್ದೇವೆ

ರಾಯಚೂರು: ನಮ್ಮ ಕುಟುಂಬದಲ್ಲಿ ಸಂಘರ್ಷ ನಡೆಯುತ್ತಿದೆ ಅನ್ನೋದೇನಿಲ್ಲ, ನನಗೆ ಕಾರ್ಯಕರ್ತರೇ ಕುಟುಂಬಸ್ಥರು. ಅಲ್ಲಿ ಸಮರ್ಥವಾದ ಅಭ್ಯರ್ಥಿ ಇದ್ದಾರೆ. ಇಲ್ಲದಿದ್ದರೇ ಅವರನ್ನು ನಾನೇ ನಿಲ್ಲಿಸುತ್ತಿದ್ದೆ. ಇಲ್ಲಿ ಕುಟುಂಬ ರಾಜಕಾರಣ ಇಲ್ಲ. ಗೊಂದಲವಿದ್ದರೆ ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ. ಅವಶ್ಯಕತೆಯಿದ್ದರೇ ಕಾರ್ಯಕರ್ತರಿಗಾಗಿ ತಲೆಕೊಡುತ್ತೇವೆ. ಇಲ್ಲಿನ ಅಂತಹ ಪರಿಸ್ಥಿತಿ ಇಲ್ಲ ಎಂದು ತಿಳಿಸಿದರು.

ಪಂಚರತ್ನಯಾತ್ರೆ ಹಿನ್ನೆಲೆಯಲ್ಲಿ ರಾಯಚೂರು ಪ್ರವಾಸದಲ್ಲಿರುವ ಹೆಚ್‌ಡಿಕೆ ದೇವದುರ್ಗದ ಗಾಣಧಾಣದಲ್ಲಿ ಮಾತನಾಡಿ, ಹಾಸನ ಕ್ಷೇತ್ರದಲ್ಲಿ ಸಮರ್ಥವಾದ ಅಭ್ಯರ್ಥಿ ಇದ್ದಾರೆ. ಅಲ್ಲಿ ಈಗ ಅನಿವಾರ್ಯತೆ ಇಲ್ಲ‌. ಈಗಾಗಲೇ ನಾಲ್ವರು ಮಹಿಳೆಯರಿಗೆ ಟಿಕೆಟ್ ಘೋಷಣೆ ಮಾಡಿದ್ದೇವೆ. ಕ್ಷೇತ್ರದಲ್ಲಿ ಸ್ಪರ್ಧಿಸಲು ಸಮರ್ಥ ಅಭ್ಯರ್ಥಿ ಇದ್ದಾಗ ಕುಟುಂಬದವರನ್ನು ಸ್ಪರ್ಧೆಗೆ ಇಳಿಸುವುದಿಲ್ಲ. ಇದರ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ. ಪದೇ ಪದೇ ಇದರ ಬಗ್ಗೆ ಸಮಜಾಯಿಷಿ ಕೊಡಬೇಕಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ನಮ್ಮ ಕುಟುಂಬದಲ್ಲಿ ಸಂಘರ್ಷ ನಡೆಯುತ್ತಿದೆ ಅನ್ನೋದೇನಿಲ್ಲ, ನನಗೆ ಕಾರ್ಯಕರ್ತರೇ ಕುಟುಂಬಸ್ಥರು. ಅಲ್ಲಿ ಸಮರ್ಥವಾದ ಅಭ್ಯರ್ಥಿ ಇದ್ದಾರೆ. ಇಲ್ಲದಿದ್ದರೇ ಅವರನ್ನು ನಾನೇ ನಿಲ್ಲಿಸುತ್ತಿದ್ದೆ. ಇಲ್ಲಿ ಕುಟುಂಬ ರಾಜಕಾರಣ ಇಲ್ಲ. ಗೊಂದಲವಿದ್ದರೆ ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ. ಅವಶ್ಯಕತೆಯಿದ್ದರೇ ಕಾರ್ಯಕರ್ತರಿಗಾಗಿ ತಲೆಕೊಡುತ್ತೇವೆ. ಇಲ್ಲಿನ ಅಂತಹ ಪರಿಸ್ಥಿತಿ ಇಲ್ಲ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT