ಎ ಮಂಜು 
ರಾಜಕೀಯ

ಜೆಡಿಎಸ್ ಸೇರುವುದಕ್ಕೂ ಮುನ್ನವೇ ಸ್ವಗ್ರಾಮದಿಂದ ಎ ಮಂಜು ಪ್ರಚಾರ ಆರಂಭ

ಮಾಜಿ ಸಚಿವ ಎ ಮಂಜು ಜೆಡಿಎಸ್ ಟಿಕೆಟ್ ಮೇಲೆ ಅರಕಲಗೂಡು ಕ್ಷೇತ್ರದಿಂದ ಸ್ಪರ್ಧಿಸಿದ್ದು, ಜೆಡಿಎಸ್ ಸೇರುವುದಕ್ಕೂ ಮುನ್ನ ಹನ್ಯಾಲು ಗ್ರಾಮದಿಂದ ಪ್ರಚಾರ ಆರಂಭಿಸಿದ್ದಾರೆ. 

ಹಾಸನ: ಮಾಜಿ ಸಚಿವ ಎ ಮಂಜು ಜೆಡಿಎಸ್ ಟಿಕೆಟ್ ಮೇಲೆ ಅರಕಲಗೂಡು ಕ್ಷೇತ್ರದಿಂದ ಸ್ಪರ್ಧಿಸಿದ್ದು, ಜೆಡಿಎಸ್ ಸೇರುವುದಕ್ಕೂ ಮುನ್ನ ಹನ್ಯಾಲು ಗ್ರಾಮದಿಂದ ಪ್ರಚಾರ ಆರಂಭಿಸಿದ್ದಾರೆ. 

ಪ್ರಚಾರಕ್ಕೂ ಮುನ್ನ ಅನುಯಾಯಿಗಳು, ಹಿರಿಯ ನಾಗರಿಕರು, ಗ್ರಾಮಸ್ಥರೊಂದಿಗೆ ಎ ಮಂಜು ಸಭೆ ನಡೆಸಿದ್ದು, ಈ ಸಭೆಯಲ್ಲಿ ಭಾಗಿಯಾಗಿದ್ದವರು ಮಾಜಿ ಸಚಿವರನ್ನು ಬೆಂಬಲಿಸುವುದಾಗಿ ಘೋಷಿಸಿದ್ದಾರೆ. 

ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದ ಎ ಮಂಜು, 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಪಡೆದು ಹಾಸನ ಕ್ಷೇತ್ರದಿಂದ ಸ್ಪರ್ಧಿಸಿದ್ದರು.

ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಅದನ್ನು ಮರೆತು ಪಕ್ಷವನ್ನು ಬಲಪಡಿಸುವಂತೆ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ರೇವಣ್ಣ, ಎ ಮಂಜುಗೆ ಕರೆ ನೀಡಿದ್ದು ಮಂಜು ಜೆಡಿಎಸ್ ನಾಯಕ ಹೆಚ್ ಡಿ ದೇವೇಗೌಡ ಅವರ ಆಶೀರ್ವಾದ ಪಡೆದಿದ್ದಾರೆ.

ಇದನ್ನೂ ಓದಿ: ನಾನು ಅರಕಲಗೂಡು ಕ್ಷೇತ್ರದ ಜೆಡಿಎಸ್ ಅಧಿಕೃತ ಅಭ್ಯರ್ಥಿ: ಎ.ಮಂಜು
 
ತವರು ಜಿಲ್ಲೆಯಲ್ಲಿ ಪಕ್ಷದ ಸ್ಥಾನಗಳನ್ನು ಉಳಿಸಿಕೊಳ್ಳುವುದಕ್ಕೆ ಹೆಚ್ ಡಿ ರೇವಣ್ಣ, ಕುಮಾರಸ್ವಾಮಿ, ಎ ಮಂಜು ಕಾರ್ಯತಂತ್ರಗಳನ್ನು ಚರ್ಚಿಸಿದ್ದಾರೆ. ಹೆಚ್ ಡಿ ಕುಮಾರಸ್ವಾಮಿ ನಿರ್ದೇಶನದ ನಂತರ ಎ ಮಂಜು ಪ್ರಚಾರ ಆರಂಭಿಸಿದ್ದು, ಜೆಡಿಎಸ್ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. 

ಮಂಜು ಬೇಷರತ್ತಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಅರಕಲಗೂಡಿನಲ್ಲಿ ಬೃಹತ್ ಸಮಾವೇಶ ನಡೆಸುವ ಯೋಜನೆ ಹೊಂದಿದ್ದಾರೆ, ಹಾಗೂ ಈ ಸಮಾವೇಶದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಿಂದ ಹಲವು ಕಾರ್ಯಕರ್ತರು ಜೆಡಿಎಸ್ ಸೇರುವ ಸಾಧ್ಯತೆ ಇದೆ ಮಾ.12 ರಂದು ದೇವೇಗೌಡರ ನಿವಾಸದಲ್ಲಿ ಎ ಮಂಜು ಜೆಡಿಎಸ್ ಸೇರ್ಪಡೆಯಾಗಲಿದ್ದು, ಮಾ.16 ರಂದು ಅರಕಲಗೂಡು ತಲುಪುವ ಪಾದಯಾತ್ರೆಯನ್ನು ಮುನ್ನಡೆಸಲಿದ್ದಾರೆ. 15 ದಿನಗಳ ಹಿಂದೆ ಕುಮಾರಸ್ವಾಮಿ ಅರಕಲಗೂಡು ಕ್ಷೇತ್ರದ ಜೆಡಿಎಸ್ ಟಿಕೆಟ್ ನ್ನು ಎ ಮಂಜು ಅವರಿಗೆ ಘೋಷಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT