ಸೋಮಣ್ಣ 
ರಾಜಕೀಯ

ಸೋಮಣ್ಣ ಸೋಲಿಗೆ ಕಾಂಗ್ರೆಸ್‌ನ ಗ್ಯಾರಂಟಿಗಳು ಕಾರಣವಲ್ಲ, ಪಕ್ಷದ ನಾಯಕರೇ ಕಾರಣ!

ಕಾಂಗ್ರೆಸ್‌ ಗ್ಯಾರಂಟಿಗಳಿಂದ ವಿ ಸೋಮಣ್ಣ ಸೋತಿಲ್ಲ. ಬದಲಾಗಿ ಪಕ್ಷದ ನಾಯಕರಿಂದಲೇ ಸೋಲು ಅನುಭವಿಸಿದರು ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

ಚಾಮರಾಜನಗರ: ಕಾಂಗ್ರೆಸ್‌ ಗ್ಯಾರಂಟಿಗಳಿಂದ ವಿ ಸೋಮಣ್ಣ ಸೋತಿಲ್ಲ. ಬದಲಾಗಿ ಪಕ್ಷದ ನಾಯಕರಿಂದಲೇ ಸೋಲು ಅನುಭವಿಸಿದರು ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

ಚಾಮರಾಜನಗರದ ಡಾ ಬಿಆರ್ ಅಂಬೇಡ್ಕರ್ ಭವನದಲ್ಲಿ ಗುರುವಾರ ನಡೆದ ಬಿಜೆಪಿಯ ಸೋಲಿನ ಪರಾಮರ್ಶೆ ಸಭೆಯಲ್ಲಿ ಬಿಜೆಪಿ ನಾಯಕರ ವಿರುದ್ಧವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಸಭೆಯ ಆರಂಭದಲ್ಲಿಯೇ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದರು. ಮಾಜಿ ಸಚಿವ ವಿ ಸೋಮಣ್ಣ ಅನುಯಾಯಿಗಳು ಸಭೆಯಲ್ಲಿ ತಮಗೂ ಮಾತನಾಡಲು ಅವಕಾಶ ಕೊಡಬೇಕು ಎಂದು ಆಗ್ರಹಿಸಿದರು.

ಚಾಮರಾಜನಗರದಲ್ಲಿ ಸತತ ಮೂರನೇ ಬಾರಿ ಬಿಜೆಪಿ ಸೋತಿದೆ. ಮೊದಲ ಬಾರಿ ಸೋತಾಗಾಲೂ ಹೀಗೆ ಹೇಳಿದಿರಿ, ಎರಡನೇ ಬಾರಿ ಸೋತಾಗಲೂ ಪರಾಮರ್ಶೆ ಎಂದು ಹೇಳಿದ್ದಿರಿ. ಈಗಲೂ ಅದನ್ನೇ ಮಾಡುತ್ತೀದ್ದೀರಿ? ಎಂದು ಕಾರ್ಯಕರ್ತರು ಕಿಡಿಕಾರಿದರು.

ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿಗಳಿಂದ ಸೋಮಣ್ಣ ಸೋತಿಲ್ಲ, ಪಕ್ಷದ ನಾಯಕರಿಂದಲೇ ಅವರು ಚಾಮರಾಜನಗರದಲ್ಲಿ ಸೋತದ್ದು ಎಂದು ಬೇಸರ ಹೊರಹಾಕಿದರು.

ಈ ವೇಳೆ ಮಾಜಿ ಸಿಎಂ ಡಿವಿ ಸದಾನಂದಗೌಡ ಅವರು ಮಾತನಾಡಿ, ಸೋಮಣ್ಣ ಅವರು ಎರಡೂ ಸ್ಥಾನಗಳಿಂದ ಸೋತಿದ್ದರಿಂದ ನೋವಾಗಿದೆ. ಇದರಿಂದ ಸೋಮಣ್ಣ ಕೋಪಗೊಂಡಿಲ್ಲ, ಆದರೆ, ನೊಂದಿದ್ದಾರೆ. ನಾನು ಕೋರ್ ಕಮಿಟಿಯಲ್ಲಿದ್ದೇನೆ, ನಿಮ್ಮ ಅಭಿಪ್ರಾಯಗಳನ್ನು ನಾಯಕರಿಗೆ ಮುಟ್ಟಿಸುತ್ತೇನೆ, ಮುಂದೆ ಈ ರೀತಿ ಆಗಬಾರದು ಎಂದು ಒತ್ತಾಯಿಸುತ್ತೇನೆ ಎಂದು ಭರವಸೆಯನ್ನು ನೀಡಿದರು. ಸಭೆಗೆ ಪರಾಜಿತ ಅಭ್ಯರ್ಥಿ ಹಾಗೂ ಮಾಜಿ ಸಚಿವ ವಿ ಸೋಮಣ್ಣ ಗೈರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT