ವಿಜಯ ಸಂಕಲ್ಪ ಯಾತ್ರೆ 
ರಾಜಕೀಯ

ಬೇಲೂರಿನಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಪರ ಘೋಷಣೆ: ಕೇಂದ್ರ ಸಚಿವರ ಅಸಮಾಧಾನ

ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ವೇಳೆ ಬೇಲೂರಿನಲ್ಲಿ ಟಿಕೆಟ್ ಆಕಾಂಕ್ಷಿಗಳ ಬೆಂಬಲಿಗರ ನಡುವೆ ಜಟಾಪಟಿ ನಡೆದಿರುವುದಕ್ಕೆ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಮತ್ತು ಶೋಭಾ ಕರಂದ್ಲಾಜೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೇಲೂರು: ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ವೇಳೆ ಬೇಲೂರಿನಲ್ಲಿ ಟಿಕೆಟ್ ಆಕಾಂಕ್ಷಿಗಳ ಬೆಂಬಲಿಗರ ನಡುವೆ ಜಟಾಪಟಿ ನಡೆದಿರುವುದಕ್ಕೆ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಮತ್ತು ಶೋಭಾ ಕರಂದ್ಲಾಜೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರೋಡ್ ಶೋ ಮೂಲಕ ಅದೇ ತಾಲೂಕಿನ ಅರೇಹಳ್ಳಿ ಮತ್ತು ಬಿಕ್ಕೋಡು ಹೋಬಳಿಗಳ ಮೂಲಕ ಸಕಲೇಶಪುರ ತಲುಪಬೇಕಿದ್ದ ವಿಜಯ ಸಂಕಲ್ಪ ಯಾತ್ರೆಗೆ ಮುಖಂಡರು ಜೊತೆಗಿರಲಿಲ್ಲ ಎನ್ನಲಾಗಿದೆ. ಜೋಶಿ ಮತ್ತು ಶೋಭಾ ಕರಂದ್ಲಾಜೆ ಹೆಲಿಕಾಪ್ಟರ್ ಹತ್ತಿ ಅರೇಹಳ್ಳಿ, ಬಿಕ್ಕೋಡು ಬಿಟ್ಟು ಸಕಲೇಶಪುರ ತಲುಪಿದರು. ಹಿರಿಯ ನಾಯಕರ ಸೂಚನೆಯ ನಡುವೆಯೂ ಎಚ್‌ಕೆ ಸುರೇಶ್, ಸಿದ್ದೇಶ್ ನಾಗೇಂದ್ರ, ಕೊರಟಗೆರೆ ಪ್ರಕಾಶ್, ಸಂತೋಷ್ ಕೆಂಚಾಂಬ ಬೆಂಬಲಿಗರು ಹಳೇಬೀಡು ಮತ್ತು ಬೇಲೂರಿನಲ್ಲಿ ತಮ್ಮ ನಾಯಕರ ಪರವಾಗಿ ನಿರಂತರವಾಗಿ ಘೋಷಣೆಗಳನ್ನು ಕೂಗಿದ್ದರು.

ಯಾತ್ರೆಯ ವೇಳೆ ಕೇಂದ್ರ ಸಚಿವರ ಮುಂದೆ ಟಿಕೆಟ್ ಆಕಾಂಕ್ಷಿಗಳು ತಮ್ಮ ಶಕ್ತಿ ಪ್ರದರ್ಶಿಸಲು ಪ್ರಯತ್ನಿಸಿದರು. ರ್ಯಾಲಿಯಲ್ಲಿ ಎಚ್‌ಕೆ ಸುರೇಶ್ ಮತ್ತು ಸಿದ್ದೇಶ್ ನಾಗೇಂದ್ರ ಬೆಂಬಲಿಗರ ಮಾತಿನ ಚಕಮಕಿಯೂ ನಡೆಯಿತು. ಕೇಂದ್ರ ಸಚಿವರು ಚಹಾ ಸೇವಿಸುವಾಗ ಬೆಂಬಲಿಗರು ತಮ್ಮ ನಾಯಕರ ಪರವಾಗಿ ಘೋಷಣೆಗಳನ್ನು ಕೂಗಿದರು. ಪೊಲೀಸರು ಸಭೆಗೆ ಧಾವಿಸಿ ಕಾರ್ಯಕರ್ತರನ್ನು ಚದುರಿಸಿದರು. ಹೀಗಾಗಿ ನಿಗದಿತ ಸಮಯಕ್ಕಿಂತ ಎರಡು ಗಂಟೆಗಳ ನಂತರ ರ್ಯಾಲಿ ಆರಂಭವಾಯಿತು.

ಬಿಜೆಪಿ ಕಾರ್ಯಕರ್ತರ ನಡುವಿನ ಜಟಾಪಟಿಗೆ ತೆರೆ ಎಳೆದ ಹೆಚ್.ಕೆ.ಸುರೇಶ್, ಸಿದ್ದೇಶ್ ನಾಗೇಂದ್ರ ಮಾತನಾಡಿ, ಬೆಂಬಲಿಗರು ತಮ್ಮ ನಾಯಕರ ಪರ ಘೋಷಣೆ ಕೂಗುವುದು ಮಾಮೂಲಿ ಎಂದಿದ್ದು, ವಿಜಯ ಸಂಕಲ್ಪ ಯಾತ್ರೆಗೂ ಮುನ್ನವೇ ಪೂರ್ವಭಾವಿ ಸಭೆ ನಡೆಸಲು ಕೇಂದ್ರ ಸಚಿವರು ಹೆಲಿಕಾಪ್ಟರ್ ಮೂಲಕ ಸಕಲೇಶಪುರಕ್ಕೆ ತೆರಳಿದ್ದಾರೆ. ನಾವು ಒಗ್ಗಟ್ಟಾಗಿದ್ದು, ಹೈಕಮಾಂಡ್ ಯಾವುದೇ ನಾಯಕರಿಗೆ ಪಕ್ಷದ ಟಿಕೆಟ್ ನೀಡಿದರೆ ಗೆಲುವಿಗೆ ಶ್ರಮಿಸುತ್ತೇವೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!