ಲಕ್ಷ್ಮಣ ಸವದಿ 
ರಾಜಕೀಯ

ಅಧಿವೇಶನ ಮುಗಿದರೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದಿರುವುದು ದುರಂತ: ಲಕ್ಷ್ಮಣ ಸವದಿ

ಅಧಿವೇಶನ ಮುಗಿದರೂ ರಾಷ್ಟ್ರೀಯ ಪಕ್ಷವಾದ ಬಿಜೆಪಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ವಿಪಕ್ಷ ನಾಯಕನಿಲ್ಲದೆ ಅಧಿವೇಶನ ನಡೆದಿರುವುದು ದುರಂತದ ಕಥೆ.

ಬೆಳಗಾವಿ: ಅಧಿವೇಶನ ಮುಗಿದರೂ ರಾಷ್ಟ್ರೀಯ ಪಕ್ಷವಾದ ಬಿಜೆಪಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ವಿಪಕ್ಷ ನಾಯಕನಿಲ್ಲದೆ ಅಧಿವೇಶನ ನಡೆದಿರುವುದು ದುರಂತದ ಕಥೆ. ಇಂಥದ್ದೊಂದು ಬೆಳವಣಿಗೆ ನಡೆದಿರುವುದು ಇತಿಹಾಸದಲ್ಲಿ ಇದೇ ಮೊದಲು. ಇಂತಹ ಇತಿಹಾಸವನ್ನು ಬಿಜೆಪಿಯವರು ಬರೆಯುತ್ತಾರೆ ಎಂದು ಶಾಸಕ ಲಕ್ಷ್ಮಣ ಸವದಿ ವ್ಯಂಗ್ಯವಾಡಿದರು.

ಹೊಸ ಸರ್ಕಾರ ರಚನೆಯಾದ ಮೇಲೆ ಶಾಸಕರ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳಿಗೆ ತಿಳಿಸುವುದು ವಾಡಿಕೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ರಾಜ್ಯ ಕಾಂಗ್ರೆಸ್‌ ನಾಯಕರ ಸಭೆ ಕರೆದಿದ್ದರಿಂದ ಶಾಸಕಾಂಗ ಪಕ್ಷದ ಸಭೆ ಮುಂದಕ್ಕೆ ಹೋಗಿತ್ತು. ಈಗ ಮತ್ತೆ ಸಭೆ ಕರೆಯಬೇಕಿದೆ. ಕಾಂಗ್ರೆಸ್‌ನಲ್ಲಿ ಯಾವುದೇ ಅಸಮಾಧಾನವಿಲ್ಲ. ವಿರೋಧ ಪಕ್ಷದವರು ಮಾಡಿದ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದರು.

ಸಿ.ಟಿ.ರವಿ ಅವರಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ಕೊಡುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸವದಿ, ‘ಅವರು ಯಾರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮಾಡುತ್ತಾರೆ ಎಂಬ ಅವಶ್ಯಕತೆ ನಮಗಿಲ್ಲ. ಒಂದುವೇಳೆ ರವಿ ಅಧ್ಯಕ್ಷರಾದರೆ ದುರ್ದೈವದ ಸಂಗತಿ. ಗೆಳೆತನಕ್ಕೂ ಮತ್ತು ಪಕ್ಷಕ್ಕೂ ವ್ಯತ್ಯಾಸವಿರುತ್ತದೆ. ಒಂದು ರವಿ ಅಧ್ಯಕ್ಷರಾಗಿ, ಆ ಪಕ್ಷದಲ್ಲಿ ಬೆಳೆಯುತ್ತಾನೆ ಎಂದರೆ ಶುಭಕೋರುತ್ತೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT