ಸಂಗ್ರಹ ಚಿತ್ರ 
ರಾಜಕೀಯ

ವಿಧಾನಸಭಾ ಚುನಾವಣೆ: ಟಿಕೆಟ್ ಗಾಗಿ 6 ಮಂದಿ ಮಾಜಿ ಕಾರ್ಪೋರೇಟರ್ ಗಳಿಂದ ಲಾಬಿ!

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿದ್ದು, ಈ ನಡುವಲ್ಲೇ ಪಕ್ಷದಿಂದ ಟಿಕೆಟ್ ಪಡೆದುಕೊಳ್ಳಲು 6 ಮಂದಿ ಬಿಬಿಎಂ ಮಾಜಿ ಕಾರ್ಪೋರೇಟರ್ ಗಳು ಎಲ್ಲಿಲ್ಲದ ಕಸರತ್ತುಗಳನ್ನು ನಡೆಸುತ್ತಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿದ್ದು, ಈ ನಡುವಲ್ಲೇ ಪಕ್ಷದಿಂದ ಟಿಕೆಟ್ ಪಡೆದುಕೊಳ್ಳಲು 6 ಮಂದಿ ಬಿಬಿಎಂ ಮಾಜಿ ಕಾರ್ಪೋರೇಟರ್ ಗಳು ಎಲ್ಲಿಲ್ಲದ ಕಸರತ್ತುಗಳನ್ನು ನಡೆಸುತ್ತಿದ್ದಾರೆ.

ಜನರ ಮನವೊಲಿಸಲು ಹಾಗೂ ಪಕ್ಷದ ಗಮನವನ್ನು ತಮ್ಮತ್ತ ಸೆಳೆದುಕೊಳ್ಳಲು ಬ್ಯಾನರ್ ಗಳ ಹಾಕುವುದು, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜಿಸುವುದು, ಭಕ್ತರ ತೀರ್ಥಯಾತ್ರೆಗೆ ಬಸ್ ಗಳ ವ್ಯವಸ್ಥೆ ಮಾಡುವುದು ಸೇರಿದಂತೆ ಹಲವು ಕಸರತ್ತುಗಳನ್ನು ನಡೆಸುತ್ತಿದ್ದಾರೆ.

2010ರಿಂದ 2015ರ ವರೆಗೆ ಜೋಗುಪಾಳ್ಯ ವಾರ್ಡ್‌ ಪ್ರತಿನಿಧಿಸಿದ್ದ ಮಾಜಿ ಮೇಯರ್‌ ಗೌತಮ್‌ಕುಮಾರ್‌ ಜೈನ್‌ ಬಿಜೆಪಿಯಿಂದ ಟಿಕೆಟ್‌ ಪಡೆದುಕೊಳ್ಳಲು ಲಾಬಿ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಈ ಸಂಬಂಧ ಕೇಂದ್ರ ಸರ್ಕಾರದ ಪ್ರಭಾವಿ ಸಚಿವರೊಬ್ಬರನ್ನು ಸಂಪರ್ಕಿಸಿರುವ ಗೌತಮ್ ಕುಮಾರ್ ಜೈನ್ ಅವರು, ಟಿಕೆಟ್ ಗಾಗಿ ಲಾಬಿ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಹಲವು ವರ್ಷಗಳಿಂದ ನಾನು ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಶಾಂತಿನಗರದ ನಿವಾಸಿಗಳ ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡುತ್ತೇನೆಂದು ಜೈನ್ ಹೇಳಿದ್ದಾರೆ.

ಗೌತಮ್ ಅವರಂತೆ ಜಯನಗರ ವಿಧಾನಸಭಾ ಕ್ಷೇತ್ರದ ಪಟ್ಟಾಭಿರಾಮ ನಗರ ವಾರ್ಡ್‌ನಿಂದ ಎರಡು ಬಾರಿ ಕಾರ್ಪೊರೇಟರ್ ಆಗಿರುವ ಸಿಎಂ ರಾಮಮೂರ್ತಿ ಕೂಡ ಪಕ್ಷದ ಟಿಕೆಟ್ ಗಾಗಿ ಲಾಬಿ  ನಡೆಸುತ್ತಿದ್ದಾರೆ.

ಮೂರು ವರ್ಷಗಳಿಂದ ವಿಧಾನಸಭಾ ಕ್ಷೇತ್ರದಲ್ಲಿ ರಾಮಮೂರ್ತಿಯವರು ಕೆಲಸ ಮಾಡುತ್ತಿದ್ದೇನೆ. 45 ಸಾವಿರ ಜನ ಒಂದೇ ಸಮುದಾಯಕ್ಕೆ ಸೇರಿದವರು ಕ್ಷೇತ್ರದಲ್ಲಿದ್ದು, ನನ್ನ ಜಾತಿ ನನಗೆ ಅನುಕೂಲ ಮಾಡಿಕೊಡಲಿದೆ ಎಂಬ ನಂಬಿಕೆ ಇದೆ ಎಂದು ರಾಮಮೂರ್ತಿಯವರು ಹೇಳಿದ್ದಾರೆ.

“ನಾನು ಜನರ ಮನೆ ಬಾಗಿಲಿಗೆ ಹೋಗುತ್ತಿದ್ದೇನೆ. ಸಾಂಸ್ಕೃತಿಕ. ಉತ್ಸವ ಕಾರ್ಯಕ್ರಮಗಳನ್ನು ನಡೆಸುತ್ತಿದ್ದೇನೆ. ಜತೆಗೆ ಶೇ.10ರಷ್ಟು ಮುಸ್ಲಿಮರು ನನಗೆ ಮತ ಹಾಕುತ್ತಾರೆ, ಒಕ್ಕಲಿಗ ಮತ್ತು ಕ್ರೈಸ್ತ ಸಮುದಾಯದವರಲ್ಲಿಯೂ ನಾನು ಜನಪ್ರಿಯತೆ ಗಳಿಸಿದ್ದೇನೆಂದು ತಿಳಿಸಿದ್ದಾರೆ.

ಸಾರಕ್ಕಿ ವಾರ್ಡ್‌ನಿಂದ ಮಾಜಿ ಮೇಯರ್ ಎಸ್‌ಕೆ ನಟರಾಜ್ ಮತ್ತು ಯಡಿಯೂರಿನಿಂದ ಎನ್‌ಆರ್ ರಮೇಶ್ ಕೂಡ ಜಯನಗರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಅದೇ ರೀತಿ ಮತ್ತೊಬ್ಬ ಮಾಜಿ ಮೇಯರ್ ಜಿ.ಪದ್ಮಾವತಿ ಕೂಡ ರಾಜಾಜಿನಗರ ಕ್ಷೇತ್ರಕ್ಕೆ ಲಾಬಿ ನಡೆಸುತ್ತಿದ್ದು, ಟಿಕೆಟ್ ಪಡೆದುಕೊಳ್ಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಬೆಂಬಲ ನೀಡುತ್ತಿದ್ದಾರೆಂದು ತಿಳಿದುಬಂದಿದೆ.

2018ರ ಚುನಾವಣೆಯಲ್ಲಿ ಸೋಲು ಕಂಡಿದ್ದೆ. ಆದರೆ, ಕಳದ 4 ವರ್ಷಗಳಿಂದ ಜನರಪರವಾದ ಕೆಲಸ ಮಾಡಿದ್ದೇನೆ. ಇತ್ತೀಚೆಗೆ ಜನರಿಗಾಗಿ ತೀರ್ಥಯಾತ್ರೆಗೆ 15ಕ್ಕೂ ಹೆಚ್ಚು ಬಸ್ ಗಳ ವ್ಯವಸ್ಥೆ ಮಾಡಿದ್ದೇನೆ. ಆಟೋರಿಕ್ಷಾಗಳ ಖರೀದಿಸಲು ಬಯಸಿದ್ದವರಿಗೆ ಸಾಲ ಕೊಡಿಸಿದ್ದೇನೆ. ಕಲ್ಯಾಣ ಕಾರ್ಯಕ್ರಮಗಳ ಕೈಗೊಂಡಿದ್ದೇನೆಂದು ಪದ್ಮಾವತಿ ಹೇಳಿದ್ದಾರೆ.

ಶಂಕರ ಮಠದ ವಾರ್ಡ್'ನ ಎನ್ ಶಿವರಾಜು ಅವರು, 2019 ರ ಡಿಸೆಂಬರ್‌ನಲ್ಲಿ ನಡೆದ ಉಪಚುನಾವಣೆಯಲ್ಲಿ ಜೆಡಿಎಸ್‌ನಿಂದ ಬಿಜೆಪಿಗೆ ಪಕ್ಷಾಂತರಗೊಂಡ ಕೆ ಗೋಪಾಲಯ್ಯ ವಿರುದ್ಧ ಸೋತಿದ್ದ ಮಹಾಲಕ್ಷ್ಮಿ ಲೇಔಟ್‌ಗಾಗಿ ಲಾಬಿ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT