ಜಗದೀಶ್ ಶೆಟ್ಟರ್ - ಸಚಿವ ಬೋಸರಾಜು - ತಿಪ್ಪಣ್ಣ ಕಮಕನೂರು 
ರಾಜಕೀಯ

ವಿಧಾನ ಪರಿಷತ್ ಚುನಾವಣೆ: ಜಗದೀಶ್ ಶೆಟ್ಟರ್ ಸೇರಿ ಕಾಂಗ್ರೆಸ್ ನ ಮೂವರೂ ಅವಿರೋಧ ಆಯ್ಕೆ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹುಬ್ಬಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರು ವಿಧಾನ ಪರಿಷತ್‌ ಸದಸ್ಯರಾಗಿ...

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹುಬ್ಬಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರು ವಿಧಾನ ಪರಿಷತ್‌ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

ವಿಧಾನ ಪರಿಷತ್ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಮೂವರು ಅಭ್ಯರ್ಥಿಗಳಾದ ಜಗದೀಶ್ ಶೆಟ್ಟರ್, ತಿಪ್ಪಣ್ಣ ಕಮಕನೂರು ಹಾಗೂ ಸಚಿವ ಬೋಸರಾಜು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ವಿಶಾಲಾಕ್ಷಿ ಅವರು ಶುಕ್ರವಾರ ಅಧಿಕೃತವಾಗಿ ಘೋಷಿಸಿದ್ದಾರೆ.

ಲಕ್ಷ್ಮಣ ಸವದಿ, ಆರ್ ಶಂಕರ್ ಹಾಗೂ ಬಾಬುರಾವ್ ಚಿಂಚನಸೂರ್ ಅವರ ರಾಜೀನಾಮೆಯಿಂದ ತೆರವಾದ ಈ ಮೂರು ಸ್ಥಾನಗಳಿಗೆ ಚುನಾವಣಾ ಆಯೋಗ ಉಪ ಚುನಾವಣೆ ಘೋಷಿಸಿತ್ತು.

ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯಬೇಕಿದ್ದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 20 ಕೊನೆಯ ದಿನವಾಗಿತ್ತು ಮತ್ತು ನಾಮಪತ್ರ ವಾಪಸ್ ಪಡೆಯಲು ಇಂದು(ಜೂನ್ 23) ಕೊನೆಯ ದಿನವಾಗಿತ್ತು. ಕಣದಲ್ಲಿ ಮೂವರೇ ಇದ್ದ ಕಾರಣದಿಂದ ಈ ಮೂವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT