ಪುದುಚೆರಿಯಲ್ಲಿ ದಿನೇಶ್ ಗುಂಡೂರಾವ್ 
ರಾಜಕೀಯ

ದಕ್ಷಿಣ ಭಾರತವನ್ನು ಬಿಜೆಪಿ ಮುಕ್ತಗೊಳಿಸಲು ಪುದುಚೇರಿಯಿಂದ ಕೇಸರಿ ಪಕ್ಷವನ್ನು ಹೊರಹಾಕಿ: ದಿನೇಶ್ ಗುಂಡೂರಾವ್

ದಕ್ಷಿಣ ಭಾರತವನ್ನು ಬಿಜೆಪಿ ಮುಕ್ತಗೊಳಿಸಲು ಪುದುಚೇರಿಯಿಂದ ಬಿಜೆಪಿಯನ್ನು ಕಿತ್ತೊಗೆಯಬೇಕು, ಆ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರು ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಪುದುಚೆರಿ: ದಕ್ಷಿಣ ಭಾರತವನ್ನು ಬಿಜೆಪಿ ಮುಕ್ತಗೊಳಿಸಲು ಪುದುಚೇರಿಯಿಂದ ಬಿಜೆಪಿಯನ್ನು ಕಿತ್ತೊಗೆಯಬೇಕು, ಆ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರು ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಪುದುಚೇರಿ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಮುಖ್ಯಸ್ಥ ವಿ ವೈತಿಲಿಂಗಂ ಅವರು ಸೋಮವಾರ ಅಧಿಕಾರ ಸ್ವೀಕರಿಸಿದ ನೆನಪಿಗಾಗಿ ಆಯೋಜಿಸಿದ್ದ ಸಮಾರಂಭದಲ್ಲಿ  ಪಾಲ್ಗೋಂಡಿದ್ದ ದಿನೇಶ್ ಗುಂಡೂರಾವ್ ಮಾತನಾಡಿದರು.

ದಿನೇಶ್ ಗುಂಡೂರಾವ್ ತಮಿಳುನಾಡು ಮತ್ತು ಪುದುಚೇರಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಉಸ್ತುವಾರಿ ಆಗಿದ್ದಾರೆ.  ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿಯ ಸೋಲು ದಕ್ಷಿಣ ಭಾರತದ ರಾಜ್ಯಗಳಿಂದ ಪಕ್ಷವನ್ನು ಹೊರಹಾಕಿದೆ.  ಪುದುಚೇರಿ ಮಾತ್ರ ಬಿಜೆಪಿ ಆಡಳಿತ ಇರುವ ರಾಜ್ಯವಾಗಿ ಉಳಿದಿದೆ ಎಂದು ಹೇಳಿದರು.

ಪಕ್ಷಾತೀತವಾಗಿ ಭಿನ್ನಾಭಿಪ್ರಾಯ ಬದಿಗೊತ್ತಿ ಒಗ್ಗಟ್ಟಾಗಿ ಕೆಲಸ ಮಾಡಿದರೆ ಬಿಜೆಪಿಯನ್ನು ಸೋಲಿಸಬಹುದು ಎಂದು ಕರ್ನಾಟಕದ ಉದಾಹರಣೆ ನೀಡಿದರು. "ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಶಕ್ತಿಯಿಂದ ಏನನ್ನೂ ಮಾಡಲಾಗಲಿಲ್ಲ. ಕಾಂಗ್ರೆಸ್ ಬಹುಮತದೊಂದಿಗೆ ಗೆದ್ದಿದೆ, ಸಣ್ಣ ತಪ್ಪುಗಳಿಲ್ಲದಿದ್ದರೆ 150 ಸೀಟುಗಳನ್ನು ದಾಟಬಹುದಿತ್ತು ಎಂದು ಹೇಳಿದರು.

ಮುಂಬರುವ ಸಂಸತ್ ಚುನಾವಣೆಯು ರಾಹುಲ್ ಗಾಂಧಿ ಪ್ರಧಾನಿಯಾಗುವುದನ್ನು ಖಚಿತಪಡಿಸಿಕೊಳ್ಳುವ ಮೂಲಕ ಭಾರತವನ್ನು ಬಿಜೆಪಿಯಿಂದ ಉಳಿಸುವ ಮೊದಲ ಹೆಜ್ಜೆಯಾಗಿದೆ ಎಂದು ರಾವ್ ಹೇಳಿದರು.

ಬಿಜೆಪಿಯ ಆರ್ಥಿಕ ಮತ್ತು ಸಂಘಟನಾತ್ಮಕ ಸಂಪನ್ಮೂಲಗಳಿಗೆ ಕಾಂಗ್ರೆಸ್ ಸಿದ್ಧವಾಗಬೇಕಾದ ಅಗತ್ಯವನ್ನು ಒತ್ತಿ ಹೇಳಿದ ಅವರು, 'ಬಿಜೆಪಿ ಹಣ ಮತ್ತು ಯಂತ್ರಗಳೊಂದಿಗೆ ಬರಲಿದೆ, ಆದರೆ ಅದನ್ನು ಎದುರಿಸಲು ಕಾಂಗ್ರೆಸ್ ಸಿದ್ಧವಾಗಬೇಕಿದೆ' ಎಂದರು. ಮಾಜಿ ಸಿಎಂ, ಸಚಿವ, ಸಂಸದರಾಗಿ ಸೇವೆ ಸಲ್ಲಿಸಿರುವ ವೈತಿಲಿಂಗಂ ಅವರನ್ನು ಶ್ಲಾಘಿಸಿದ ಅವರು ಪುದುಚೇರಿ ಲೋಕಸಭಾ ಸ್ಥಾನವನ್ನು ಪಡೆಯಲು ಎಲ್ಲಾ ಪಕ್ಷದ ಮುಖಂಡರು ಶ್ರಮಿಸುವಂತೆ ಕರೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!