ವಿ. ಸೋಮಣ್ಣ 
ರಾಜಕೀಯ

ಬಿಜೆಪಿ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ಎರಡರಿಂದಲೂ ಸಚಿವ ವಿ.ಸೋಮಣ್ಣ ಔಟ್!

ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿಯ ತಂತ್ರಗಾರಿಕೆ ಜೋರಾಗಿದೆ. ಚುನಾವಣೆ ಎದುರಿಸಲು ಹೊಸ ತಂಡವನ್ನ ರಚಿಸಿದ್ದು, ಕಮಲ ನಾಯಕರ ಹೆಗಲಿಗೆ ಪ್ರಮುಖ ಜವಾಬ್ದಾರಿ ವಹಿಸಲಾಗಿದೆ.

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿಯ ತಂತ್ರಗಾರಿಕೆ ಜೋರಾಗಿದೆ. ಚುನಾವಣೆ ಎದುರಿಸಲು ಹೊಸ ತಂಡವನ್ನ ರಚಿಸಿದ್ದು, ಕಮಲ ನಾಯಕರ ಹೆಗಲಿಗೆ ಪ್ರಮುಖ ಜವಾಬ್ದಾರಿ ವಹಿಸಲಾಗಿದೆ.

ಕರ್ನಾಟಕ ಬಿಜೆಪಿಯ ಚುನಾವಣಾ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿಗೆ ಅಧ್ಯಕ್ಷರು, ಸಂಚಾಲಕರನ್ನ ನೇಮಿಸಲಾಗಿದೆ. ಪ್ರಚಾರ ಸಮಿತಿಗೆ 25 ಸದಸ್ಯರು, ಚುನಾವಣಾ ನಿರ್ವಹಣಾ ಸಮಿತಿಯಲ್ಲಿ 14 ಸದಸ್ಯರನ್ನ ನೇಮಕ ಮಾಡಲಾಗಿದೆ.

ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ನೇಮಿಸಲಾಗಿದೆ. ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ನೇಮಿಸಲಾಗಿದೆ. ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ಎರಡಲ್ಲೂ ಸಚಿವ ವಿ.ಸೋಮಣ್ಣರಿಗೆ ಸ್ಥಾನಮಾನ ಸಿಕ್ಕಿಲ್ಲ.

ಸಚಿವ ವಿ. ಸೋಮಣ್ಣ ಬಿಜೆಪಿಗೆ ಕೈ ಕೊಟ್ಟು ಕಾಂಗ್ರೆಸ್ ಸೇರುತ್ತಾರೆ ಅನ್ನೋ ವಿಚಾರ ರಾಜ್ಯ ರಾಜಕೀಯ ವಲಯದಲ್ಲಿ ಕಳೆದ 15 ದಿನ ಗಳಿಂದ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ರಾಜಕೀಯ ಪಡಸಾಲೆಯಲ್ಲಿ ದೊಡ್ಡ ಮಟ್ಟದ ಚರ್ಚೆ ಎದುರಾಗಿದ್ದು, ಹೊಸ ಹೊಸ ಲೆಕ್ಕಾಚಾರಗಳು ಸಹ ಜೋರಾಗಿದೆ. ಸೋಮಣ್ಣ ಕೂಡ ಕೊಂಚ ಸೈಲೆಂಟಾಗಿ ಇದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

SCROLL FOR NEXT