ಸದಾನಂದಗೌಡ 
ರಾಜಕೀಯ

ಜುಲೈ 3ರ ಒಳಗೆ ಪ್ರತಿಪಕ್ಷ ನಾಯಕನ ಆಯ್ಕೆ: ಮಾಜಿ ಸಿಎಂ ಸದಾನಂದಗೌಡ

ಬಿಜೆಪಿಯಲ್ಲಿ ಕೊನೆಗೂ ಪ್ರತಿಪಕ್ಷ ನಾಯಕನ ಆಯ್ಕೆಗೆ ಮುಹೂರ್ತ ಕೂಡಿಬಂದಿದ್ದು, ಜುಲೈ 3ರ ಒಳಗೆ ವಿರೋಧಪಕ್ಷ ನಾಯಕನನ್ನು ಆಯ್ಕೆ ಮಾಡಲಾಗುವುದು ಎಂದು ಮಾಜಿ ಸಿಎಂ ಡಿವಿ ಸದಾನಂದಗೌಡ ಅವರು ಗುರುವಾರ...

ಚಾಮರಾಜನಗರ: ಬಿಜೆಪಿಯಲ್ಲಿ ಕೊನೆಗೂ ಪ್ರತಿಪಕ್ಷ ನಾಯಕನ ಆಯ್ಕೆಗೆ ಮುಹೂರ್ತ ಕೂಡಿಬಂದಿದ್ದು, ಜುಲೈ 3ರ ಒಳಗೆ ವಿರೋಧಪಕ್ಷ ನಾಯಕನನ್ನು ಆಯ್ಕೆ ಮಾಡಲಾಗುವುದು ಎಂದು ಮಾಜಿ ಸಿಎಂ ಡಿವಿ ಸದಾನಂದಗೌಡ ಅವರು ಗುರುವಾರ ಹೇಳಿದ್ದಾರೆ.

ಇಂದು ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡ ಅವರು, ವಿಧಾನಸಭೆಯಲ್ಲಿ ಆಡಳಿತ ಪಕ್ಷಕ್ಕೆ ಸವಾಲು ಹಾಕುವ ವ್ಯಕ್ತಿ ಬೇಕು. ಅಂತಹ ಸೂಕ್ತ ನಾಯಕನನ್ನು ಜುಲೈ 3ರ ಒಳಗೆ ಆಯ್ಕೆ ಮಾಡಲಾಗುವುದು ಎಂದರು.

ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್​ ಅವರಿಗೆ ಸವಾಲು ಹಾಕುವ ವ್ಯಕ್ತಿ ಬೇಕು. ಅಂತಹ ಸೂಕ್ತ ನಾಯಕನನ್ನು ನಾವು ಕೊಡುತ್ತೇವೆ. ಅಳೆದು ತೂಗಿ ರಾಷ್ಟ್ರೀಯ ನಾಯಕರು ವಿಪಕ್ಷ ನಾಯಕನನ್ನು ಆಯ್ಕೆ ಮಾಡುತ್ತಾರೆ ಎಂದರು.

ಜುಲೈ 3ರಿಂದ 10 ದಿನ ವಿಧಾನಸಭೆ ಅಧಿವೇಶನ ನಡೆಯಲಿದ್ದು, ಜುಲೈ 7ರಂದು ಸಿದ್ದರಾಮಯ್ಯನವರು ಈ ಅವಧಿಯ ಮೊದಲ ಬಜೆಟ್ ಮಂಡಿಸಲಿದ್ದಾರೆ. ಹೀಗಾಗಿ ಅಧಿವೇಶನ ಆರಂಭಕ್ಕೂ ಮುನ್ನ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿ ಹೈಕಮಾಂಡ್​ ಮುಂದಾಗಿದೆ. ಹೀಗಾಗಿ ಯಾರನ್ನು ಮಾಡಿದರೆ ಸೂಕ್ತ ಎಂದು ಬೇರೆ ಬೇರೆ ಮಾರ್ಗಗಳಲ್ಲಿ ಚಿಂತನೆ ನಡೆಸಿದೆ. ಅಲ್ಲದೇ ಪಕ್ಷದ ಇತರೆ ನಾಯಕರುಗಳ ಅಭಿಪ್ರಾಯ ಸಂಗ್ರಹಿಸುತ್ತಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT