ರಾಜಕೀಯ

ರಾಜ್ಯದಲ್ಲಿ ಹಿಂದೂಗಳ ಧ್ವನಿಯನ್ನು ಹತ್ತಿಕ್ಕುವ ವ್ಯವಸ್ಥಿತ ಯೋಜನೆ ಜಾರಿಯಲ್ಲಿದೆ: ಬಸನಗೌಡ ಪಾಟೀಲ್ ಯತ್ನಾಳ್

Ramyashree GN

ಬೆಳಗಾವಿ: ರಾಜ್ಯದಲ್ಲಿ ಹಿಂದೂಗಳ ಧ್ವನಿಯನ್ನು ಹತ್ತಿಕ್ಕುವ ವ್ಯವಸ್ಥಿತ ಯೋಜನೆ ಜಾರಿಯಲ್ಲಿದೆ.  ಬಿಎಲ್ ಸಂತೋಷ್ (ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ-ಸಂಘಟನೆ) ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ವಿಧಾನಸಭಾ ಚುನಾವಣೆಯಲ್ಲಿ ಸೋಲುವಂತೆ ಮಾಡಲಾಗಿತ್ತು. ಹಿಂದೂಗಳು ಮತ್ತು ನಮ್ಮ ದೇಶದ ರಕ್ಷಣೆಗೆ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ಬೆಳಗಾವಿಯ ಗಾಂಧಿ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಜಿಲ್ಲಾ ಮಟ್ಟದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪಾಟ್ನಾದಲ್ಲಿ ನಡೆದ ವಿರೋಧ ಪಕ್ಷಗಳ ಸಭೆಯ ವಿರುದ್ಧ ವಾಗ್ದಾಳಿ ನಡೆಸಿದರು. ಇದೊಂದು ಕಳ್ಳರ ಸಭೆ. ಪಾಕಿಸ್ತಾನದ ಮಾದರಿಯಲ್ಲಿ ನಮ್ಮ ದೇಶವನ್ನು ದಿವಾಳಿ ಮಾಡುವುದು ಅವರ ಯೋಜನೆಯಾಗಿದೆ. ಭಾರತವು ಪಾಕಿಸ್ತಾನವಾಗಬೇಕೆಂದು ನೀವು ಬಯಸುತ್ತೀರಾ? ಎಂದು ಪಕ್ಷದ ಕಾರ್ಯಕರ್ತರನ್ನು ಕೇಳಿದರು. ಮುಂದಿನ ವರ್ಷದ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 28 ಲೋಕಸಭಾ ಸ್ಥಾನಗಳನ್ನು ಗೆಲ್ಲಲು ನೆರವಾಗುವಂತೆ ಅವರಿಗೆ ಮನವಿ ಮಾಡಿದರು.

ಅವರನ್ನು ಸೋಲಿಸಲು ಅವರದೇ ಪಕ್ಷದ ಕೆಲವು ನಾಯಕರು ಪ್ರಯತ್ನಿಸಿದರು. 'ಆದರೆ, ನಾನು ಮತ್ತು ಬೊಮ್ಮಾಯಿ ನಮ್ಮ ಕ್ಷೇತ್ರಗಳಿಗೆ ಭೇಟಿ ನೀಡದೆಯೇ ಚುನಾವಣೆಯಲ್ಲಿ ಗೆದ್ದು ನಮ್ಮನ್ನು ನಾವು ಸಾಬೀತುಪಡಿಸಿದ್ದೇವೆ. ಪಕ್ಷದ ಅಭ್ಯರ್ಥಿಗಳನ್ನು ಸೋಲಿಸಲು ಶ್ರಮಿಸಿದ ನಾಯಕರ ಬಗ್ಗೆ ಪಕ್ಷದ ಕಾರ್ಯಕರ್ತರಿಗೆ ಅರಿವಿದೆ. ವಿಜಯಪುರದಲ್ಲಿ ನನ್ನ ಚುನಾವಣೆಯೂ ಸುಲಭವಾಗಿರಲಿಲ್ಲ. ನನ್ನ ವಿರುದ್ಧ ಕೆಲಸ ಮಾಡಿದವರು ಚುನಾವಣೆಯಲ್ಲಿ ಸೋತರು' ಎಂದು ಪರೋಕ್ಷವಾಗಿ ಮಾಜಿ ಸಚಿವ ಮುರುಗೇಶ್ ನಿರಾಣಿ ಅವರನ್ನು ಗುರಿಯಾಗಿಸಿದರು.

ಪಕ್ಷದ ಕಾರ್ಯಕರ್ತರಿಗೆ ಉತ್ತೇಜನ ನೀಡಿದ ಅವರು, 'ನೀವು ಮನೆಯಲ್ಲಿ ಕುಳಿತು ಪಶ್ಚಾತ್ತಾಪಪಟ್ಟರೆ ಏನೂ ಆಗುವುದಿಲ್ಲ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಈಗಿನ ಕಾಂಗ್ರೆಸ್ ಸರ್ಕಾರ ಐದು ಭರವಸೆಗಳನ್ನು ಜಾರಿಗೊಳಿಸಲು ಸಾಧ್ಯವಿಲ್ಲ. 'ಈಗ ಅವರ ನಿಜವಾದ ಬಣ್ಣ ಬಯಲಾಗುತ್ತಿದೆ ಮತ್ತು ರಾಜ್ಯದಲ್ಲಿ ಅರಾಜಕತೆ ತಾಂಡವವಾಡುತ್ತಿದೆ. ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಸರ್ಕಾರ ಐದು ವರ್ಷ ಅವಧಿ ಪೂರ್ಣಗೊಳಿಸುವುದಿಲ್ಲ. ಸಂಸತ್ತಿನ ಚುನಾವಣೆಯ ಮೊದಲು ಅಥವಾ ನಂತರ ಈ ಸರ್ಕಾರ ಪತನವಾಗಲಿದೆ' ಎಂದು ಭವಿಷ್ಯ ನುಡಿದರು.

SCROLL FOR NEXT