ಡಿ.ಕೆ ಶಿವಕುಮಾರ್ 
ರಾಜಕೀಯ

ಅಲ್ಪ ಸಂಖ್ಯಾತ ಸ್ಪೀಕರ್, ದಲಿತ ಉಪ ಸಭಾಪತಿ ವಿರುದ್ಧ ಬಿಜೆಪಿಗರಿಂದ ಗೂಂಡಾ ವರ್ತನೆ: ಡಿಕೆ ಶಿವಕುಮಾರ್

ಬಿಜೆಪಿ ಪ್ರತಿಭಟನೆ ವಿರುದ್ಧ ತೀವ್ರ ಕಿಡಿಕಾರಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಅಲ್ಪ ಸಂಖ್ಯಾತ ಸ್ಪೀಕರ್, ದಲಿತ ಉಪ ಸಭಾಪತಿ ವಿರುದ್ಧ  ಬಿಜೆಪಿಗರು ಗೂಂಡಾ ವರ್ತನೆ ತೋರಿದ್ದಾರೆ ಎಂದು ಹೇಳಿದ್ದಾರೆ.

ಬೆಂಗಳೂರು: ಬಿಜೆಪಿ ಪ್ರತಿಭಟನೆ ವಿರುದ್ಧ ತೀವ್ರ ಕಿಡಿಕಾರಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಅಲ್ಪ ಸಂಖ್ಯಾತ ಸ್ಪೀಕರ್, ದಲಿತ ಉಪ ಸಭಾಪತಿ ವಿರುದ್ಧ  ಬಿಜೆಪಿಗರು ಗೂಂಡಾ ವರ್ತನೆ ತೋರಿದ್ದಾರೆ ಎಂದು ಹೇಳಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಅಲ್ಪ ಸಂಖ್ಯಾತ ವ್ಯಕ್ತಿ ಸ್ಪೀಕರ್ ಆಗಿರುವುದು ಮತ್ತು ದಲಿತ ವ್ಯಕ್ತಿಯೊಬ್ಬರು ಉಪ ಸಭಾಪತಿಯಾಗಿರುವುದನ್ನು ಬಿಜೆಪಿಗರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ಅವರು ಹತಾಶೆಯಿಂದ ಕಾಗದ ಪತ್ರಗಳನ್ನು ಹರಿದು ಎಸೆದಿದ್ದಾರೆ. ಅಲ್ಪ ಸಂಖ್ಯಾತ ಸ್ಪೀಕರ್, ದಲಿತ ಉಪ ಸಭಾಪತಿ ವಿರುದ್ಧ ಬಿಜೆಪಿಗರಿಂದ ಗೂಂಡಾ ವರ್ತನೆ ತೋರಿದ್ದಾರೆ ಎಂದು ಹೇಳಿದರು.

ವಿಧಾನಸಭೆಯಲ್ಲಿ ಬಿಜೆಪಿಯವರು ಮಹಾಭಾರತ ನಾಟಕವನ್ನೇ ತೋರಿಸಿದ್ದಾರೆ. ಬಿಜೆಪಿ ಶಾಸಕರು ಹತಾಶೆಯಿಂದ ಗೂಂಡಾವರ್ತನೆ ತೋರಿದ್ದು, ದಲಿತ ಡೆಪ್ಯುಟಿ ಸ್ಪೀಕರ್ ಮೇಲೆ ಪೇಪರ್ ಹರಿದು ಎಸೆದಿದ್ದಾರೆ. ಬಿಜೆಪಿ ಪ್ರತಿಭಟನೆಗೆ ಜೆಡಿಎಸ್​ ನಾಯಕರ ಬೆಂಬಲ ವಿಚಾರಕ್ಕೆ ಸಂಬಂಧಿಸಿ ಜೆಡಿಎಸ್ ನಿಲುವೇನು ಅಂತಾ ಇನ್ನೂ ಸ್ಪಷ್ಟವಾಗಿಲ್ಲ. ಹೆಚ್​.ಡಿ.ದೇವೇಗೌಡರು ತಮ್ಮ ನಿಲುವು ಏನು ಅಂತಾ ಹೇಳಲಿ. ಹೆಚ್​​.ಡಿ.ದೇವೇಗೌಡರು, ಇಬ್ರಾಹಿಂ ಅವರ ಅಭಿಪ್ರಾಯ ತಿಳಿಸಿಲ್ಲ. ಹೆಚ್​.ಡಿ.ಕುಮಾರಸ್ವಾಮಿ ಮಾತ್ರ ಮಾತಾಡಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಇನ್ನು ವಿಪಕ್ಷಗಳ ಸಭೆಗೆ ಆಗಮಿಸಿದ ರಾಜಕೀಯ ನಾಯಕರಿಗೆ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಡಿಕೆ ಶಿವಕುಮಾರ್ ಅವರು, 'ಹಿರಿಯ ಐಎಎಸ್ ಅಧಿಕಾರಿಗಳು ನಮಗೆ ಭದ್ರತೆ ನೀಡುತ್ತಾರೆ. ಅವರನ್ನು ಈ ಸ್ಥಿತಿಯಲ್ಲಿ ಸುರಕ್ಷಿತವಾಗಿಡುವುದು ನಮ್ಮ ಕರ್ತವ್ಯ. ಹಾಗಾಗಿ ಅಗತ್ಯ ವ್ಯವಸ್ಥೆ ಮಾಡಿದ್ದೇವೆ. ರಾಜ್ಯಕ್ಕೆ ಬಂದ ಅತಿಥಿಗಳು ಈ ದೇಶವನ್ನು ಮುನ್ನಡೆಸಲಿದ್ದಾರೆ ಮತ್ತು ಅವರನ್ನು ಸರಿಯಾಗಿ ನಡೆಸಿಕೊಳ್ಳಬೇಕು. ಹೀಗಾಗಿ ಐಎಎಸ್ ಅಧಿಕಾರಿಗಳ ನಿಯೋಜನಯಲ್ಲಿ ಯಾವುದೇ ಲೋಪವಾಗಿಲ್ಲ. ಶಿಷ್ಠಾಚಾರದಂತೆ ನಡೆದುಕೊಂಡಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT