ಸಂಗ್ರಹ ಚಿತ್ರ 
ರಾಜಕೀಯ

ಸಿಡಿ ಗೆ ತಡೆಯಾಜ್ಞೆ ತರದ, ಭ್ರಷ್ಟಾಚಾರಿಯಲ್ಲದ ವಿಪಕ್ಷದ ನಾಯಕರೊಬ್ಬರು ತುರ್ತಾಗಿ ಬೇಕಾಗಿದ್ದಾರೆ: ಬಿಜೆಪಿ ಕುರಿತು ಕಾಂಗ್ರೆಸ್ ವ್ಯಂಗ್ಯ

ರಾಜ್ಯ ವಿಧಾನಸಭಾ ಚುನಾವಣೆ ಪೂರ್ಣಗೊಂಡು, ಹೊಸ ಸರ್ಕಾರ ರಚನೆಗೊಂಡರೂ ಇನ್ನೂ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿದ ಬಿಜೆಪಿ ಕುರಿತು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಪೂರ್ಣಗೊಂಡು, ಹೊಸ ಸರ್ಕಾರ ರಚನೆಗೊಂಡರೂ ಇನ್ನೂ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿದ ಬಿಜೆಪಿ ಕುರಿತು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಸಿಡಿಗೆ ತಡೆಯಾಜ್ಞೆ ತರದ, ಭ್ರಷ್ಟಾಚಾರಿಯಲ್ಲದ ವಿಪಕ್ಷದ ನಾಯಕರೊಬ್ಬರು ತುರ್ತಾಗಿ ಬೇಕಾಗಿದ್ದಾರೆಂದು ಹೇಳಿದೆ. ಟ್ವೀಟ್ ನಲ್ಲಿ ವಿರೋಧ ಪಕ್ಷ ನಾಯಕನಲ್ಲಿ ಇರಬೇಕಾದ ಲಕ್ಷಣಗಳನ್ನೂ ಕಾಂಗ್ರೆಸ್ ತಿಳಿಸಿದೆ.

ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. ಸಿಡಿಗೆ ತಡೆಯಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು. ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆಂದು ಹೇಳಿ, ಬಿಜೆಪಿ ಕುರಿತು ವ್ಯಂಗ್ಯವಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

SCROLL FOR NEXT