ವಿ ಸೋಮಣ್ಣ 
ರಾಜಕೀಯ

2024ರಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ವಿ ಸೋಮಣ್ಣ ಸ್ಪರ್ಧೆ? ಸಂಚಲನ ಮೂಡಿಸಿದ ಸಂಸದ ಜಿ ಎಸ್ ಬಸವರಾಜು ಹೇಳಿಕೆ

2024 ರ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ವಿ. ಸೋಮಣ್ಣ ಅವರನ್ನು ಕಣಕ್ಕಿಳಿಸಲು ಭಾರತೀಯ ಜನತಾ ಪಾರ್ಟಿ ಮುಂದಾಗಿದೆಯೇ.ಹಾಲಿ ಸಂಸದ ಜಿ ಎಸ್ ಬಸವರಾಜು ಅವರು ನಿನ್ನೆ ಮಂಗಳವಾರ ಕ್ಷೇತ್ರದಲ್ಲಿ ಸಮುದಾಯದ ಮುಖಂಡರ ಸಭೆ ನಡೆಸಿದ್ದು ಅದರಲ್ಲಿ ಸೋಮಣ್ಣನವರ ವಿಚಾರ ಅವರು ಪ್ರಸ್ತಾಪಿಸಿದ್ದಾರೆ. 

ತುಮಕೂರು: 2024 ರ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ವಿ. ಸೋಮಣ್ಣ ಅವರನ್ನು ಕಣಕ್ಕಿಳಿಸಲು ಭಾರತೀಯ ಜನತಾ ಪಾರ್ಟಿ ಮುಂದಾಗಿದೆಯೇ.ಹಾಲಿ ಸಂಸದ ಜಿ ಎಸ್ ಬಸವರಾಜು ಅವರು ನಿನ್ನೆ ಮಂಗಳವಾರ ಕ್ಷೇತ್ರದಲ್ಲಿ ಸಮುದಾಯದ ಮುಖಂಡರ ಸಭೆ ನಡೆಸಿದ್ದು ಅದರಲ್ಲಿ ಸೋಮಣ್ಣನವರ ವಿಚಾರ ಅವರು ಪ್ರಸ್ತಾಪಿಸಿದ್ದಾರೆ. 

ಈ ಬಗ್ಗೆ ಪಕ್ಷದ ಹೈಕಮಾಂಡ್ ಸುಳಿವು ನೀಡಿದೆ ಎಂದು ತುಮಕೂರು ಬಿಜೆಪಿ ಸಂಸದ ಜಿ ಎಸ್ ಬಸವರಾಜು ಹೇಳಿದ್ದಾರೆ. ನಾನು ನಿವೃತ್ತಿಯಾಗುತ್ತಿದ್ದಂತೆ ಸೋಮಣ್ಣ ಅವರನ್ನು ತುಮಕೂರಿನಿಂದ ಕಣಕ್ಕಿಳಿಸುವುದಾಗಿ ಹೈಕಮಾಂಡ್‌ ಹೇಳಿತ್ತು. ವೀರಶೈವ ಲಿಂಗಾಯತ ಸಮಾಜದವರು ಒಗ್ಗೂಡಿ ಅವರನ್ನು ಆಯ್ಕೆ ಮಾಡಬೇಕು. ನೀವು ವೀರಶೈವ ಸಮಾಜದವರು ಒಡೆದು ಹೋದರೆ ಸಂಸದ ಸ್ಥಾನವನ್ನು ಬೇರೆಯವರು ಆಕ್ರಮಿಸಿಕೊಳ್ಳುತ್ತಾರೆ' ಎಂದು ಅವರು ಎಚ್ಚರಿಕೆ ನೀಡಿದರು. 

ಜಿ ಎಸ್ ಬಸವರಾಜು ಅವರಿಗೆ ಈಗ 85 ವರ್ಷವಾಗಿದೆ. ಕಳೆದ ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಹೈಕಮಾಂಡ್ ಸೂಚನೆಯಂತೆ ಸೋಮಣ್ಣ ಅವರು ವರುಣಾ ಮತ್ತು ಚಾಮರಾಜನಗರದ ಉಭಯ ಸ್ಥಾನಗಳಲ್ಲಿ ಸ್ಪರ್ಧಿಸಿ ಎರಡೂ ಕಡೆ ಸೋತಿದ್ದರು. 

ಬಸವರಾಜು ಅವರ ಆಡಿಯೋ ಕ್ಲಿಪ್ ವೈರಲ್ ಆಗಿದ್ದು, ಬಿಜೆಪಿ ವಲಯದಲ್ಲಿ ಅಸಮಾಧಾನ ಸೃಷ್ಟಿಸಿದೆ. ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ ಕೂಡ ಲೋಕಸಭೆ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಈ ಬಗ್ಗೆ ಘೋಷಣೆ ಮಾಡಲು ಬಸವರಾಜು ಅವರಿಗೆ ಅಧಿಕಾರ ಕೊಟ್ಟವರು ಯಾರು ಎಂದು ನಾಯಕರೊಬ್ಬರು ಪ್ರಶ್ನಿಸಿದ್ದಾರೆ. 

ಬಸವರಾಜು ತಮ್ಮ ಭಾಷಣದಲ್ಲಿ ಸಮಾಜಕ್ಕೆ ಅಪಾರ ಕೊಡುಗೆ ನೀಡಿದ ಸೋಮಣ್ಣ ಅವರ ಉಮೇದುವಾರಿಕೆಯನ್ನು ಸಮರ್ಥಿಸಿಕೊಂಡರು. ಜಗದೀಶ್ ಶೆಟ್ಟರ್ ಸಿಎಂ ಆಗಿದ್ದಾಗ ತುಮಕೂರಿನಲ್ಲಿ ಸಮುದಾಯಕ್ಕೆ 5-6 ಎಕರೆ ಸ್ಮಶಾನ ಮಂಜೂರು ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT