ಶೋಭಾ ಕರಂದ್ಲಾಜೆ 
ರಾಜಕೀಯ

ಈಸ್ಟ್ ಇಂಡಿಯಾ ಕಂಪನಿಯ ಹೊಸ ಆವೃತ್ತಿಯೇ ವಿಪಕ್ಷಗಳ 'INDIA': ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ರಾಷ್ಟ್ರಮಟ್ಟದಲ್ಲಿ 'INDIA' ಎಂಬ ವಿರೋಧ ಪಕ್ಷಗಳ ಹೊಸ ಒಕ್ಕೂಟ ರಚನೆಯು ಈಸ್ಟ್ ಇಂಡಿಯಾ ಕಂಪನಿಯ ಹೊಸ ಆವೃತ್ತಿಯಾಗಿದೆ ಎಂದು ಬಿಜೆಪಿ ನಾಯಕಿ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಮಂಗಳೂರು: ರಾಷ್ಟ್ರಮಟ್ಟದಲ್ಲಿ 'INDIA' ಎಂಬ ವಿರೋಧ ಪಕ್ಷಗಳ ಹೊಸ ಒಕ್ಕೂಟ ರಚನೆಯು ಈಸ್ಟ್ ಇಂಡಿಯಾ ಕಂಪನಿಯ ಹೊಸ ಆವೃತ್ತಿಯಾಗಿದೆ ಎಂದು ಬಿಜೆಪಿ ನಾಯಕಿ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಉಡುಪಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, '60 ವರ್ಷಗಳಿಂದ ದೇಶವನ್ನು ಲೂಟಿ ಮಾಡಿದವರು ಈಗ ಅಧಿಕಾರಕ್ಕಾಗಿ ಒಂದಾಗಿದ್ದಾರೆ. ಇದೀಗ India vs Bharat ಆಗಿದೆ ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ನಡೆದ ವಿಪಕ್ಷಗಳ ಸಭೆಯಲ್ಲಿ ಭಾಗವಹಿಸಿದ ಎಲ್ಲ ನಾಯಕರು ಪ್ರಧಾನಿ ಅಭ್ಯರ್ಥಿಗಳು ಎಂದು ಕರಂದ್ಲಾಜೆ ಅವರು ವಿರೋಧ ಪಕ್ಷಗಳ ಒಕ್ಕೂಟವನ್ನು ಲೇವಡಿ ಮಾಡಿದರು.

ಚಿಹ್ನೆಗಳು ಮತ್ತು ಹೆಸರುಗಳ (ಅನುಚಿತ ಬಳಕೆ ತಡೆಗಟ್ಟುವಿಕೆ) ಕಾಯಿದೆ, 1950ರ ನಿಬಂಧನೆಗಳನ್ನು ಒಕ್ಕೂಟದ ಹೆಸರಾದ 'INDIA' ಉಲ್ಲಂಘಿಸುತ್ತದೆ ಎಂದು ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಹೇಳಿದರು.

'ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುವ 'ಶಕ್ತಿ' ಯೋಜನೆಗೆ ಬಜೆಟ್ ಬೆಂಬಲವಿಲ್ಲದ ಕಾರಣ, ರಾಜ್ಯದಲ್ಲಿ ಸಾರಿಗೆ ನಿಗಮಗಳನ್ನು ನಾಲ್ಕು ತಿಂಗಳಲ್ಲಿ ಮುಚ್ಚಬೇಕಾಗುತ್ತದೆ' ಎಂದು ಹೇಳಿದರು.

ಸಿರಿಧಾನ್ಯಗಳನ್ನು ಖರೀದಿಸಲು ಭಾರತೀಯ ಆಹಾರ ನಿಗಮದ (ಎಫ್‌ಸಿಐ) ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸದೆ ‘ಅನ್ನ ಭಾಗ್ಯ’ ಯೋಜನೆಗೆ ಅಕ್ಕಿ ನೀಡಿಲ್ಲ ಎಂದು ಕೇಂದ್ರವನ್ನು ರಾಜ್ಯ ಸರ್ಕಾರ ದೂಷಿಸುತ್ತಿದೆ ಎಂದು ಅವರು ಕಿಡಿಕಾರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT