ಡಿಕೆಶಿ, ಎಂಬಿ ಪಾಟೀಲ್ ಮತ್ತು ಸಿದ್ದರಾಮಯ್ಯ 
ರಾಜಕೀಯ

ಪಾಟೀಲ್ ಹೆಗಲ ಮೇಲೆ ಬಂದೂಕು ಇಟ್ಟು ಡಿಕೆ ಎದೆಗೆ ಗುಂಡು: ಒಕ್ಕಲಿಗರ ಮುಗಿಸುವ ಸೂಚನೆಯೇ ಕಮಂಗಿ ಕಾಂಗ್ರೆಸ್ ನವರೇ?

ಎಂಬಿ ಪಾಟೀಲರ ಹೆಗಲ ಮೇಲೆ ಬಂದೂಕು ಇಟ್ಟು ಡಿಕೆ ಎದೆಗೆ ಗುಂಡಿಟ್ಟ ಸಿದ್ದರಾಮಯ್ಯ ಒಕ್ಕಲಿಗರನ್ನು ಮುಗಿಸಲು ಹೊರಟಿರುವ ಸೂಚನೆಯೇ ಕಮಂಗಿ ಕಾಂಗ್ರೆಸ್ ನವರೇ  ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

ಮೈಸೂರು: ರಾಜಕೀಯ ಜೀವನದಲ್ಲಿ ಮುಂದೆ ಬರಲು ಸಹಕರಿಸಿದ ಹೆಚ್.ಡಿ. ದೇವೇಗೌಡರನ್ನ ಅಗೌರವವಾಗಿ ಮಾತನಾಡುವುದು ನಿಮ್ಮ ಪ್ರಬುದ್ಧತೆ ಅನ್ನುವುದಾದರೆ ಅದು ನನಗೆ ಬೇಡ ಸರ್ ಎಂದು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಎಂಬಿ ಪಾಟೀಲರ ಹೆಗಲ ಮೇಲೆ ಬಂದೂಕು ಇಟ್ಟು ಡಿಕೆ ಎದೆಗೆ ಗುಂಡಿಟ್ಟ ಸಿದ್ದರಾಮಯ್ಯ ಒಕ್ಕಲಿಗರನ್ನು ಮುಗಿಸಲು ಹೊರಟಿರುವ ಸೂಚನೆಯೇ ಕಮಂಗಿ ಕಾಂಗ್ರೆಸ್ ನವರೇ  ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನನ್ನನ್ನು ಎಳಸು ಎಂದ್ರೂ ಬೇಸರವಿಲ್ಲ, ನನ್ನನ್ನ ಚೈಲ್ಡ್ ಅಂತಾನೆ ಕರೆಯಿರಿ ಬೇಜಾರು ಇಲ್ಲ, ಆದರೆ ರಾಜ್ಯದಲ್ಲಿ ಸಂಪನ್ಮೂಲ ಕ್ರೋಢಿಕರಣ ಮಾಡುವುದು ಹೇಗೆ ತಿಳಿಸಿ? ಪ್ರತಾಪ್ ಸಿಂಹ ಹರಿಹಾಯ್ದರು.

ಅಕ್ಕಿ ಕೊಡುವ ಘೋಷಣೆ ಮಾಡುವ ಮುನ್ನ ಮೋದಿ ಜಿ ಅವರನ್ನ ಕೇಳಿದ್ರಾ?. ಕಾಂಗ್ರೆಸ್ ಅಧಿಕಾರಕ್ಕೆ ತರಲು ಡಿಕೆಶಿ ಪ್ರಮುಖ ಪಾತ್ರ ವಹಿಸಿದ್ದರು. ಆದ್ರೆ ಡಿಕೆ ವಿರುದ್ಧ ಎಂ.ಬಿ. ಪಾಟೀಲ್ ರನ್ನ ಎತ್ತಿ ಕಟ್ಟಿದ್ದೀರಿ. ಇದನ್ನೆಲ್ಲಾ ಮೈಚುರಿಟಿ ಎನ್ನುವುದಾದ್ರೆ ಇದ್ಯಾವ್ಯೂದು ನಮಗೆ ಬೇಡ ಸರ್ ಎಂದು ಪ್ರತಾಪ್ ಸಿಂಹ ಸಿಎಂ ಸಿದ್ದರಾಮಯ್ಯ ಅವರಿಗೆ ಕುಟುಕಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನ ಪ್ರತಾಪ್ ಸಿಂಹ ಹಾಡಿ ಹೊಗಳಿದ್ದಾರೆ. ಡಿಸೈನ್‌ಬಾಕ್ಸ್ ಏಜೆನ್ಸಿ ಮೂಲಕ ಗ್ಯಾರಂಟಿ ಯೋಜನೆ ರೂಪಿಸಿದವರು ಡಿ.ಕೆ.ಶಿವಕುಮಾರ್‌, ಡಿಕೆಶಿ ಒಬ್ಬ ಫೈಟರ್. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಡಿಕೆಶಿ ಅವರ ಹೋರಾಟ ಪ್ರಮುಖ ಕಾರಣವಾಗಿದೆ. ಅವರು ನಮ್ಮ ಎದುರಾಳಿ ಇರಬಹುದು. ನಾನು ರಾಜಕೀಯ ಕಾರಣಕ್ಕೆ ಈ ರೀತಿ ಹೇಳುತ್ತಿಲ್ಲ. ಡಿಕೆಶಿ ಅವರು ಮುಖ್ಯಮಂತ್ರಿ ಆಗಬೇಕಿತ್ತು ಅಂತ ಹೇಳಿದ್ದಾರೆ.

ಸೀನಿಯರ್ ರಾಜಕಾರಣಿ ಆಗಿರುವ ನೀವು ಜಿ ಪರಮೇಶ್ವರ್‌ರನ್ನು ಮುಗಿಸಿ ಸಿಎಂ ಆದರಲ್ಲ. ಆ ರೀತಿಯ ಪ್ರಬುದ್ಧತೆ ನನಗೆ ಬೇಕಿಲ್ಲ. ರಾಜಕೀಯ ಜೀವನದಲ್ಲಿ ಮುಂದೆ ಬರಲು ಸಹಕರಿಸಿದ ಹೆಚ್ ಡಿ ದೇವೇಗೌಡರನ್ನ ಅಗೌರವವಾಗಿ ಮಾತನಾಡುವುದು ನಿಮ್ಮ ಪ್ರಬುದ್ಧತೆ ಅನ್ನುವುದಾದರೆ ಅದು ನನಗೆ ಬೇಡ. ನಿಮ್ಮ ಮಕ್ಕಳು ಮತ್ತು ಮೊಮ್ಮಕ್ಕಳ ಭವಿಷ್ಯ ರೂಪಿಸಲು ಮುಂದಾಗುವುದು ಪ್ರಬುದ್ಧತೆಯಾದರೆ ಅಂತಹ ಪ್ರಬುದ್ಧತೆ ನನಗೆ ಬೇಡ ಎಂದು ಸಿಂಹ ಕಿಡಿಕಾರಿದ್ದಾರೆ. ವಿಶ್ವದ ಶ್ರೇಷ್ಠ ಅರ್ಥ ಶಾಸ್ತ್ರಜ್ಞ ಸಿದ್ದರಾಮಯ್ಯ ಅವರೇ ಗ್ಯಾರಂಟಿಗೆ ಬೇಕಾದ 59 ಸಾವಿರ ಕೋಟಿ ಹಣ ಎಲ್ಲಿಂದ ತರುತ್ತೀರಾ ಹೇಳಿ ಎಂದು  ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT