ರಾಜಕೀಯ

ಲಂಚ ಆರೋಪಕ್ಕೆ ಮತ್ತಷ್ಟು ಪುಷ್ಠಿ: ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿ ವಿಸ್ತರಿಸುತ್ತಲೇ ಇರುವ ಕಾಂಗ್ರೆಸ್ ಸರ್ಕಾರ!

Shilpa D

ಬೆಂಗಳೂರು: ಹೊಸದಾಗಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದೆ. ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯ ದಿನಾಂಕವನ್ನು ಮತ್ತೆ ವಿಸ್ತರಣೆ ಮಾಡಿದೆ. ಈ ಹಿಂದಿನ ಆದೇಶದಲ್ಲಿ ಜೂನ್ 30ರ ತನಕ ವರ್ಗಾವಣೆಗೆ ಅವಕಾಶ ನೀಡಲಾಗಿತ್ತು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಸಾಮಾನ್ಯ ವರ್ಗಾವಣೆಯನ್ನು ಪೂರ್ಣಗೊಳಿಸಲು 15 ದಿನಗಳ ಗಡುವನ್ನು ನೀಡಿತ್ತು.  ಮೊದಲ 15 ದಿನಗಳ ಅವಧಿಯು ಜೂನ್ 15 ರಂದು ಮುಕ್ತಾಯಗೊಂಡಿತು.  ಮತ್ತ ಅದನ್ನು ಇನ್ನೂ 15 ದಿನಗಳು ವಿಸ್ತರಿಸಲಾಯಿತು , ಆ ವಿಸ್ತರಣೆ ಕೂಡ ಶುಕ್ರವಾರ ಮುಕ್ತಾಯಗೊಂಡಿದ್ದು, ಮತ್ತೆ ಹೊಸ ದಿನಾಂಕವನ್ನು ವಿಸ್ತರರಿಸಲಾಗಿದೆ.

ವಿಧಾನಸಭೆಯ ಅಧಿವೇಶನವೂ ಆರಂಭವಾಗಿರುವುದರಿಂದ ವರ್ಗಾವಣೆಗೆ ಸರ್ಕಾರ ಹೇಗೆ ಸಮಯ ಕಂಡುಕೊಳ್ಳುತ್ತದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಪ್ರಕ್ರಿಯೆ ಇನ್ನೂ ಅಪೂರ್ಣವಾಗಿರುವ ಕಾರಣ ಜುಲೈ 15 ರವರೆಗೆ ವರ್ಗಾವಣೆ ಆದೇಶಗಳನ್ನು ನೀಡಲಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ.

ಕೆಲ ದಿನಗಳ ಹಿಂದೆ ಈ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಬಾಂಬ್ ಸಿಡಿಸಿದ್ದರು. ಆದರೆ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತು ಇತರ ಹಿರಿಯ ಕಾಂಗ್ರೆಸ್ ನಾಯಕರು ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿದ್ದಾರೆ. ಸುಮಾರು ಏಳು ಲಕ್ಷ ಸರ್ಕಾರಿ ನೌಕರರಿದ್ದು, ಅವರಲ್ಲಿ ಹೆಚ್ಚಿನವರು ಗ್ರೂಪ್ ಸಿ ಮತ್ತು ಡಿ ಸಿಬ್ಬಂದಿಯಾಗಿದ್ದಾರೆ.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಎಂಎಲ್‌ಸಿ ರವಿಕುಮಾರ್‌, ಸರ್ಕಾರಿ ನೌಕರರ ವರ್ಗಾವಣೆ ಅಂತಿಮಗೊಳ್ಳದಿರಲು ಲಂಚವೇ ಕಾರಣ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ.  ರವಿ ಕುಮಾರ್ ಮಾತುಗಳಿಂದ ಲಂಚದ ಆರೋಪಕ್ಕೆ ಮತ್ತಷ್ಟು ರೆಕ್ಕೆ ಪುಕ್ಕಗಳು ಹುಟ್ಟಿಕೊಂಡಿವೆ.

ಒಳ್ಳೆಯ ಅಧಿಕಾರಿಗಳನ್ನು ತರುತ್ತೇವೆ ಮತ್ತು ಬಿಜೆಪಿ ಆರಂಭಿಸಿದ ಕಾರ್ಯಕ್ರಮಗಳನ್ನು ಮುಂದುವರಿಸಿಕೊಂಡು ಹೋಗಲು ಮರುಚಿಂತನೆ ಮಾಡುತ್ತೇವೆ ಎಂದು ಈ ಸರ್ಕಾರ ಹೇಳಿದೆ. ಉತ್ತಮ ಅಧಿಕಾರಿಗಳನ್ನು ತರುವುದು ಸೇರಿದಂತೆ ತನ್ನ ಭರವಸೆಗಳನ್ನು ಈಡೇರಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದ್ದಾರೆ.

ವರ್ಗಾವಣೆ ಇಲ್ಲದೆ ಸರಕಾರಿ ಕಚೇರಿಗಳಲ್ಲಿ ಕೆಲಸ ಜೋರಾಗಿಯೇ ನಡೆದಿದೆ. ಕೆಲವು ನೌಕರರು ಗುರುವಾರ  ಬಕ್ರೀದ್  ಸರ್ಕಾರಿ ರಜೆಯ ದಿನವೂ ಕೆಲಸ ಮಾಡಬೇಕಾಗಿತ್ತು ಎಂದು ಬಲ್ಲ ಮೂಲಗಳು ತಿಳಿಸಿವೆ.

ಶಾಸಕರು ಮತ್ತು ಸಚಿವರು ತಮ್ಮ ಕ್ಷೇತ್ರಗಳಲ್ಲಿ ವರ್ಗಾವಣೆಗೆ ಶಿಫಾರಸು ಮಾಡಿದ್ದು, ಸರ್ಕಾರ ಅವರನ್ನು ಗೌರವಿಸಬೇಕಾಗಿದೆ. ಅಲ್ಲದೆ, ಕಾಂಗ್ರೆಸ್ ನಾಯಕರು ಹಲವಾರು ಮನವಿಗಳನ್ನು ಸ್ವೀಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನನ್ನ ಇಲಾಖೆಯಲ್ಲಿ ಜುಲೈ 3 ರೊಳಗೆ ನಾವು ವರ್ಗಾವಣೆಯನ್ನು ಪೂರ್ಣಗೊಳಿಸುತ್ತೇವೆ. ವಿಳಂಬದ ಬಗ್ಗೆ ಹಿಂದಿನ ಬಿಜೆಪಿ ಸರ್ಕಾರವು ಅನರ್ಹ ಅಧಿಕಾರಿಗಳನ್ನು ಪ್ರಮುಖ ಸ್ಥಾನಗಳಲ್ಲಿ ಇರಿಸುವ ಮೂಲಕ ಅವ್ಯವಸ್ಥೆ ಮಾಡಿದೆ ಎಂದು ಅರಣ್ಯ ಸಚಿವ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ  ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. ಎಲ್ಲವನ್ನೂ ಸರಿಯಾಗಿ ಹೊಂದಿಸಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ. ವಿರೋಧ ಪಕ್ಷಗಳು ಭ್ರಷ್ಟಾಚಾರದಲ್ಲಿ ತೊಡಗಿವೆ ಎಂದು ಆರೋಪಿಸುತ್ತಿವೆ, ಆದರೆ ಅವರು ಅದನ್ನು ಸಾಬೀತುಪಡಿಸಿಲ್ಲ ಎಂದಿದ್ದಾರೆ.

SCROLL FOR NEXT