ಸೋಮಣ್ಣ 
ರಾಜಕೀಯ

ಸೋಮಣ್ಣ ಸೋಲಿಗೆ ಕಾಂಗ್ರೆಸ್‌ನ ಗ್ಯಾರಂಟಿಗಳು ಕಾರಣವಲ್ಲ, ಪಕ್ಷದ ನಾಯಕರೇ ಕಾರಣ!

ಕಾಂಗ್ರೆಸ್‌ ಗ್ಯಾರಂಟಿಗಳಿಂದ ವಿ ಸೋಮಣ್ಣ ಸೋತಿಲ್ಲ. ಬದಲಾಗಿ ಪಕ್ಷದ ನಾಯಕರಿಂದಲೇ ಸೋಲು ಅನುಭವಿಸಿದರು ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

ಚಾಮರಾಜನಗರ: ಕಾಂಗ್ರೆಸ್‌ ಗ್ಯಾರಂಟಿಗಳಿಂದ ವಿ ಸೋಮಣ್ಣ ಸೋತಿಲ್ಲ. ಬದಲಾಗಿ ಪಕ್ಷದ ನಾಯಕರಿಂದಲೇ ಸೋಲು ಅನುಭವಿಸಿದರು ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

ಚಾಮರಾಜನಗರದ ಡಾ ಬಿಆರ್ ಅಂಬೇಡ್ಕರ್ ಭವನದಲ್ಲಿ ಗುರುವಾರ ನಡೆದ ಬಿಜೆಪಿಯ ಸೋಲಿನ ಪರಾಮರ್ಶೆ ಸಭೆಯಲ್ಲಿ ಬಿಜೆಪಿ ನಾಯಕರ ವಿರುದ್ಧವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಸಭೆಯ ಆರಂಭದಲ್ಲಿಯೇ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದರು. ಮಾಜಿ ಸಚಿವ ವಿ ಸೋಮಣ್ಣ ಅನುಯಾಯಿಗಳು ಸಭೆಯಲ್ಲಿ ತಮಗೂ ಮಾತನಾಡಲು ಅವಕಾಶ ಕೊಡಬೇಕು ಎಂದು ಆಗ್ರಹಿಸಿದರು.

ಚಾಮರಾಜನಗರದಲ್ಲಿ ಸತತ ಮೂರನೇ ಬಾರಿ ಬಿಜೆಪಿ ಸೋತಿದೆ. ಮೊದಲ ಬಾರಿ ಸೋತಾಗಾಲೂ ಹೀಗೆ ಹೇಳಿದಿರಿ, ಎರಡನೇ ಬಾರಿ ಸೋತಾಗಲೂ ಪರಾಮರ್ಶೆ ಎಂದು ಹೇಳಿದ್ದಿರಿ. ಈಗಲೂ ಅದನ್ನೇ ಮಾಡುತ್ತೀದ್ದೀರಿ? ಎಂದು ಕಾರ್ಯಕರ್ತರು ಕಿಡಿಕಾರಿದರು.

ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿಗಳಿಂದ ಸೋಮಣ್ಣ ಸೋತಿಲ್ಲ, ಪಕ್ಷದ ನಾಯಕರಿಂದಲೇ ಅವರು ಚಾಮರಾಜನಗರದಲ್ಲಿ ಸೋತದ್ದು ಎಂದು ಬೇಸರ ಹೊರಹಾಕಿದರು.

ಈ ವೇಳೆ ಮಾಜಿ ಸಿಎಂ ಡಿವಿ ಸದಾನಂದಗೌಡ ಅವರು ಮಾತನಾಡಿ, ಸೋಮಣ್ಣ ಅವರು ಎರಡೂ ಸ್ಥಾನಗಳಿಂದ ಸೋತಿದ್ದರಿಂದ ನೋವಾಗಿದೆ. ಇದರಿಂದ ಸೋಮಣ್ಣ ಕೋಪಗೊಂಡಿಲ್ಲ, ಆದರೆ, ನೊಂದಿದ್ದಾರೆ. ನಾನು ಕೋರ್ ಕಮಿಟಿಯಲ್ಲಿದ್ದೇನೆ, ನಿಮ್ಮ ಅಭಿಪ್ರಾಯಗಳನ್ನು ನಾಯಕರಿಗೆ ಮುಟ್ಟಿಸುತ್ತೇನೆ, ಮುಂದೆ ಈ ರೀತಿ ಆಗಬಾರದು ಎಂದು ಒತ್ತಾಯಿಸುತ್ತೇನೆ ಎಂದು ಭರವಸೆಯನ್ನು ನೀಡಿದರು. ಸಭೆಗೆ ಪರಾಜಿತ ಅಭ್ಯರ್ಥಿ ಹಾಗೂ ಮಾಜಿ ಸಚಿವ ವಿ ಸೋಮಣ್ಣ ಗೈರಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT