ಪ್ರಿಯಾಂಕ್ ಖರ್ಗೆ 
ರಾಜಕೀಯ

ನೇಮಕವಾಗದ ವಿರೋಧ ಪಕ್ಷದ ನಾಯಕ: ರಾಜ್ಯ ವಿಧಾನಸಭೆಯ ಭವ್ಯ ಪರಂಪರೆಗೆ ಮೊದಲ ಬಾರಿ ಕಪ್ಪು ಚುಕ್ಕೆ!

ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿ ಒಂದು ವಾರ ಕಳೆದರೂ, ಬಿಜೆಪಿ ವರಿಷ್ಠರು ಇನ್ನೂ ನಿರ್ಧಾರ ಕೈಗೊಳ್ಳದ ಕಾರಣ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಿಲ್ಲ.

ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿ ಒಂದು ವಾರ ಕಳೆದರೂ, ಬಿಜೆಪಿ ವರಿಷ್ಠರು ಇನ್ನೂ ನಿರ್ಧಾರ ಕೈಗೊಳ್ಳದ ಕಾರಣ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಿಲ್ಲ.

ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಬಿಜೆಪಿಯನ್ನು ಟೀಕಿಸಿದ್ದು, ಪ್ರಜಾಪ್ರಭುತ್ವ ವಿರೋಧಿ ಎಂದು ಬಣ್ಣಿಸಿದೆ. ವಿರೋಧ ಪಕ್ಷದ ನಾಯಕರಿಲ್ಲದೇ ರಾಜ್ಯಪಾಲರ ಭಾಷಣ ನಡೆದಿದೆ, ಬಜೆಟ್ ಮಂಡನೆಯಾಗಿ ಒಂದು ವಾರ ಕಳೆದರೂ ವಿರೋಧ ಪಕ್ಷದ ನಾಯಕನ ನೇಮಕವಾಗದಿರುವುದು ದುರಾದೃಷ್ಟ ಎಂದಿದೆ.

ಕರ್ನಾಟಕ ವಿಧಾನಸಭೆಯ ಭವ್ಯ ಪರಂಪರೆಗೆ ಇಂತಹ ಕಪ್ಪುಚುಕ್ಕೆ ಅಂಟಿಕೊಂಡಿರುವುದು ಇದೇ ಮೊದಲು. ವಿರೋಧ ಪಕ್ಷದ ನಾಯಕನನ್ನು ನೇಮಿಸದೆ ಬಿಜೆಪಿಯು ಪ್ರಜಾಪ್ರಭುತ್ವ ವ್ಯವಸ್ಥೆ, ಕರ್ನಾಟಕದ ಜನತೆ ಮತ್ತು ಸದನದ ಪಾವಿತ್ರ್ಯವನ್ನು ಅಗೌರವಗೊಳಿಸುತ್ತಿದೆ. ರಾಜಕೀಯ ವ್ಯವಸ್ಥೆಯಲ್ಲಿ ಜನರಲ್ಲಿ ಅಪನಂಬಿಕೆ  ಉಂಟುಮಾಡುತ್ತಿದೆ ಎಂದು ಆರ್‌ಡಿಪಿಆರ್ ಮತ್ತು ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ.

ಆಡಳಿತ ಪಕ್ಷವಾಗಿ ಮಾತ್ರವಲ್ಲ, ವಿರೋಧ ಪಕ್ಷವಾಗಿಯೂ ಜವಾಬ್ದಾರಿಯುತವಾಗಿ ನಡೆದುಕೊಳ್ಳುವಲ್ಲಿ ಬಿಜೆಪಿ ಸೋತಿದೆ. ವಿಪಕ್ಷ ನಾಯಕನನ್ನು ನೇಮಿಸದೆ ಪ್ರಜಾಪ್ರಭುತ್ವ ವ್ಯವಸ್ಥೆಗೆ, ಕರ್ನಾಟಕದ ಜನತೆಗೆ, ಸದನದ ಪಾವಿತ್ರ್ಯತೆಗೆ ಅವಮಾನಕರವಾಗಿ ನಡೆದುಕೊಂಡು ರಾಜಕೀಯ ವ್ಯವಸ್ಥೆಯ ಮೇಲೆ ಜನರಲ್ಲಿ ಅಪನಂಬಿಕೆ ಮೂಡಿಸುತ್ತಿದೆ ಬಿಜೆಪಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಚಿತ್ತಾಪುರದಲ್ಲಿ ನ.2ಕ್ಕೆ RSS ಪಥಸಂಚಲನಕ್ಕೆ ಅನುಮತಿ: ಅ.24ಕ್ಕೆ ಅರ್ಜಿ ವಿಚಾರಣೆ, ಹೈಕೋರ್ಟ್ ಮಹತ್ವದ ಸೂಚನೆ

ನ.2ಕ್ಕೆ ಚಿತ್ತಾಪುರ RSS ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ: ಪ್ರಜಾತಂತ್ರದ ಹಕ್ಕು ಕಸಿಯಲು ಹೊರಟವರಿಗೆ ಮುಖಭಂಗವಾಗಿದೆ; BJP

Afghanistan-Pakistan War: ತಕ್ಷಣದ ಕದನ ವಿರಾಮಕ್ಕೆ ಉಭಯ ರಾಷ್ಟ್ರಗಳು ಒಪ್ಪಿಗೆ: ಕತಾರ್ ವಿದೇಶಾಂಗ ಸಚಿವಾಲಯ

ರಾಜ್ಯದ ‘ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್: ಇನ್ಮುಂದೆ ಗ್ರಾ.ಪಂ ವ್ಯಾಪ್ತಿಯಲ್ಲೂ ಸಿಗಲಿದೆ ಇ-ಸ್ವತ್ತು ಸೌಲಭ್ಯ..!

ಗುತ್ತಿಗೆದಾರರು ಬಾಕಿ ಬಿಲ್ ಕೇಳಿದರೆ ಅದು "ಧಮ್ಕಿ" ಹೇಗೆ ಆಗುತ್ತದೆ DCM ಡಿಕೆ.ಶಿವಕುಮಾರ್ ಅವರೇ?

SCROLL FOR NEXT