ಶಿವಲಿಂಗೇಗೌಡ-ಎಚ್ ಡಿ ರೇವಣ್ಣ 
ರಾಜಕೀಯ

ಸೂಕ್ತ ಸಮಯಕ್ಕೆ ಶಾಸಕ ಕೆ.ಎಂ ಶಿವಲಿಂಗೇಗೌಡ ಆಡಿಯೋ ಬಿಡುಗಡೆ ಮಾಡ್ತೀನಿ: ಎಚ್.ಡಿ ರೇವಣ್ಣ

ಅರಸೀಕೆರೆ ಜೆಡಿಎಸ್‌ ಶಾಸಕ ಕೆ.ಎಂ ಶಿವಲಿಂಗೇಗೌಡ ಅವರು ಜೆಡಿಎಸ್‌ ಹಾಗೂ ಪಕ್ಷದ ಮುಖಂಡರನ್ನು ಶ್ಲಾಘಿಸಿರುವ ಆಡಿಯೊ ಹಾಗೂ ಕ್ಷೇತ್ರದ ವಿವಿಧ ಸಮುದಾಯಗಳ ಜನರ ವಿರುದ್ಧ ಮಾಡಿರುವ ಹೇಳಿಕೆಗಳ ಆಡಿಯೋ...

ಹಾಸನ: ಅರಸೀಕೆರೆ ಜೆಡಿಎಸ್‌ ಶಾಸಕ ಕೆ.ಎಂ ಶಿವಲಿಂಗೇಗೌಡ ಅವರು ಜೆಡಿಎಸ್‌ ಹಾಗೂ ಪಕ್ಷದ ಮುಖಂಡರನ್ನು ಶ್ಲಾಘಿಸಿರುವ ಆಡಿಯೊ ಹಾಗೂ ಕ್ಷೇತ್ರದ ವಿವಿಧ ಸಮುದಾಯಗಳ ಜನರ ವಿರುದ್ಧ ಮಾಡಿರುವ ಹೇಳಿಕೆಗಳ ಆಡಿಯೋ ನನ್ನ ಬಳಿ ಇದೆ ಎಂದು ಮಾಜಿ ಸಚಿವ, ಜೆಡಿಎಸ್‌ ಮುಖಂಡ ಎಚ್‌.ಡಿ.ರೇವಣ್ಣ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಎಂ ಶಿವಲಿಂಗೇಗೌಡ ಕೂಡ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರ ಮುಂದೆ ಪ್ರಮಾಣ ವಚನ ಸ್ವೀಕರಿಸಿದ್ದು ತಾವು ಯಾವುದೇ ಸಂದರ್ಭದಲ್ಲೂ ಪಕ್ಷ ಬಿಡುವುದಿಲ್ಲ, ಜೆಡಿಎಸ್‌ನಲ್ಲಿ ಮುಂದುವರಿಯಲು ಸಾಧ್ಯವಾಗದಿದ್ದರೆ ಮಾತ್ರ ರಾಜಕೀಯ ತ್ಯಜಿಸುವುದಾಗಿ ಹೇಳಿದ್ದರು. 

ಕೆ.ಎಂ.ಶಿವಲಿಂಗೇಗೌಡ ಅವರ ಹೇಳಿಕೆಗಳನ್ನು ಅರಿತುಕೊಳ್ಳಬೇಕು. ಅರಸೀಕೆರೆ ಕ್ಷೇತ್ರದಲ್ಲಿ ಕೆ.ಎಂ ಶಿವಲಿಂಗೇಗೌಡ ಜೆಡಿಎಸ್‌ನಿಂದ ಮೂರು ಬಾರಿ ಗೆದ್ದಿದ್ದಾರೆ. ಆದರೆ ದುರದೃಷ್ಟವಶಾತ್ ಅವರು ಕಾಂಗ್ರೆಸ್ ಸೇರಲು ನಿರ್ಧರಿಸಿದ ನಂತರ ಜೆಡಿಎಸ್ ಮುಖಂಡರು ಮತ್ತು ಮತದಾರರನ್ನು ಗುರಿಯಾಗಿಸಲು ಪ್ರಾರಂಭಿಸಿದರು ಎಂದು ಎಚ್ ಡಿ ರೇವಣ್ಣ ಆರೋಪಿಸಿದರು.

ಕಾಂಗ್ರೆಸ್-ಜೆಡಿಎಸ್ ಮತ್ತು ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರಗಳ ಪ್ರಯತ್ನದಿಂದ ಅಗತ್ಯವಿರುವ ಕುಡಿಯುವ ನೀರು ಮತ್ತು ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ ಹೊರತು ಶಿವಲಿಂಗೇಗೌಡರಿಂದಲ್ಲ. ಕ್ಷೇತ್ರದ ಅಭಿವೃದ್ಧಿಗೆ ಜೆಡಿಎಸ್ ನಾಯಕರ ಬೆಂಬಲವನ್ನು ಮರೆಯಬಾರದು ಎಂದರು. ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಪ್ರಾದೇಶಿಕ ಪಕ್ಷವನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಎಚ್.ಡಿ.ರೇವಣ್ಣ ಟೀಕಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT