ಅಮಿತ್ ಶಾ ಭೇಟಿ ಮಾಡಿದ ವಿಜಯೇಂದ್ರ 
ರಾಜಕೀಯ

ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಅಮಿತ್ ಶಾ ಮಾರ್ಗದರ್ಶನ: ವಿಜಯೇಂದ್ರ

ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳ ನಡುವೆ ಜಂಗೀಕುಸ್ತಿಗೆ ವೇದಿಕೆಯಾಗಿ ಪರಿಣಮಿಸಿದ್ದು, ವಿಪಕ್ಷ ನಾಯಕನನ್ನು ಆಯ್ಕೆ ಮಾಡದಿರುವುದು ಬಿಜೆಪಿಗೆ ಮುಜುಗರದ ಪ್ರಶ್ನೆಯಾಗಿ ಉಳಿದಿದೆ. 

ಬೆಂಗಳೂರು: ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳ ನಡುವೆ ಜಂಗೀಕುಸ್ತಿಗೆ ವೇದಿಕೆಯಾಗಿ ಪರಿಣಮಿಸಿದ್ದು, ವಿಪಕ್ಷ ನಾಯಕನನ್ನು ಆಯ್ಕೆ ಮಾಡದಿರುವುದು ಬಿಜೆಪಿಗೆ ಮುಜುಗರದ ಪ್ರಶ್ನೆಯಾಗಿ ಉಳಿದಿದೆ. 

ಈ ನಡುವೆ  ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಹಾಗೂ ಬಿಜೆಪಿ ಶಾಸಕ ಬಿ. ವೈ. ವಿಜಯೇಂದ್ರ ಬುಧವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ್ದು, ರಾಜ್ಯ ರಾಜಕೀಯ ಕುರಿತು ಚರ್ಚೆ ನಡೆಸಿದ್ದಾರೆ. 

ಈ ಕುರಿತ ಫೋಟೋಗಳನ್ನು ಟ್ವೀಟ್ ಮಾಡಿರುವ ವಿಜಯೇಂದ್ರ, ಅಮಿತ್ ಶಾ ಭೇಟಿ ಸಂದರ್ಭದಲ್ಲಿ ರಾಜ್ಯದಲ್ಲಿ ವೈಫಲ್ಯದ ಗ್ಯಾರಂಟಿ ಬೆನ್ನಿಗಂಟಿಸಿಕೊಂಡಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಹಾಗೂ ಮುಂದಿನ ಲೋಕಸಭಾ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಕುರಿತು ಮಾರ್ಗದರ್ಶನ ಪಡೆಯಲಾಯಿತು ಎಂದು ತಿಳಿಸಿದ್ದಾರೆ.

ವಿಧಾನ ಸಭೆ ಹಾಗೂ ಹೊರಗೆ ‘ಕಾಂಗ್ರೆಸ್ ವೈಫಲ್ಯ ಹಾಗೂ ಜನವಿರೋಧಿ ಕ್ರಮಗಳ’ ವಿರುದ್ಧ ಹೋರಾಟ ರೂಪಿಸುವ ಕುರಿತು ಜೆ.ಪಿ. ನಡ್ಡಾ ಅವರಿಂದ ಮಾರ್ಗದರ್ಶನ ಪಡೆದಿರುವುದಾಗಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT