ಕೆ.ಎಂ ಶಿವಲಿಂಗೇಗೌಡ 
ರಾಜಕೀಯ

ಅರಸೀಕೆರೆಯಲ್ಲಿ ಹೈವೋಲ್ಟೇಜ್ ಕದನ: ಶಾಸಕ ಶಿವಲಿಂಗೇಗೌಡರಿಗೆ ತಕ್ಕ ಪಾಠ ಕಲಿಸಲು ಜೆಡಿಎಸ್ ಭರ್ಜರಿ ಪ್ಲಾನ್!

ಅರಸೀಕೆರೆ ಹಾಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಾಂಗ್ರೆಸ್‌ ಸೇರ್ಪಡೆಯಾದ ಬೆನ್ನಲ್ಲೇ ಅರಸೀಕೆರೆ ಕ್ಷೇತ್ರವನ್ನು ಉಳಿಸಿಕೊಳ್ಳಲು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ನಾನಾ ತಂತ್ರಗಳನ್ನು ರೂಪಿಸುತ್ತಿದ್ದು, ಪ್ರಾದೇಶಿಕ ಪಕ್ಷಕ್ಕೆ ದ್ರೋಹ ಬಗೆದಿದ್ದಕ್ಕೆ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ.

ಹಾಸನ: ಅರಸೀಕೆರೆ ಹಾಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಾಂಗ್ರೆಸ್‌ ಸೇರ್ಪಡೆಯಾದ ಬೆನ್ನಲ್ಲೇ ಅರಸೀಕೆರೆ ಕ್ಷೇತ್ರವನ್ನು ಉಳಿಸಿಕೊಳ್ಳಲು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ನಾನಾ ತಂತ್ರಗಳನ್ನು ರೂಪಿಸುತ್ತಿದ್ದು, ಪ್ರಾದೇಶಿಕ ಪಕ್ಷಕ್ಕೆ ದ್ರೋಹ ಬಗೆದಿದ್ದಕ್ಕೆ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ.

ಹಾಸನ ಕ್ಷೇತ್ರದಂತೆಯೇ ಜಿಲ್ಲೆಯ ಅರಸೀಕೆರೆಯಲ್ಲಿ ಜೆಡಿಎಸ್‌ಗೆ ಕದನ ಪ್ರತಿಷ್ಠೆಯಾಗಿದೆ. ಕ್ಷೇತ್ರದಿಂದ ಕುರುಬರನ್ನು ಕಣಕ್ಕಿಳಿಸಲು ಜೆಡಿಎಸ್ ಮುಂದಾಗಿದೆ. ಸಮಾಜದ ಎಲ್ಲಾ ವರ್ಗದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹಾಗೂ  ಸಹೋದರ ಹೆಚ್ ಡಿ ರೇವಣ್ಣ ಅವರು ಸ್ಥಾನ ಉಳಿಸಿಕೊಳ್ಳಲು ಮುಂದಾಗಿದ್ದಾರೆ.

ಅರಸೀಕೆರೆಯಲ್ಲಿ ಕುಮಾರಸ್ವಾಮಿಯವರ ಪಂಚರತ್ನ ಯಾತ್ರೆಯ ಯಶಸ್ಸಿನಿಂದ ಹುಮ್ಮಸ್ಸಿನಲ್ಲಿರುವ ಮುಖಂಡರು ಕ್ಷೇತ್ರದಲ್ಲಿ ಬಹುಮತ ಹೊಂದಿರುವ ಒಬಿಸಿ, ಎಸ್ಸಿ, ಎಸ್ಟಿ ಮತಗಳನ್ನು ಗುರಿಯಾಗಿಸಿಕೊಂಡಿದ್ದಾರೆ.

ಜೆಡಿಎಸ್ ನಾಯಕರು ಎರಡು ತಿಂಗಳ ಹಿಂದಿನ ಹಳೆಯ ಆಡಿಯೋ ಕ್ಲಿಪ್  ವೈರಲ್ ಮಾಡಿದ್ದಾರೆ, ಇದರಲ್ಲಿ ಶಿವಲಿಂಗೇಗೌಡ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಭಾರೀ ಹಿನ್ನಡೆಗೆ ಕಾರಣಗಳನ್ನು ರೇವಣ್ಣ ಅವರಿಗೆ ಅಂಕಿಅಂಶಗಳೊಂದಿಗೆ ವಿವರಿಸಿದ್ದಾರೆ.

ಮತ್ತೊಂದೆಡೆ, ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಶಶಿಧರ್ ಸೇರಿದಂತೆ ಪ್ರಮುಖ ಲಿಂಗಾಯತ ಮುಖಂಡರನ್ನು ಸೆಳೆಯಲು ಕುಮಾರಸ್ವಾಮಿ ಪ್ರಯತ್ನ ನಡೆಸುತ್ತಿದ್ದಾರೆ. ಶಿವಲಿಂಗೇಗೌಡ  ಕಾಂಗ್ರೆಸ್ ಪಕ್ಷಕ್ಕೆ ಸೇರಲು ನಿರ್ಧರಿಸಿದ ನಂತರ ಶಶಿಧರ್ ಅವರು ಕಾಂಗ್ರೆಸ್ ತೊರೆದಿದ್ದಾರೆ.  ಹೀಗಾಗಿ ಲಿಂಗಾಯತ ನಾಯಕರಾದ ಆದ ನಿರಂಜನ್ ಅವರನ್ನು ಭೇಟಿ ಮಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಪಕ್ಷ ಬೆಂಬಲಿಸುವಂತೆ ಒತ್ತಾಯಿಸಿದ್ದಾರೆ. ಈ ಬೆಳವಣಿಗೆಯಿಂದ ಅರಸೀಕೆರೆ ಕದನ ಹೈವೋಲ್ಟೇಜ್ ಆಗಲಿದೆ.

ಜೆಡಿಎಸ್ ನಾಯಕರು ಉದ್ದೇಶಪೂರ್ವಕವಾಗಿ ಆಡಿಯೋ ವೈರಲ್ ಮಾಡಿದ್ದಾರೆ. ಚುನಾವಣೆ ವೇಳೆ ಲಾಭ ಮಾಡಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ ಎಂದು ಶಾಸಕ ಶಿವಲಿಂಗೇಗೌಡ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT