ಸಂಗ್ರಹ ಚಿತ್ರ 
ರಾಜಕೀಯ

ದ್ವೇಷ ರಾಜಕಾರಣ ಮಾಡುತ್ತಿರುವುದು ಸಿದ್ದರಾಮಯ್ಯ, ಕೇಂದ್ರ ಸರ್ಕಾರವಲ್ಲ: ಬಿಜೆಪಿ

ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದಕ್ಕೆ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪದ ವಿರುದ್ಧ ರಾಜ್ಯ ಬಿಜೆಪಿ ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದೆ.

ಕಲಬುರಗಿ: ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದಕ್ಕೆ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪದ ವಿರುದ್ಧ ರಾಜ್ಯ ಬಿಜೆಪಿ ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ರಾಜ್ಯದಲ್ಲಿ ದ್ವೆಷದ ರಾಜಕಾರಣ ಪ್ರಾರಂಭ ಮಾಡಿದ್ದೆ ಮುಖ್ಯಮಂತ್ರಿ ಸಿದ್ದರಾಮಯ್ಯ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದ ಪಠ್ಯಪುಸ್ತಕಗಳಲ್ಲಿನ ಕೆಲವು ಭಾಗಗಳನ್ನು ಬದಲಾಯಿಸಿತು. ‘ಗೋಹತ್ಯೆ ತಡೆ ಕಾಯ್ದೆ ಮತ್ತು ಮತಾಂತರ ತಡೆ ಕಾಯ್ದೆಯನ್ನು ಹಿಂಪಡೆಯುವುದಾಗಿ ಘೋಷಿಸಿತು. ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿ ಬಂಧಿಸಲು ಆರಂಭಿಸಿತು. ದ್ವೇಷದ ರಾಜಕಾರಣ ಆರಂಭಿಸಿದ್ದು ಸಿದ್ದರಾಮಯ್ಯ ಅವರೇ ಹೊರತು ಹೊರತು ಕೇಂದ್ರ ಸರ್ಕಾರವಲ್ಲ ಎಂದು ಕಿಡಿಕಾರಿದರು.

ಚುನಾವಣೆ ವೇಳೆ ಭರವಸೆ ನೀಡಿದಂತೆ ಕಾಂಗ್ರೆಸ್ ಸರ್ಕಾರ ಬಡವರಿಗೆ ಪ್ರತೀ ತಿಂಗಳು 10 ಕೆಜಿ ಅಕ್ಕಿಯನ್ನು ಮೊದಲು ನೀಡಲಿ. ನಂತರ ಕೇಂದ್ರ ಸರ್ಕಾರ ತನ್ನ ಪಾಲಿನ 5 ಕೆಜಿ ಅಕ್ಕಿಯನ್ನು ನೀಡಲಿದೆ ಎಂದು ಸವಾಲು ಹಾಕಿದರು.

ಬಳಿಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸ್ಥಾನ ಆಯ್ಕೆ ವಿಚಾರ ಕುರಿತು ಮಾತನಾಡಿದ ಕಟೀಲ್, ವಿಧಾನಸಭೆ ಅಧಿವೇಶನ ಆರಂಭವಾಗುವಷ್ಟರಲ್ಲಿ ಪ್ರತಿಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ. ಅಧಿವೇಶನ ಆರಂಭವಾಗಲಿ, ಸೂಕ್ತ ಸಮಯದಲ್ಲಿ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡುತ್ತೇವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT