ಪ್ರಿಯಾಂಕ್ ಖರ್ಗೆ 
ರಾಜಕೀಯ

ಕರ್ತವ್ಯದ ಅರಿವು ಇಲ್ಲದ್ದರಿಂದಲೇ ಹೀನಾಯ ಸೋಲು; ಈ ಏಕಪಾತ್ರಾಭಿನಯ ಬಿಜೆಪಿಗರಿಗೆ ಮಾತ್ರ ಸಾಧ್ಯ: ಪ್ರಿಯಾಂಕ್ ಖರ್ಗೆ

ಚೀನಾ ಅತಿಕ್ರಮಣ ಮಾಡಿದಾಗ ರಕ್ಷಣಾ ತಜ್ಞರಾಗುತ್ತಾರೆ, ಬೆಲೆ ಏರಿಕೆಗೆ ಆರ್ಥಿಕ ತಜ್ಞರಾಗುತ್ತಾರೆ, ಮೋದಿ ವಿದೇಶ ಪ್ರವಾಸಕ್ಕೆ ಹೋದರೆ ವಿದೇಶಾಂಗ ತಜ್ಞರಾಗುತ್ತಾರೆ! ಈ ಏಕಪಾತ್ರಾಭಿನಯ ಬಿಜೆಪಿಗರಿಗೆ ಮಾತ್ರ ಸಾಧ್ಯ .

ಬೆಂಗಳೂರು: ಚೀನಾ ಅತಿಕ್ರಮಣ ಮಾಡಿದಾಗ ರಕ್ಷಣಾ ತಜ್ಞರಾಗುತ್ತಾರೆ, ಬೆಲೆ ಏರಿಕೆಗೆ ಆರ್ಥಿಕ ತಜ್ಞರಾಗುತ್ತಾರೆ, ಮೋದಿ ವಿದೇಶ ಪ್ರವಾಸಕ್ಕೆ ಹೋದರೆ ವಿದೇಶಾಂಗ ತಜ್ಞರಾಗುತ್ತಾರೆ! ಈ ಏಕಪಾತ್ರಾಭಿನಯ ಬಿಜೆಪಿಗರಿಗೆ ಮಾತ್ರ ಸಾಧ್ಯ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು,  ನಾನು ನನ್ನ ಪಕ್ಷದ ವಕ್ತಾರನಾಗಿದ್ದೇನೆ, ಜನರ ಆಶೀರ್ವಾದದಿಂದ ಸಚಿವ ಸ್ಥಾನದ ಜವಾಬ್ದಾರಿ ಹೊತ್ತಿದ್ದೇನೆ, ಸರ್ಕಾರದ ಪರವಾಗಿ, ನಾಡಿನ ಜನರ ಪರವಾಗಿ ಕೆಲಸ ಮಾಡುವುದು ನನ್ನ ಕರ್ತವ್ಯವಾಗಿದೆ ಎಂದು ಟ್ವೀಟ್ ನಲ್ಲಿ ಬರೆದು ಕೊಂಡಿದ್ದಾರೆ.

ಬಿಜೆಪಿಗರಿಗೆ ಕರ್ತವ್ಯದ ಬಗ್ಗೆ ಅಜ್ಞಾನವಿದ್ದರೆ ನಾನು ಹೊಣೆಗಾರನಲ್ಲ! ಬಿಜೆಪಿಗೆ ಕರ್ತವ್ಯದ ಅರಿವು ಇಲ್ಲದಿದ್ದರಿಂದಲೇ ಹೀನಾಯ ಸೋಲಿಗೆ ಗುರಿಯಾಗಿದ್ದು ಎಂದು ಲೇವಡಿ ಮಾಡಿರುವ ಪ್ರಿಯಾಂಕ್ ,ಬಿಜೆಪಿ ಆಡಳಿತದ ಇಬ್ಬರು ಮುಖ್ಯಮಂತ್ರಿಗಳ ಅವಧಿಯಲ್ಲಿ ಯಾರು ಶಾಡೋ ಸಿಎಂ ಆಗಿದ್ದರು, ಯಾರು ಸೂಪರ್ ಸಿಎಂ ಆಗಿದ್ದರು ಎನ್ನುವುದು ಜಗತ್ತಿಗೆ ತಿಳಿದ ವಿಚಾರ, ಬಿಜೆಪಿಗೆ ತಿಳಿದಿಲ್ಲವೆಂದರೆ ಯತ್ನಾಳರ ಹಾಗೂ ರೇಣುಕಾಚಾರ್ಯರ ಮಾತುಗಳನ್ನು ರಿವೈಂಡ್ ಮಾಡಿ ಕೇಳಿಸಿಕೊಳ್ಳಲಿ ಎಂದು ಟಾಂಗ್ ನೀಡಿದ್ದಾರೆ.

ಸೋತು ವಿರೋಧ ಪಕ್ಷದಲ್ಲಿ ಕೂತಿದ್ದರೂ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡುವ ಕನಿಷ್ಠ ಹೊಣೆಗಾರಿಕೆ ಪ್ರದರ್ಶಿಸಲು ಸಾಧ್ಯವಾಗಿಲ್ಲ ಬಿಜೆಪಿಗೆ. ಅಧಿವೇಶನ ಶುರುವಾಗಿ, ರಾಜ್ಯಪಾಲರ ಭಾಷಣವಾಗಿ,ಬಜೆಟ್ ಮಂಡನೆಯಾಗಿ, ಬಜೆಟ್ ಮೇಲಿನ ಚರ್ಚೆಯೂ ಆಯ್ತು, ಆದರೆ ಒಬ್ಬ ವಿರೋಧ ಪಕ್ಷದ ನಾಯಕ ಸಿಗದಿರುವುದು ಬಿಜೆಪಿಯ ರಾಜಕೀಯ ಹಾಗೂ ನೈತಿಕ ದಿವಾಳಿತನಕ್ಕೆ ಸಾಕ್ಷಿ.

ಹೈಕಮಾಂಡ್ ನಾಯಕರಿಂದ ತಿರಸ್ಕಾರಕ್ಕೊಳಪಟ್ಟ ಬಿಜೆಪಿ ಕರ್ನಾಟಕ ವಿಪಕ್ಷ ನಾಯಕನ ಆಯ್ಕೆಯ ವಿಚಾರದಲ್ಲಿ ಬೊಗಸೆಯಷ್ಟಾದರೂ ಗೌರವವನ್ನು ಪಡೆದು ಬಂದ ನಂತರ ನನ್ನ ಬಗ್ಗೆ ಮಾತಾಡಲಿ ಎಂದು ತಿವಿದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಚೇರಿಯಲ್ಲಿ ಐಟಿ ಶೋಧ ನಡೆಯುತ್ತಿದ್ದಾಗಲೇ ಶೂಟ್ ಮಾಡಿಕೊಂಡ ಸಿ.ಜೆ ರಾಯ್; ಪೊಲೀಸ್ ಆಯುಕ್ತರು ಹೇಳಿದ್ದೇನು?

ಉಪ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಎನ್‌ಸಿಪಿ ನಿರ್ಧಾರವನ್ನು ಬೆಂಬಲಿಸುತ್ತೇವೆ: ಫಡ್ನವೀಸ್

12 ರೋಲ್ಸ್ ರಾಯ್ಸ್‌ ಸೇರಿ ಹಲವು ಐಷಾರಾಮಿ ಕಾರು, ಸಾವಿರಾರು ಕೋಟಿ ಒಡೆಯ ಸಿಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಮಹಾರಾಷ್ಟ್ರದ ನೂತನ ಉಪ ಮುಖ್ಯಮಂತ್ರಿಯಾಗಿ ಸುನೇತ್ರ ಪವಾರ್ ನಾಳೆ ಪ್ರಮಾಣ ವಚನ ಸ್ವೀಕಾರ: ಭುಜಬಲ್

BIFF ನಲ್ಲಿ ಪ್ಯಾಲೆಸ್ತೀನ್ ಚಿತ್ರಗಳ ಪ್ರದರ್ಶನಕ್ಕೆ ಪ್ರಕಾಶ್ ರಾಜ್ ಒತ್ತಾಯ: ಬಿಜೆಪಿ ವಾಗ್ದಾಳಿ!

SCROLL FOR NEXT