ಶಕುಂತಲಾ ನಟರಾಜ್ 
ರಾಜಕೀಯ

ಸಿಎಂ ಸಿದ್ದರಾಮಯ್ಯ ಕುಟುಂಬದ ಅವಹೇಳನ: ಬಿಜೆಪಿ ಕಾರ್ಯಕರ್ತೆ ಶಕುಂತಲಾಗೆ ಎಚ್ಚರಿಕೆ ನೀಡಿ ಕಳುಹಿಸಿದ ಪೊಲೀಸರು!

ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ವಿವಾದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ಬಗ್ಗೆ ಅವಹೇಳನಾಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ  ಬಿಜೆಪಿ ಕಾರ್ಯಕರ್ತೆಯನ್ನು ಬೆಂಗಳೂರು ಹೈಗ್ರೌಂಡ್ಸ್ ಪೊಲೀಸರು ವಶಕ್ಕೆ ಪಡೆದು ನಂತರ ಬುದ್ದಿವಾದ ಹೇಳಿ ಮನೆಗೆ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. 

ಬೆಂಗಳೂರು: ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ವಿವಾದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ಬಗ್ಗೆ ಅವಹೇಳನಾಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ  ಬಿಜೆಪಿ ಕಾರ್ಯಕರ್ತೆಯನ್ನು ಬೆಂಗಳೂರು ಹೈಗ್ರೌಂಡ್ಸ್ ಪೊಲೀಸರು ವಶಕ್ಕೆ ಪಡೆದು ನಂತರ ಬುದ್ದಿವಾದ ಹೇಳಿ ಮನೆಗೆ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. 

‘ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕ್ಯಾಮರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್ ನವರ ಪ್ರಕಾರ ಮಕ್ಕಳಾಟವಂತೆ. ಸಿದ್ದರಾಮಯ್ಯನವರ ಸೊಸೆ ಅಥವಾ ಹೆಂಡ್ತಿ ಅವ್ರ ವಿಡಿಯೋವನ್ನು ಇದೇ ತರ ಮಾಡಿದ್ರೆ ಅದನ್ನು ಮಕ್ಕಳಾಟ ಅಂತ ಒಪ್ಕೋತೀರಾ?’ ಎಂದು ಶಕುಂತಲಾ ಪ್ರಶ್ನಿಸಿದ್ದರು. 

ಈ ಸಂಬಂಧ ತುಮಕೂರಿನಲ್ಲಿ ಅವರನ್ನು ವಶಕ್ಕೆ ಪಡೆದ ನಂತರ ಪೊಲೀಸ್ ಠಾಣೆಗೆ ಕರೆ ತಂದು ವಿಚಾರಣೆ ನಡೆಸಿದ್ದಾರೆ. ಬಳಿಕ ಶಕುಂತಲಾ ನಟರಾಜ್ ತಪ್ಪೊಪ್ಪಿಕೊಂಡಿದ್ದು,  ಎಚ್ಚರಿಕೆ ನೀಡಿ ಮನೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT