ಸಾಂದರ್ಭಿಕ ಚಿತ್ರ 
ರಾಜಕೀಯ

ನಿಗಮ-ಮಂಡಳಿಗಳಲ್ಲಿ ಹುದ್ದೆಗಳ ಭರ್ತಿ: ಕಾಂಗ್ರೆಸ್ ನಲ್ಲಿ ಆಕಾಂಕ್ಷಿಗಳಿಂದ ಲಾಬಿ

ರಾಜ್ಯದಲ್ಲಿ ನೂತನ ಕಾಂಗ್ರೆಸ್ ಸರ್ಕಾರದ ಬಜೆಟ್ ಮಂಡನೆ ಬಳಿಕ ವಿವಿಧ ಮಂಡಳಿ ಮತ್ತು ನಿಗಮಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ನಡೆಯಲಿದೆ ಎಂದು ಕಾಂಗ್ರೆಸ್ ಇತ್ತೀಚೆಗೆ ಸುಳಿವು ನೀಡಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಿ ಆಗಿರುವುದರಿಂದ ಜಿಲ್ಲೆಯಾದ್ಯಂತ ಪ್ರಮುಖ ಸ್ಥಾನಗಳಿಗೆ ಲಾಬಿ ಮುಂದುವರಿದಿದೆ.

ವಿಜಯಪುರ: ರಾಜ್ಯದಲ್ಲಿ ನೂತನ ಕಾಂಗ್ರೆಸ್ ಸರ್ಕಾರದ ಬಜೆಟ್ ಮಂಡನೆ ಬಳಿಕ ವಿವಿಧ ಮಂಡಳಿ ಮತ್ತು ನಿಗಮಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ನಡೆಯಲಿದೆ ಎಂದು ಕಾಂಗ್ರೆಸ್ ಇತ್ತೀಚೆಗೆ ಸುಳಿವು ನೀಡಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಿ ಆಗಿರುವುದರಿಂದ ಜಿಲ್ಲೆಯಾದ್ಯಂತ ಪ್ರಮುಖ ಸ್ಥಾನಗಳಿಗೆ ಲಾಬಿ ಮುಂದುವರಿದಿದೆ.

ಪ್ರಮುಖ ಹುದ್ದೆಗಳಿಗೆ ತಮ್ಮ ಹೆಸರನ್ನು ಶಿಫಾರಸು ಮಾಡಲು ಹಲವು ಆಕಾಂಕ್ಷಿಗಳು ಕಾಂಗ್ರೆಸ್ ಶಾಸಕರು ಮತ್ತು ಪ್ರಭಾವಿ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ ಎನ್ನಲಾಗಿದೆ. ವಿವಿಧ ಹುದ್ದೆಗಳಿಗೆ ಹೆಸರುಗಳನ್ನು ಪರಿಗಣನೆಗೆ ಶಿಫಾರಸು ಮಾಡುವಂತೆ ಕೆಪಿಸಿಸಿ ವಿವಿಧ ಜಿಲ್ಲಾ ಸಮಿತಿಗಳಿಗೆ ಪತ್ರಗಳನ್ನು ಕಳುಹಿಸಿದೆ ಎಂದು ಮೂಲಗಳು ತಿಳಿಸಿವೆ. ಒಂದು ನಿರ್ದಿಷ್ಟ ಪಕ್ಷ ಅಧಿಕಾರಕ್ಕೆ ಬಂದಾಗ, ಆ ಪಕ್ಷದ ನಾಯಕರು ಯಾವುದಾದರೂ ಮಂಡಳಿ ಅಥವಾ ನಿಗಮದ ಭಾಗವಾಗಲು ಬಯಸುವುದು ಸಹಜ. ಹಲವು ಕಾಂಗ್ರೆಸ್ ಮುಖಂಡರು ಬೇರೆ ಬೇರೆ ಹುದ್ದೆಗಳಿಗೆ ಲಾಬಿ ನಡೆಸುತ್ತಿದ್ದಾರೆ ಎಂದು ವಿಜಯಪುರ ಜಿಲ್ಲೆಯ ಪ್ರಮುಖ ಕಾಂಗ್ರೆಸ್ ಮುಖಂಡರೊಬ್ಬರು ಹೇಳುತ್ತಾರೆ. 

ಪಕ್ಷದೊಂದಿಗೆ ದೀರ್ಘ ಕಾಲದಿಂದ ಒಡನಾಟ ಇಟ್ಟುಕೊಂಡು ಸರ್ಕಾರದಲ್ಲಿ ಯಾವುದೇ ಹುದ್ದೆ ಸಿಗದವರನ್ನು ಈ ಬಾರಿ ಪರಿಗಣಿಸುವ ಸಾಧ್ಯತೆ ಇದೆ ಎಂದರು.

ರಾಜ್ಯ ಸಚಿವ ಸಂಪುಟಕ್ಕೆ ಹಲವಾರು ಹೊಸ ಮುಖಗಳನ್ನು ಕಾಂಗ್ರೆಸ್ ಈ ಬಾರಿ ಸೇರ್ಪಡೆ ಮಾಡಿರುವುದರಿಂದ ಕೆಲವು ಜನಪ್ರಿಯ ಮತ್ತು ಹಿರಿಯ ಶಾಸಕರು ಸಂಪುಟ ದರ್ಜೆ ಸಚಿವ ಸ್ಥಾನದಿಂದ ವಂಚಿತರಾಗಿದ್ದಾರೆ.

ಪಕ್ಷವು ಕೆಲವು ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನದಲ್ಲಿ ಪ್ರಮುಖ ಸ್ಥಾನಗಳಿಗೆ ನೇಮಕ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ, ಇತ್ತೀಚಿನ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಕಾರಣರಾದ ನಾಯಕರಿಗೂ ಸಹ ಅನುಮೋದನೆ ಸಿಗಬಹುದು. ಇನ್ನು ಕೆಲವೇ ದಿನಗಳಲ್ಲಿ ವಿವಿಧ ಜಿಲ್ಲೆಗಳಲ್ಲಿ ಆಕಾಂಕ್ಷಿಗಳ ಒತ್ತಡ ಹೆಚ್ಚಿರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಪಕ್ಷ ಪ್ರಕ್ರಿಯೆ ಆರಂಭಿಸುವ ನಿರೀಕ್ಷೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT