ಎಚ್.ಡಿ ಕುಮಾರಸ್ವಾಮಿ ಮತ್ತು ಸಿ.ಟಿ ರವಿ 
ರಾಜಕೀಯ

ಭವಾನಿ ಅಕ್ಕ ಬಯಸಿದರೆ ಹಾಸನದಿಂದ ಟಿಕೆಟ್ ಕೊಡಲು ಬಿಜೆಪಿ ಸಿದ್ಧ- ಸಿ.ಟಿ ರವಿ: ದೇಶ ಒಡೆದಷ್ಟು ಸುಲಭವಲ್ಲ ದೇವೇಗೌಡರ ಮನೆ ಒಡೆಯುವುದು: ಎಚ್ ಡಿಕೆ

ಭವಾನಿ ರೇವಣ್ಣ ಅವರು ಬಿಜೆಪಿಯಿಂದ ಸ್ಪರ್ಧಿಸಲು ಬಯಸಿದರೆ ಹಾಸನದಿಂದ ಟಿಕೆಟ್​ ಕೊಡಲು ತಮ್ಮ ಪಕ್ಷ ಸಿದ್ಧವಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.

ಹಾಸನ: ಭವಾನಿ ರೇವಣ್ಣ ಅವರು ಬಿಜೆಪಿಯಿಂದ ಸ್ಪರ್ಧಿಸಲು ಬಯಸಿದರೆ ಹಾಸನದಿಂದ ಟಿಕೆಟ್​ ಕೊಡಲು ತಮ್ಮ ಪಕ್ಷ ಸಿದ್ಧವಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.

ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್​ನಲ್ಲಿ ನಡೆಯುತ್ತಿರುವ ಟಿಕೆಟ್ ಫೈಟ್ ಬಗ್ಗೆ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಿ.ಟಿ.ರವಿ ಭವಾನಿ ರೇವಣ್ಣ ಅವರು ಬಿಜೆಪಿಯಿಂದ ಸ್ಪರ್ಧಿಸಲು ಬಯಸಿದರೆ ಟಿಕೆಟ್​ ಕೊಡಲು ಸಿದ್ಧ. ಭವಾನಿ ಅಕ್ಕ ನಮ್ಮ ಪಕ್ಷದಿಂದ ಸ್ಪರ್ಧಿಸಬೇಕೆಂದು ಬಯಸಿದರೆ ಹೊಳೆನರಸೀಪುರ ಕ್ಷೇತ್ರದ ಅಭ್ಯರ್ಥಿಯಾಗಲಿ. ಆ ಕ್ಷೇತ್ರಕ್ಕೆ ಭವಾನಿ ಅವರಿಗಿಂತ ಉತ್ತಮ ಅಭ್ಯರ್ಥಿ ಸಿಗಲ್ಲ ಎಂದು ಹೇಳಿದ್ದಾರೆ.

ಸಿ.ಟಿ ರವಿ ಹೊಳೆನರಸೀಪುರ ಕ್ಷೇತ್ರದಿಂದ ಸ್ಪರ್ಧಿಸಲು ಭವಾನಿ ರೇವಣ್ಣರಿಗೆ ಬಿಜೆಪಿ ಟಿಕೆಟ್ ಆಫರ್​ ನೀಡಿರುವ ಬಗ್ಗೆ ರಾಯಚೂರಿನಲ್ಲಿ ಪ್ರತಿಕ್ರಿಯಿಸಿದ ಎಚ್​ಡಿ ಕುಮಾರಸ್ವಾಮಿ ಬಿಜೆಪಿಯವರಿಗೆ ಮನೆ ಒಡೆಯೋ ಅಭ್ಯಾಸವಿದೆ. ಅವರು ದೇಶಾನೇ ಹೊಡೆದವರಿಗೆ ಮನೆ ಒಡೆಯೋದು ಸರಳ, ಆದರೆ ದೇವೇಗೌಡರ ಮನೆಯನ್ನು ಒಡೆಯೋದು ಸುಲಭ ಅಲ್ಲ. ಹೊಳೆ ನರಸೀಪುರದಲ್ಲಿ ಭವಾನಿ ಅವರಿಗೆ ಟಿಕೆಟ್ ಕೊಡಲಿ‌ ಸಂತೋಷ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT