ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ನಮ್ಮ ರಾಜ್ಯದಲ್ಲಿ ಯಾವ ಅಜಿತ್ ಪವಾರ್ ಹುಟ್ಟಿಕೊಳ್ಳುತ್ತಾರೋ ಗೊತ್ತಿಲ್ಲ: ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಲೇವಡಿ

ಮಹಾರಾಷ್ಟ್ರದಲ್ಲಿ ದಿಢೀರ್​ ರಾಜಕೀಯ ಬದಲಾವಣೆ ನೋಡಿ ಶಾಕ್ ಆಗಿದೆ. ನಮ್ಮ ರಾಜ್ಯದಲ್ಲಿ ರಾಜ್ಯದಲ್ಲಿ ಯಾವ ಅಜಿತ್ ಪವಾರ್ ಹುಟ್ಟಿಕೊಳ್ಳುತ್ತಾರೋ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸೋಮವಾರ...

ಬೆಂಗಳೂರು: ಮಹಾರಾಷ್ಟ್ರದಲ್ಲಿ ದಿಢೀರ್​ ರಾಜಕೀಯ ಬದಲಾವಣೆ ನೋಡಿ ಶಾಕ್ ಆಗಿದೆ. ನಮ್ಮ ರಾಜ್ಯದಲ್ಲಿ ರಾಜ್ಯದಲ್ಲಿ ಯಾವ ಅಜಿತ್ ಪವಾರ್ ಹುಟ್ಟಿಕೊಳ್ಳುತ್ತಾರೋ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸೋಮವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಬಿಜೆಪಿಯವರು ರಾಜ್ಯದಲ್ಲಿರುವುದು ಸಮ್ಮಿಶ್ರ ಸರ್ಕಾರ ಅಂತಾರೆ. ಮಹಾರಾಷ್ಟ್ರದಲ್ಲಿ ದಿಢೀರ್​ ರಾಜಕೀಯ ಬದಲಾವಣೆಯಾಗಿದೆ. ನಿನ್ನೆ ಅಜಿತ್ ಪವಾರ್​ ಮಹಾರಾಷ್ಟ್ರ ಸರ್ಕಾರ ಬೆಂಬಲಿಸಿದ್ದಾರೆ. ಕರ್ನಾಟಕದಲ್ಲಿ ಯಾವ ಅಜಿತ್ ಪವಾರ್ ಬರುತ್ತಾರೋ ಗೊತ್ತಿಲ್ಲ. ಕರ್ನಾಟಕದ ಬಗ್ಗೆಯೂ ನನಗೆ ಆತಂಕ ಶುರುವಾಗಿದೆ ಎಂದರು.

ಇದೇ ವೇಳೆ ಮುಖ್ಯಮಂತ್ರಿಗಳ ಕಚೇರಿಯಲ್ಲಿ  ಭ್ರಷ್ಟಾಚಾರ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದ ಮಾಜಿ ಸಿಎಂ, ಮುಖ್ಯಮಂತ್ರಿ ಕಚೇರಿಯಲ್ಲಿ ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದಾರೆ. ಶಾಸಕರ ಶಿಫಾರಸ್ಸು ತಂದರೇ ಸಾಲದು 30 ಲಕ್ಷ ದುಡ್ಡು ತನ್ನಿ ಎಂದು ಹೇಳುತ್ತಿದ್ದಾರೆ. ದುಡ್ಡು ಕೊಟ್ಟಿರುವವರು ಸಾಕ್ಷಿ ಕೊಡುತ್ತರಾ? ದುಡ್ಡು ಕೊಟ್ಟವರಿಗೆ ಕೆಲಸ ಆಗಬೇಕು ಹಾಗಾಗಿ ಯಾರು ಸಾಕ್ಷಿ ಕೊಡಲ್ಲ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯ ಸರ್ಕಾರ ಐಸಿಯುಗೆ ಹೋಗುವ ಕಾಲ ಬರುತ್ತೆ. ಐಸಿಯು, ವೆಂಟಿಲೇಟರ್ ಮೇಲೆ ಈ ಸರ್ಕಾರ ನಡೆಯಬಹುದು. ಆರ್ಥಿಕ ಪರಿಸ್ಥಿತಿ ಆ ಮಟ್ಟಕ್ಕೆ ಹೋಗಲಿದೆ. ಮುಂದಿನ 5 ವರ್ಷಕ್ಕೆ ಏನು ಕೊಡಬೇಕೆಂಬ ಆತ್ಮವಿಶ್ವಾಸವೇ ಇಲ್ಲ. ರಾಜ್ಯಪಾಲರ ಭಾಷಣದ ವೇಳೆ ಶಾಸಕರು ಮೇಜು ಕುಟ್ಟಿದ್ದು ನೋಡಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT