ಬಿಜೆಪಿ ಕಾರ್ಯಕರ್ತೆ ಶಕುಂತಲಾ 
ರಾಜಕೀಯ

'ಸರ್ಕಾರ, ಸಿಎಂ ಧೋರಣೆ ವಿರುದ್ದ ಮಾತನಾಡಿದರೆ.. ದಾಳಿ ಮಾಡಿಸಿ ಬಂಧಿಸಲು ಅದೇಶ'..: ಕಾಂಗ್ರೆಸ್ ವಿರುದ್ಧ ಶಕುಂತಲಾ ಮತ್ತೆ ಟೀಕೆ

ಉಡುಪಿಯಲ್ಲಿ ವಿದ್ಯಾರ್ಥಿನಿಯರ ವಾಶ್ ರೂಂ ವಿಡಿಯೋ ಚಿತ್ರೀಕರಣ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿವಾದಾತ್ಮಕ ಪೋಸ್ಟ್ ಮಾಡಿ ಸುದ್ದಿಗೆ ಗ್ರಾಸವಾಗಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಎಚ್‌.ಎಸ್. ಮತ್ತೆ ಸರ್ಕಾರದ ವಿರುದ್ಧ ಟ್ವೀಟ್ ವಾರ್ ಮುಂದುವರೆಸಿದ್ದಾರೆ.

ಬೆಂಗಳೂರು: ಉಡುಪಿಯಲ್ಲಿ ವಿದ್ಯಾರ್ಥಿನಿಯರ ವಾಶ್ ರೂಂ ವಿಡಿಯೋ ಚಿತ್ರೀಕರಣ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿವಾದಾತ್ಮಕ ಪೋಸ್ಟ್ ಮಾಡಿ ಸುದ್ದಿಗೆ ಗ್ರಾಸವಾಗಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಎಚ್‌.ಎಸ್. ಮತ್ತೆ ಸರ್ಕಾರದ ವಿರುದ್ಧ ಟ್ವೀಟ್ ವಾರ್ ಮುಂದುವರೆಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ಪೋಸ್ಟ್‌ ಮಾಡಿದ್ದಾರೆಂಬ ಆರೋಪದಡಿ ಶಕುಂತಲಾ ಅವರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದ್ದರು. ಇದೀಗ ಅದೇ ವಿಚಾರವಾಗಿ ಶಕುಂತಲಾ ಅವರು ಮತ್ತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ತಮ್ಮ ಟ್ವೀಟ್ ವಾರ್ ಮುಂದುವರೆಸಿದ್ದು, ತಮ್ಮನ್ನು ಬಂಧಿಸಿದ್ದ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಸರಣಿ ವಿರುದ್ಧ ಟ್ವೀಟ್ ಮಾಡಿದ್ದಾರೆ.

‘ಸರ್ಕಾರದ ವಿರುದ್ಧ, ಮುಖ್ಯಮಂತ್ರಿಗಳ ಧೋರಣೆಯ ವಿರುದ್ದ ಮಾತನಾಡಿದರೆ ಮಹಿಳೆಯರು ಎಂಬುದನ್ನು ನೋಡದೆ ಮನೆಗಳ ಮೇಲೆ ಏಕಾಏಕಿ ದಾಳಿ ಮಾಡಿಸಿ ಬಂಧಿಸಲು ಅದೇಶಿಸುವ ಲಜ್ಜೆಗೆಟ್ಟ ಸರ್ಕಾರವಿದು’ ಎಂದು ಟೀಕಿಸಿದ್ದಾರೆ. ಮತ್ತೊಂದು ಟ್ವೀಟ್ ನಲ್ಲಿ ‘ಸಾಮಾನ್ಯ ಕಾರ್ಯಕರ್ತೆಯ ಬೆನ್ನೆಲುಬಾಗಿ ನಿಂತು ಕೆಲವೇ ಗಂಟೆಗಳಲ್ಲಿ ಬಿಡುಗಡೆ ಮಾಡಿಸಿದ ರಾಜ್ಯ ಬಿಜೆಪಿ ನಾಯಕರು, ತುಮಕೂರು ಬಿಜೆಪಿ ಮುಖಂಡರು, ಪದಾಧಿಕಾರಿಗಳು, ರಾಜ್ಯ ಕಾನೂನು ಮತ್ತು ಸಾಮಾಜಿಕ ಮಾಧ್ಯಮ ಪ್ರಕೋಷ್ಠಕ್ಕೆ, ಹಾಗೂ ಸಾಮಾಜಿಕ ಜಾಲತಾಣದಲ್ಲಿ ನನ್ನ ಪರನಿಂತ ನನ್ನೆಲ್ಲಾ ಸಹೋದರ ಸಹೋದರಿಯರಿಗೂ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ. 

ಏನಿದು ವಿವಾದ?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ಪೋಸ್ಟ್‌ ಮಾಡಿದ್ದಾರೆಂಬ ಆರೋಪದಡಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಎಚ್‌.ಎಸ್. ಅವರನ್ನು ಇತ್ತೀಚೆಗೆ ಹೈಗ್ರೌಂಡ್ಸ್ ಠಾಣೆ ಪೊಲೀಸರು ವಶಕ್ಕೆ ಪಡೆದು ಠಾಣೆ ಜಾಮೀನು ಮೇಲೆ ಬಿಡುಗಡೆ ಮಾಡಿದ್ದರು ಎಂದು ಹೇಳಲಾಗಿದೆ. 

ಉಡುಪಿ ವಿದ್ಯಾರ್ಥಿನಿಯರ ವಾಶ್ ರೂಂ ವಿಡಿಯೋ ಚಿತ್ರೀಕರಣ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಿಸಿದ್ದ ಪೋಸ್ಟ್‌ಗೆ ಪ್ರತಿಕ್ರಿಯಿಸಿದ್ದ ತುಮಕೂರು ಮೂಲದ ಶಕುಂತಲಾ, ಅವಹೇಳನಕಾರಿಯಾಗಿ ಮತ್ತೊಂದು ಪೋಸ್ಟ್‌ ಮಾಡಿದ್ದರು. ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತ ಹನುಮಂತರಾಯ ದೂರು ನೀಡಿದ್ದರು. ಮಹಿಳೆಯ ಗೌರವಕ್ಕೆ ಧಕ್ಕೆ ತಂದ (ಐಪಿಸಿ 509) ಆರೋಪದಡಿ ಶಕುಂತಲಾ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿತ್ತು’ ಎಂದು ಪೊಲೀಸ್ ಮೂಲಗಳು ಹೇಳಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT