ಸಿಎಂ ಬಸವರಾಜ ಬೊಮ್ಮಾಯಿ 
ರಾಜಕೀಯ

ಕಾಂಗ್ರೆಸ್ ಚುನಾವಣಾ ಭರವಸೆಗಳು ಕೇವಲ ವಿಸಿಟಿಂಗ್ ಕಾರ್ಡ್ ಅಷ್ಟೇ! ಸಿಎಂ ಬೊಮ್ಮಾಯಿ!

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಘೋಷಿಸಿರುವ ಭರವಸೆಗಳು ಕೇವಲ ವಿಸಿಟಿಂಗ್ ಕಾರ್ಡ್ ಅಷ್ಟೇ,  ಬೇರೆನೂ ಅಲ್ಲ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ. 

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಘೋಷಿಸಿರುವ ಭರವಸೆಗಳು ಕೇವಲ ವಿಸಿಟಿಂಗ್ ಕಾರ್ಡ್ ಅಷ್ಟೇ,  ಬೇರೆನೂ ಅಲ್ಲ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ. 

ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಭರವಸೆಗಳನ್ನು ಈಡೇರಿಸುತ್ತೇವೆ ಎಂಬ ಕಾಂಗ್ರೆಸ್ ನ ‘ಗ್ಯಾರಂಟಿ ಕಾರ್ಡ್’ಗೆ ಜನ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು. 

ಕಾಂಗ್ರೆಸ್ ಮೂರು ಪ್ರಮುಖ ಭರವಸೆಗಳನ್ನು ಘೋಷಿಸಿದೆ. ಎಲ್ಲಾ ಕುಟುಂಬಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ( ಗೃಹ ಜ್ಯೋತಿ) ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ರೂ. 2,000 ಸಹಾಯಧನ (ಗೃಹ ಲಕ್ಷ್ಮಿ) ಮತ್ತು ಬಿಪಿಎಲ್ ಕುಟುಂಬದ ಎಲ್ಲಾ ಸದಸ್ಯರಿಗೆ 10 ಕೆಜಿ ಉಚಿತ ಅಕ್ಕಿ ನೀಡುವುದಾಗಿ ಘೋಷಿಸಿದೆ. ಅವರ ಮೌಖಿಕ ಭರವಸೆಗಳಲ್ಲಿ ಕಾಂಗ್ರೆಸ್‌ಗೇ ನಂಬಿಕೆ ಇಲ್ಲದಂತಾಗಿದೆ. ಇಲ್ಲವಾದಲ್ಲಿ ಗ್ಯಾರಂಟಿ ಕಾರ್ಡ್  ಅಗತ್ಯ ಎಂದು ಬೊಮ್ಮಾಯಿ ಪ್ರಶ್ನಿಸಿದರು. 

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ವಿ, ಸೋಮಣ್ಣ ಮತ್ತಿತರ ನಡುವಿನ ಭಿನ್ನಾಭಿಪ್ರಾಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಯಡಿಯೂರಪ್ಪ ಪಕ್ಷದ  ದಿಗ್ಗಜ ನಾಯಕರಾಗಿದ್ದು, ಇತರರು ಅವರ ಮಕ್ಕಳಂತೆ. ಕುಟುಂಬದ ಸದಸ್ಯರ ನಡುವಿನ ಭಿನ್ನಾಭಿಪ್ರಾಯಗಳನ್ನು ಯಾವಾಗಲಾದರೂ ಬಗೆಹರಿಸಬಹುದು ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT