ರಮೇಶ್ ಜಿಗಜಿಣಗಿ 
ರಾಜಕೀಯ

ಅಂದು ಲುಂಗಿ ಏರಿಸಿ 10 ಕೆಜಿ ಅಕ್ಕಿ ಕೊಡ್ತೀವಿ ಅಂದ ಸಿದ್ದರಾಮಯ್ಯ ಇಂದು ಜನರಿಗೆ ಮೋಸ ಮಾಡ್ತಿದ್ದಾರೆ: ರಮೇಶ್ ಜಿಗಜಿಣಗಿ

ಕೇಂದ್ರ ಕೊಡ್ತಿದ್ದ 5 ಕೆ.ಜಿ ಅಕ್ಕಿಯನ್ನು ಕಾಂಗ್ರೆಸ್ ನವರು ಪ್ರಸ್ತಾಪ ಮಾಡಲೇ ಇಲ್ಲ ಎಂದು ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆ ಬಗ್ಗೆ ಸಂಸದ ರಮೇಶ್ ಜಿಗಜಿಣಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯಪುರ: ಅಂದು ಲುಂಗಿ ಏರಿಸಿ 10 ಕೆಜಿ ಅಕ್ಕಿ ಕೊಡ್ತೀವಿ ಅಂತ ಘೋಷಣೆ ಮಾಡಿದ್ದ ಸಿದ್ದರಾಮಯ್ಯ ಇಂದು ಏಕೆ ಮಾತು ತಪ್ಪುತ್ತಿದ್ದಾರೆ. ಸಿದ್ದರಾಮಣ್ಣ ನನ್ನ ಜೊತೆ ಇದ್ದವನು.ಅವ್ನಿಗೆ ಅಷ್ಟೊಂದು ಯೋಚನೆ ಬೇಡವೇ.  ಕೇಂದ್ರ ಕೊಡ್ತಿದ್ದ 5 ಕೆ.ಜಿ ಅಕ್ಕಿಯನ್ನು ಕಾಂಗ್ರೆಸ್ ನವರು ಪ್ರಸ್ತಾಪ ಮಾಡಲೇ ಇಲ್ಲ ಎಂದು ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆ ಬಗ್ಗೆ ಸಂಸದ ರಮೇಶ್ ಜಿಗಜಿಣಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ಅಕ್ಕಿ ಬಿಟ್ಟು ತಾವೇ 10 ಕೆ.ಜಿ ಕೊಡ್ತೇವೆ ಎನ್ನೋದನ್ನು ಸ್ಪಷ್ಟವಾಗಿ ಹೇಳಿಲ್ಲ, ಇದು ಸಿದ್ದರಾಮಯ್ಯಗಾದ್ರು ತಿಳಿಬಾರ್ದಾ. ಜನರಿಗೆ ಮೋಸ ಮಾಡಿದ್ದಾರೆ. ಎಲೆಕ್ಷನ್‌ನಲ್ಲಿ ಜನರ ಎದುರು ಸ್ಪಷ್ಟತೆ ನೀಡಿಯೇ ಇಲ್ಲ,  ಮುಚ್ಚಿಟ್ಟು ಮೋಸ ಮಾಡಿದ್ದಾರೆ. ಕೇಂದ್ರ 5 ಕೆ.ಜಿ ಕೊಡುತ್ತೆ ಅಂತಾ ಹೇಳಿದ್ರೆ ಮರ್ಯಾದೆ ಹೋಗುತ್ತಿತ್ತಾ ಎಂದು ಪ್ರಶ್ನಿಸಿದರು.

ನಮಗೆ ಬಡವರೂ ಬೇಕು: ಬಿಜೆಪಿಯವರಿಗೇನು ಬಡವರ ಬಗ್ಗೆ ಕಾಳಜಿಯಿಲ್ಲವೇ, ಬಡವರು ನಮಗೂ ಓಟು ಹಾಕಿದ್ದಾರೆ, ಊಟ ಹಾಕಿದ್ದಾರೆ. ಕೋವಿಡ್ ಸಮಯದಲ್ಲಿ ಕೇಂದ್ರದ ಮೋದಿ ಸರ್ಕಾರ ತಿಂಗಳುಗಟ್ಟಲೆ ಉಚಿತವಾಗಿ ಬಡವರಿಗೆ ಅಕ್ಕಿ ಕೊಟ್ಟಿದೆ. ಈಗ ಕಾಂಗ್ರೆಸ್ ನವರು ಕೇಂದ್ರದ ಮೋದಿ ಸರ್ಕಾರ ನಮಗೆ ಅಕ್ಕಿ ಕೊಡುತ್ತಿಲ್ಲ ಎಂದು ಆರೋಪಿಸುವುದು ಎಷ್ಟು ಸರಿ ಎಂದು ಕೇಳಿದರು.

ಕಾಂಗ್ರೆಸ್ ನವರೇ ಈಗ ಹುನ್ನಾರ ನಡೆಸುತ್ತಿದ್ದಾರೆ. 10 ಕೆ.ಜಿ ಅಕ್ಕಿ ಘೋಷಣೆ ಮಾಡೋವಾಗಲೇ ಇದು ನಡೆದಿದೆ. 10 ಕೆ.ಜಿ ಅಕ್ಕಿ ಕೊಡೊಕೆ ನಾವೇನು ಬೇಡ ಅಂದಿಲ್ಲ. ನಮ್ಮದು ಸೇರಿ 10 ಕೆ.ಜಿ ಅಂತಾದ್ರು ಹೇಳಲಿ ಎಂದರು. ಇಲ್ಲಾ ನಾವು ಕೊಡೊದು ಬಿಟ್ಟು 10 ಕೆ.ಜಿ ಅಂತಾನಾದ್ರು ಹೇಳಿ, ಜನರಿಗೆ ಕ್ಲಿಯರ್ ಆಗುತ್ತೆ. ಕಣ್ಣಿಗೆ ಮಣ್ಣು ಎರಿಚೊ ಕೆಲಸ ಮಾಡಬೇಡಿ ಎಂದರು.

ಕೇಂದ್ರ ಸರ್ಕಾರ ಸರ್ವರ್ ಹ್ಯಾಕ್ ಮಾಡಿದೆ ಎನ್ನುವ ಸಚಿವ ಸತೀಶ್ ಜಾರಕಿಹೊಳಿ ಆರೋಪಕ್ಕೆ ಕಿಡಿಕಾರಿದ ಅವರು, ಸಚಿವ ಸತೀಶ್ ಜಾರಕಿಹೊಳಿ ಬುದ್ಧಿಯೇ ಅಷ್ಟೇ ಇದೆ. ಈ ಆರೋಪದಿಂದ ಯಾವುದೇ ಉಪಯೋಗ ಇಲ್ಲ ಎಂದರು. ನಮ್ಮ ಮೇಲೆ ನೀವು, ನಿಮ್ಮ ಮೇಲೆ ನಾವು ಗೂಬೆ ಕೂರಿಸೋದು ಸರಿಯಲ್ಲ. ಸರ್ವರ್ ಡೌನ್ ಆಗೋಕೆ ನಮ್ಮವರು, ನಮ್ಮ ಕೇಂದ್ರ ಸರ್ಕಾರ ಕಾರಣ ಅಲ್ಲಾ ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT