ರವಿ, ಸುನೀಲ್ ಮತ್ತು ಪ್ರತಾಪ್ ಸಿಂಹ 
ರಾಜಕೀಯ

ಹೊಂದಾಣಿಕೆ ರಾಜಕೀಯದ ವಿರುದ್ಧ ರವಿ, ಸುನೀಲ್, ಸಿಂಹ ಗುಟುರು: ಹೇಳಿಕೆ ಹಿಂದೆ ಬಿಜೆಪಿ 'ಬಿಗ್ ಬಾಸ್' ಕೈವಾಡ?

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಸೋಲಿನ ಅವಮಾನವನ್ನು ಯಾರ ತಲೆ ಮೇಲೆ ಗೂಬೆ ಕೂರಿಸುವುದು, ಯಾರನ್ನು ಹರಕೆಯ ಕುರಿ ಮಾಡುವುದು ಎಂದು ಯೋಚಿಸುತ್ತಿರುವಂತೆ ಕಾಣುತ್ತಿದೆ ಎಂದು ಆರೋಪಿಸಿದ್ದಾರೆ.

ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಕಾಂಗ್ರೆಸ್ ನ ಅತ್ಯಂತ ಹಿರಿಯ ಶಾಸಕರೆನಿಸಿರುವ ಶಾಮನೂರು ಶಿವಶಂಕರಪ್ಪ ದಾವಣಗೆರೆಯ ಹೊರವಲಯದಲ್ಲಿರುವ ಖಾಸಗಿ ರೆಸಾರ್ಟ್ ಒಂದರಲ್ಲಿ ರಹಸ್ಯ ಸಭೆ ನಡೆಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.

ಆದರೆ ಇದೊಂದು ಸೌಹಾರ್ದಯುತ ಭೇಟಿ, ಜೊತೆಗೆ ಬೊಮ್ಮಾಯಿ ಅವರಿಗೆ ಶಾಮನೂರು ಶಿವಶಂಕರಪ್ಪ ದೂರದ ಸಂಬಂಧಿ, ಹೀಗಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ, ಇದರಲ್ಲಿ ಅಚ್ಚರಿ ಏನಿಲ್ಲ ಎಂದು ಯಡಿಯೂರಪ್ಪ ಆಪ್ತರೊಬ್ಬರು ತಿಳಿಸಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಕೆಲವು ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರೊಂದಿಗೆ ರಹಸ್ಯ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಹೇಳಿರುವ ಸಿ.ಟಿ.ರವಿ, ಸುನೀಲ್ ಕುಮಾರ್ ಮತ್ತು ಪ್ರತಾಪ್ ಸಿಂಹ  ಅವರ ಆರೋಪಗಳಿಂದ ರಕ್ಷಿಸಿಕೊಳ್ಳಲು ಈ  ರೀತಿ ಹೇಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಬಿಜೆಪಿ ಸೋಲಿಗೆ ಕಾರಣಗಳ ಬಗ್ಗೆ ಪಕ್ಷದೊಳಗೆ ಬಹಿರಂಗವಾಗಿ ಚರ್ಚೆಯಾಗುತ್ತಿದೆ. ಚುನಾವಣೆ ಮುಗಿದ ನಾಲ್ಕು ವಾರಗಳ ನಂತರ ಇದನ್ನು ಏಕೆ ಎತ್ತಲಾಗುತ್ತಿದೆ ಎಂದು ಪ್ರಶ್ನಿಸಿದರು.

ಸ್ನೇಹವೇ ಬೇರೆ, ರಾಜಕೀಯ ಸಂಬಂಧಗಳೇ ಬೇರೆ, ನನ್ನ ರಾಜಕೀಯ ನಿಲುವಿನಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಶಾಮನೂರು ಭೇಟಿ ನಂತರ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ಬೊಮ್ಮಾಯಿ ಉತ್ತಮ ನಾಯಕ, ಆದರೆ ಚುನಾವಣೆ ಮುಗಿದು ಒಂದು ತಿಂಗಳಾದರೂ ಇದುವರೆಗೆ ಯಾವುದೇ ನಿರ್ಧಾರವಾಗಿಲ್ಲ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಸೋಲಿನ ಅವಮಾನವನ್ನು ಯಾರ ತಲೆ ಮೇಲೆ ಗೂಬೆ ಕೂರಿಸುವುದು, ಯಾರನ್ನು ಹರಕೆಯ ಕುರಿ ಮಾಡುವುದು ಎಂದು ಯೋಚಿಸುತ್ತಿರುವಂತೆ ಕಾಣುತ್ತಿದೆ ಎಂದು ಆರೋಪಿಸಿದ್ದಾರೆ.

ಕಾರ್ಕಳದ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು ಯುವಕರೊಬ್ಬರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಬೇಕು ಎಂಬ ಹೇಳಿಕೆ ಮತ್ತು ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಮಾತುಗಳು ಸಂತೋಷ್ ಅವರಿಂದ ಬಂದ ಮಾತುಗಳಾಗಿವೆ ಎಂದು ಬಿಜೆಪಿ ಮುಖಂಡ ಹಾಗೂ ಯಡಿಯೂರಪ್ಪ ಆಪ್ತರೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ