ಸಂಗ್ರಹ ಚಿತ್ರ 
ರಾಜಕೀಯ

ಟಿಕೆಟ್ ಆಕಾಂಕ್ಷಿಗಳ ಕಚ್ಚಾಟ: ಅಸಮಾಧಾನಗೊಂಡ ನಾಯಕರು, ವಿಜಯ ಸಂಕಲ್ಪ ಯಾತ್ರೆ ಅರ್ಧಕ್ಕೇ ಮೊಟಕು

ಬಿಜೆಪಿಯ ವಿಜಯಸಂಕಲ್ಪ ಯಾತ್ರೆ ಜಾವಗಲ್ ಮೂಲಕ ಪ್ರಾರಂಭವಾಗಿ ಹಳೇಬೀಡಿಗೆ ಬಂದ ಸಂದರ್ಭದಲ್ಲಿ ಬೇಲೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು ನಾಯಕರ ಮುಂದೆ ತಮ್ಮ ಶಕ್ತಿ ಪ್ರದರ್ಶನಕ್ಕೆ ಜಿದ್ದಿಗೆ ಪರಿಣಾಮ ಬೇಸತ್ತ ನಾಯಕರು ಯಾತ್ರೆಯನ್ನು ಅರ್ಧಕ್ಕೇ ಮೊಟಕುಗೊಳಿಸಿ ವಾಪಸ್ ಹೊರಟ ಘಟನೆ ಗುರುವಾರ ನಡೆಯಿತು.

ಬೇಲೂರು: ಬಿಜೆಪಿಯ ವಿಜಯಸಂಕಲ್ಪ ಯಾತ್ರೆ ಜಾವಗಲ್ ಮೂಲಕ ಪ್ರಾರಂಭವಾಗಿ ಹಳೇಬೀಡಿಗೆ ಬಂದ ಸಂದರ್ಭದಲ್ಲಿ ಬೇಲೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು ನಾಯಕರ ಮುಂದೆ ತಮ್ಮ ಶಕ್ತಿ ಪ್ರದರ್ಶನಕ್ಕೆ ಜಿದ್ದಿಗೆ ಪರಿಣಾಮ ಬೇಸತ್ತ ನಾಯಕರು ಯಾತ್ರೆಯನ್ನು ಅರ್ಧಕ್ಕೇ ಮೊಟಕುಗೊಳಿಸಿ ವಾಪಸ್ ಹೊರಟ ಘಟನೆ ಗುರುವಾರ ನಡೆಯಿತು.

ಈ ಕ್ಷೇತ್ರದ ಬಿಜೆಪಿ ಟಿಕೆಟ್'ಗಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಕೆ.ಸುರೇಶ್ ಹಾಗೂ ಸಿದ್ದೇಶ್ ನಾಗೇಂದ್ರ ನಡುವೆ ಭಾರೀ ಪೈಪೋಟಿ ನಡೆಯುತ್ತಿದೆ. ಹಾಗಾಗಿ ವಿಜಯ ಸಂಕಲಪ್ ಯಾತ್ರೆಯಲ್ಲಿ ಸೇರಿದ್ದ ಜನರನ್ನೇ ತಮ್ಮ ಸಾಧನೆ ಎಂಬಂತೆ ಬಿಂಬಿಸಿಕೊಳ್ಳಲು ತಮ್ಮ ತಮ್ಮೊಳಗೇ ಶಕ್ತಿ ಪ್ರದರ್ಶನಕ್ಕೆ ಮುಂದಾದರು.

ಒಂದು ಗುಂಪು ಹೆಚ್.ಕೆ.ಸುರೇಶ್ ಪರವಾಗಿ ಜೈಕಾರ ಕೂಗಿದರೆ, ಮತ್ತೊಂದು ಗುಂಪು ಸಿದ್ಧೇಶ್ ನಾಗೇಂದ್ರ ಪರವಾಗಿ ಘೋಷಣೆ ಕೂಗುತ್ತಿತ್ತು. ಮತ್ತೊಂದು ಬಣ ಸಂತೋಷ್ ಕೆಂಚಾಂಬ ಪರವಾಗಿ ಘೋಷಣೆ ಕೂಗಿದರು. ಜೈಕಾರಗಳು ಅತಿರೇಕಕ್ಕೇ ಹೋಗಿದ್ದರಿಂದ ತೀವ್ರ ಮುಜುಗರಕ್ಕೊಳಗಾದ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ಶೋಭಾ ಕರಂದ್ಲಾಜೆ ಬೇಲೂರಿನಲ್ಲಿ ಸಾಗಬೇಕಿದ್ದ ವಿಜಯ ಸಂಕಲ್ಪ ಯಾತ್ರೆಯನ್ನು ರದ್ದುಗೊಳಿಸಿ, ಹೆಲಿಕಾಪ್ಟರ್ ಮೂಲಕ ಹಳೇಬೀಡಿನಿಂದ ನೇರವಾಗಿ ಸಕಲೇಪುರ ತಲುಪಿದರು.

ಹಳೇಬೀಡಿನಲ್ಲಿ ಕೇಂದ್ರ ಸಚಿವರುಗಳು ಸಂಘಟನಾ ತ್ಮಕವಾಗಿ ಕಾರ್ಯಕರ್ತರ ಮನೆಯಲ್ಲಿದ್ದ ವೇಳೆ ಬೇಲೂರು ವಿಧಾನಸಭಾ ಕ್ಷೇತ್ರದ ಆಕಾಂ ಕ್ಷಿಗಳ ಬೆಂಬಲಿಗರು ಮನೆಯ ಹೊರ ಭಾಗದಲ್ಲಿ ಗುಂಪು ಗಳಾಗಿ ಕೈ-ಕೈ ಮಿಲಾಯಿಸಲು ಹಂತಕ್ಕೆ ಮುಂದಾಗಿದ್ದರು. ಈ ವೇಳೆ ಮಧ್ಯೆ ಪ್ರವೇಶ ಮಾಡಿದ ಪೊಲೀಸರು ಎಲ್ಲಾ ಗುಂಪುಗಳನ್ನು ಚದುರಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

SCROLL FOR NEXT