ಕಾಂಗ್ರೆಸ್ ಸೇರಿದ ನಟ ಸಾಧುಕೋಕಿಲಾ 
ರಾಜಕೀಯ

ನಟ ಸಾಧು ಕೋಕಿಲಾ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆ: ಸಂಗೀತ ಮಾಂತ್ರಿಕನಿಗೆ ಹೊಸ ಜವಾಬ್ದಾರಿ

ಮುಂಬರುವ ವಿಧಾನಸಭೆಯ ಚುನಾವಣೆಗಾಗಿ ಜನಪ್ರಿಯ ವ್ಯಕ್ತಿಗಳಿಗೆ ಪಕ್ಷಗಳು ಗಾಳ ಹಾಕಲು ಶುರು ಮಾಡಿದ್ದಾರೆ. ಈಗಾಗಲೇ ಕೆಲವು ರಾಜಕಾರಣಿಗಳು ಅತ್ತಿಂದಿತ್ತ ಇತ್ತಿಂದತ್ತ ಪಕ್ಷ ಪರ್ಯಟನೆ ಮಾಡುತ್ತಿದ್ದಾರೆ.

ಬೆಂಗಳೂರು: ಮುಂಬರುವ ವಿಧಾನಸಭೆಯ ಚುನಾವಣೆಗಾಗಿ ಜನಪ್ರಿಯ ವ್ಯಕ್ತಿಗಳಿಗೆ ಪಕ್ಷಗಳು ಗಾಳ ಹಾಕಲು ಶುರು ಮಾಡಿದ್ದಾರೆ. ಈಗಾಗಲೇ ಕೆಲವು ರಾಜಕಾರಣಿಗಳು ಅತ್ತಿಂದಿತ್ತ ಇತ್ತಿಂದತ್ತ ಪಕ್ಷ ಪರ್ಯಟನೆ ಮಾಡುತ್ತಿದ್ದಾರೆ. ಇದೀಗ ಸ್ಯಾಂಡಲ್​ವುಡ್​ ಖ್ಯಾತ ಸಂಗೀತ ನಿರ್ದೇಶಕ, ಹಾಸ್ಯ ನಟ ಸಾಧು ಕೋಕಿಲಾ ಕಾಂಗ್ರೆಸ್​ ಸೇರ್ಪಡೆಗೊಂಡಿದ್ದಾರೆ.

ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲ ಅವರನ್ನು ಕೆಪಿಸಿಸಿಯ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಗುರುವಾರ ನೇಮಕ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರು ಈ ನೇಮಕ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಡಿ.ಕೆ ಶಿವಕುಮಾರ್‌, ‘ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ಕನ್ನಡ ನಾಡಿನ ಜನಮೆಚ್ಚಿನ ಕಲಾವಿದ ಸಾಧು ಕೋಕಿಲ ಅವರಿಗೆ ಹಾರ್ದಿಕ ಶುಭಾಷಯಗಳನ್ನು ಕೋರುತ್ತೇವೆ. ತಮ್ಮ ಕಲಾ ಸೇವೆಯೊಂದಿಗೆ ಜನ ಸೇವೆಯೂ ಯಶಸ್ವಿಯಾಗಿ ಮುಂದುವರೆಯಲಿ’ ಎಂದು ಆಶಿಸಿದ್ದಾರೆ. ಸಾಧುಕೋಕಿಲ ಅವರು ಹಲವು ದಿನಗಳಿಂದ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದರು. ಮೇಕೆದಾಟು ಪಾದಯಾತ್ರೆಯಲ್ಲಿಯೂ ಅವರು ಕಾಣಿಸಿಕೊಂಡಿದ್ದರು.

ಕನ್ನಡದ ಖ್ಯಾತ ಸಂಗೀತ ನಿರ್ದೇಶಕರಾದ ಸಾಧು ಕೋಕಿಲಾ ಅವರನ್ನು ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಅಧಿಕೃತವಾಗಿ ಇಂದು ನೇಮಕ ಮಾಡಿ ಶುಭ ಕೋರಿದೆ. ಸಂಗೀತ, ನಿರ್ದೇಶನ, ನಟನೆಯ ಮೂಲಕ ಕನ್ನಡ ನಾಡಿನ ಮನೆಮಾತಾಗಿರುವ ಸಾಧು ಕೋಕಿಲಾ ಅವರು ಕಾಂಗ್ರೆಸ್‌ಗೆ ಇನ್ನಷ್ಟು ಶಕ್ತಿ ತುಂಬುತ್ತಾರೆ ಎನ್ನುವ ವಿಶ್ವಾಸ ನನಗಿದೆ. ಶುಭವಾಗಲಿ  ಎಂದು ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT