ಜೆಡಿಎಸ್ ಟ್ವೀಟ್ 
ರಾಜಕೀಯ

'ಅಡಿಕೆ ಬೆಳೆದು ಕೋಟಿ ಕೋಟಿ ಸಂಪಾದಿಸಬೇಕಾ? 'ಮಾಡಾಳ್ ತಳಿ' ಅಡಿಕೆ ಗಿಡಗಳನ್ನು ಬೆಳಸಿ ಕೋಟ್ಯಾಂತರ ರೂಪಾಯಿ ಗಳಿಸಿ'

ಅಡಿಕೆ ಬೆಳೆದು ಕೋಟಿ ಕೋಟಿ ಸಂಪಾದಿಸಬೇಕಾ? ಹಾಗಾದ್ರೆ ಮಾಡಾಳ್ ತಳಿಯ ಅಡಿಕೆ ಗಿಡಗಳನ್ನು ಬೆಳಸಿ ಕೋಟ್ಯಾಂತರ ರೂಪಾಯಿ ಸಂಪಾದಿಸಿ ಎಂದು ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಜೆಡಿಎಸ್ ಹರಿ ಹಾಯ್ದಿದೆ.

ಬೆಂಗಳೂರು: ಅಡಿಕೆ ಬೆಳೆದು ಕೋಟಿ ಕೋಟಿ ಸಂಪಾದಿಸಬೇಕಾ? ಹಾಗಾದ್ರೆ ಮಾಡಾಳ್ ತಳಿಯ ಅಡಿಕೆ ಗಿಡಗಳನ್ನು ಬೆಳಸಿ ಕೋಟ್ಯಾಂತರ ರೂಪಾಯಿ ಸಂಪಾದಿಸಿ ಎಂದು ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಜೆಡಿಎಸ್ ಹರಿ ಹಾಯ್ದಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಜೆಡಿಎಸ್, ಲಂಚ ಪ್ರಕರಣದ ಪ್ರಮುಖ ಆರೋಪಿ, ಬಿಜೆಪಿ ಶಾಸಕನನ್ನು ಬಿಜೆಪಿ ಕಾರ್ಯಕರ್ತರು 'ಭಾರತ್ ಮಾತಾ ಕಿ ಜೈ' ಎಂದು ಕೂಗುತ್ತಾ ಅದ್ದೂರಿ ಮೆರವಣಿಗೆ ಮಾಡಿದ್ದಾರೆ. ಭ್ರಷ್ಟರಿಗೆ ಜೈಕಾರ ಹಾಕುವುದೆ ಬಿಜೆಪಿ ಇಂಡಿಯಾ ಹೇಳುವ ದೇಶ ಪ್ರೇಮ. ನಿಮ್ಮ ನಾಚಿಕೆಯಿಲ್ಲದ ನಡೆಯನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ ಎಂದು ಜೆಡಿಎಸ್ ಛೀಮಾರಿ ಹಾಕಿದೆ.

ನಾಪತ್ತೆಯಾಗಿದ್ದ ಶಾಸಕ ಜಾಮೀನು ಸಿಗುತ್ತಿದ್ದಂತೆ ಪ್ರತ್ಯಕ್ಷರಾಗಿದ್ದಾರೆ. ಅರಗ ಜ್ಞಾನೇಂದ್ರ ಅವರೇ ನಾಪತ್ತೆಯಾಗಿದ್ದ ವೇಳೆ ಅವರು ಎಲ್ಲಿದ್ದರು ಎಂದು ನಿಮಗೆ ಗೊತ್ತಿರಲಿಲ್ಲವೆ? ಜನರಿಗೆ ಎಷ್ಟು ಮಂಕುಬೂದಿ ಎರಚಬಲ್ಲಿರಿ?ಈ ಬಾರಿ ನಿಮ್ಮೆಲ್ಲರನ್ನೂ ಮನೆಯಲ್ಲಿ ಕೂರುವಂತೆ ಜನತೆ ಮಾಡಲಿದ್ದಾರೆ ನೆನಪಿರಲಿ ಎಂದು ಜೆಡಿಎಸ್ ಎಚ್ಚರಿಕೆ ನೀಡಿದೆ.

ನರೇಂದ್ರ ಮೋದಿ ಮತ್ತು ಅಮಿತ್ ಶಾ  ಅವರೆ ನೀವು ಪದೇ ಪದೇ ರಾಜ್ಯಕ್ಕೆ ಬರುತ್ತಿರುವುದು ಮಾಡಾಳು ವಿರೂಪಾಕ್ಷ ಅವರ ಮನೆಯಲ್ಲಿ ಸಿಕ್ಕ ಹಣಕ್ಕಾಗಿ ಎಂದು ಜನರು ಮಾತನಾಡುತ್ತಿದ್ದಾರೆ. ಈ ಬಗ್ಗೆ ಮುಂದಿನ ಬಾರಿ ಬಂದಾಗ ಸ್ಪಷ್ಟೀಕರಣ ನೀಡಿ ಎಂದು ಜೆಡಿಎಸ್ ಒತ್ತಾಯಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi Building Collapse: ಸಾವಿನ ಸಂಖ್ಯೆ 5ಕ್ಕೆ ಏರಿಕೆ; ಮೂವರ ಸ್ಥಿತಿ ಗಂಭೀರ, ಇನ್ನೂ 40ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ, ತನಿಖೆಗೆ ಸಮಿತಿ ರಚನೆ!

43ನೇ ವಯಸ್ಸಿನಲ್ಲಿ ಶಿಶ್ನ ಹಿಗ್ಗುವಿಕೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ ಕೋಟ್ಯಾಧಿಪತಿ ಇಘೋ ಉಬಿರಿಬೊ ಸಾವು!

Delhi building collapse: ‘ಪ್ರತಿ ವಿದ್ಯಾರ್ಥಿಯ ಜೀವವೂ ಅಮೂಲ್ಯ, ರಕ್ಷಣೆ ಖಚಿತಪಡಿಸಬೇಕು’: ಮೋದಿ ಸರ್ಕಾರಕ್ಕೆ ರಾಹುಲ್ ಗಾಂಧಿ ಆಗ್ರಹ

Toxic ಮೂಲಕ ಇತಿಹಾಸ ಸೃಷ್ಟಿಸಿದ ಯಶ್; ಕನ್ನಡದ ಏಕೈಕ ನಟನಾಗಿ ಹೊಸ ದಾಖಲೆ!

ರಕ್ಷಾಬಂಧನ ದಿನದಂದೇ ಅಣ್ಣನ ಬಗ್ಗೆ ಕೆಟ್ಟ ಕಾಮೆಂಟ್, ಅತ್ತಿಗೆಯ ಕತ್ತು ಕೊಯ್ದು ನೀರಿನ ಟ್ಯಾಂಕ್‌ಗೆ ಎಸೆದ ತಂಗಿ!