ಸಂಗ್ರಹ ಚಿತ್ರ 
ರಾಜಕೀಯ

ಚುನಾವಣೆ: ಮಾರ್ಚ್ 18 ರಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ

ಮುಂದಿನ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಸಾಧನೆಗಳ ಬಗ್ಗೆ ಜನತೆಗೆ ಅರಿವು ಮೂಡಿಸಲು 'ವಿಜಯ ಸಂಕಲ್ಪ ಯಾತ್ರೆ-ಪ್ರಗತಿ ಯಾತ್ರೆ' ಮಾ.18ರಿಂದ 21ರವರೆಗೆ ಉತ್ತರ ಜಿಲ್ಲೆಯಲ್ಲಿ ಸಂಚರಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ್ ಹೇಳಿದ್ದಾರೆ.

ಮಂಗಳೂರು: ಮುಂದಿನ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಸಾಧನೆಗಳ ಬಗ್ಗೆ ಜನತೆಗೆ ಅರಿವು ಮೂಡಿಸಲು 'ವಿಜಯ ಸಂಕಲ್ಪ ಯಾತ್ರೆ-ಪ್ರಗತಿ ಯಾತ್ರೆ' ಮಾ.18ರಿಂದ 21ರವರೆಗೆ ಉತ್ತರ ಜಿಲ್ಲೆಯಲ್ಲಿ ಸಂಚರಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ್ ಹೇಳಿದ್ದಾರೆ.

ಹಳಿಯಾಳದಲ್ಲಿ ಯಾತ್ರೆಗೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಚಾಲನೆ ನೀಡಲಿದ್ದು, ರೋಡ್ ಶೋ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಯಾತ್ರೆಯ ಅಂಗವಾಗಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಮಾವೇಶಗಳು ನಡೆಯಲಿವೆ. ಕಾರವಾರದಲ್ಲಿ ನಡೆಯಲಿರುವ ಜಿಲ್ಲಾ ಮಹಿಳಾ ಸಮಾವೇಶದಲ್ಲಿ ಬಿಜೆಪಿ ನಾಯಕಿ ಹಾಗೂ ಸುಪ್ರೀಂ ಕೋರ್ಟ್ ವಕೀಲೆ ಮೀನಾಕ್ಷಿ ಲೇಖಿ ಭಾಗವಹಿಸಲಿದ್ದಾರೆ. ಯಲ್ಲಾಪುರದಲ್ಲಿಯೂ ಎಸ್'ಟಿ ರ್ಯಾಲಿ ನಡೆಯಲಿದೆ. ರೈತರ ಮತ್ತು ಪರಿಶಿಷ್ಟ ಜಾತಿಗಳ ಸಮಾವೇಶವನ್ನೂ ನಡೆಸಲಾಗುವುದು, ಇದಕ್ಕಾಗಿ ಸ್ಥಳದ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಯಾತ್ರೆಯು ಮಾರ್ಚ್ 21 ರಂದು ಮುಕ್ತಾಯಗೊಳ್ಳುತ್ತದೆ ಮತ್ತು ಅದೇ ದಿನ ಹಾನಗಲ್ ತಲುಪಲಿದೆ ಎಂದು ನಾಯಕ್ ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT