ಕೆ.ಎಸ್ ಈಶ್ವರಪ್ಪ 
ರಾಜಕೀಯ

'ಕೇರಳ ಸ್ಟೋರಿ ಸಿನಿಮಾ ನೋಡಿದ್ರೆ ಕಾಂಗ್ರೆಸ್ ಸರ್ಕಾರ ಖಂಡಿತಾ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ಮಾಡಲ್ಲ'

ದಿ ಕೇರಳ ಸ್ಟೋರಿ  ಸಿನಿಮಾ ನೋಡಿದ್ರೆ ಕಾಂಗ್ರೆಸ್ ಸರ್ಕಾರ ಖಂಡಿತಾ ಮತಾಂತರ ನಿಷೇಧ ಕಾಯ್ದೆಯನ್ನ ತಿದ್ದುಪಡಿ ಮಾಡಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಗುಡುಗಿದ್ದಾರೆ.

ಬೆಂಗಳೂರು: ದಿ ಕೇರಳ ಸ್ಟೋರಿ  ಸಿನಿಮಾ ನೋಡಿದ್ರೆ ಕಾಂಗ್ರೆಸ್ ಸರ್ಕಾರ ಖಂಡಿತಾ ಮತಾಂತರ ನಿಷೇಧ ಕಾಯ್ದೆಯನ್ನ ತಿದ್ದುಪಡಿ ಮಾಡಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಗುಡುಗಿದ್ದಾರೆ.

ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪಅವರ ನೇತೃತ್ವದಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್ ಗ್ಯಾರಂಟಿ ವಿರೋಧಿ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದ ಅವರು,  ಬೇಕಿದ್ರೆ ಕಾಂಗ್ರೆಸ್ ಮಂತ್ರಿಗಳು ಬರಲಿ. ನಾನೇ ಕರೆದುಕೊಂಡು ಹೋಗಿ ಇಡೀ ಮಂತ್ರಿ ಮಂಡಲಕ್ಕೆ ಕೇರಳ ಸ್ಟೋರಿ ಸಿನಿಮಾವನ್ನ ಉಚಿತವಾಗಿ ತೋರಿಸ್ತೀನಿ ಬನ್ನಿ. ಕಾಂಗ್ರೆಸ್‌ನವರು ಈ ಸಿನಿಮಾ ನೋಡಿದ್ರೆ ಮತಾಂತರ ನಿಷೇಧ ಕಾಯ್ದೆಯನ್ನ ತಿದ್ದುಪಡಿ ಮಾಡಲ್ಲ ಎಂದಿದ್ದಾರೆ.

ಅಲ್ಲದೇ ಗೋ ಹತ್ಯೆ ನಿಷೇಧ ಕಾಯ್ದೆ ರದ್ದು ಮಾಡಿ ನೋಡೋಣ ಅಂತಾ ಸವಾಲ್ ಹಾಕಿದ್ದಾರೆ. ಗೋವು ತಾಯಿ ಸಮಾನ, ಮೊದಲು ನಿಮ್ಮ ಮನೆಗೆ ಹೋಗಿ ನಿಮ್ಮ ತಾಯಿ, ಅಕ್ಕ-ತಂಗಿಗೆ ಕೇಳಿ. ಗೋ ಹತ್ಯೆ ನಿಷೇಧ ಮಾಡ್ತೀವಿ ಅಂದ್ರೆ ನಿಮ್ಮನ್ನ ಮನೆಬಿಟ್ಟು ಓಡಿಸ್ತಾರೆ. ಮೋಸ ಮಾಡಿದ ಸರ್ಕಾರ ಬಹಳ ದಿನ ಇರಲ್ಲ ಅನ್ನೋದಕ್ಕೆ ಮಹಾರಾಷ್ಟ್ರ ಸಾಕ್ಷಿ. ಮಹಾರಾಷ್ಟ್ರದಂತೆಯೇ ಕರ್ನಾಟಕದಲ್ಲಿಯೂ ಆಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT