ಖರ್ಗೆ ಭೇಟಿ ಮಾಡಿದ ಲಿಂಗಾಯತ ಮುಖಂಡರು 
ರಾಜಕೀಯ

ಉತ್ತರ ಮಾತ್ರವಲ್ಲ, ದಕ್ಷಿಣ ಕರ್ನಾಟಕದಲ್ಲಿಯೂ ಸಮುದಾಯದವರಿಗೆ ಹೆಚ್ಚಿನ ಟಿಕೆಟ್ ನೀಡಿ: ಖರ್ಗೆ ಮುಂದೆ ಲಿಂಗಾಯತ ಮುಖಂಡರ ಪಟ್ಟು!

ಕರ್ನಾಟಕದಲ್ಲಿ ಶೇಕಡಾ 16 ರಷ್ಟು ಲಿಂಗಾಯತ ಮತದಾರರಿದ್ದಾರೆ. ದಕ್ಷಿಣ ಕರ್ನಾಟಕದ ಸುಮಾರು 100 ಕ್ಷೇತ್ರಗಳಲ್ಲಿ ಉತ್ತಮ ಪ್ರಾತಿನಿಧ್ಯಕ್ಕಾಗಿ ಅವರು ಕಸರತ್ತು ನಡೆಸುತ್ತಿದ್ದಾರೆ ಮತ್ತು ಈ ಪ್ರದೇಶದಲ್ಲಿ ಕನಿಷ್ಠ 10 ಸ್ಥಾನಗಳನ್ನು ಕೇಳುತ್ತಿದ್ದಾರೆ.

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆಯಿದ್ದು, ಪಕ್ಷದ ಲಿಂಗಾಯತ ಮುಖಂಡರಾದ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಮತ್ತು ಶಾಸಕ ಶಾಮನೂರು ಶಿವಶಂಕರಪ್ಪ ಮತ್ತು ಪಿಸಿಸಿ ಮಾಜಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ಸಮುದಾಯದ ನಾಯಕರಿಗೆ ಹೆಚ್ಚಿನ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ.

ಕೆಲವು ವಾರಗಳ ಹಿಂದೆ, ಲಿಂಗಾಯತ ಮುಖಂಡರು ಬೆಂಗಳೂರಿನಲ್ಲಿ ಸಭೆ ನಡೆಸಿ, ಉತ್ತರ ಕರ್ನಾಟಕ ಮಾತ್ರವಲ್ಲದೆ ದಕ್ಷಿಣ ಕರ್ನಾಟಕದಲ್ಲಿಯೂ ಸಮುದಾಯಕ್ಕೆ ಹೆಚ್ಚಿನ ಟಿಕೆಟ್‌ಗಾಗಿ ಒತ್ತಾಯಿಸಿದ್ದರು.

ಕರ್ನಾಟಕದಲ್ಲಿ ಶೇಕಡಾ 16 ರಷ್ಟು ಲಿಂಗಾಯತ ಮತದಾರರಿದ್ದಾರೆ. ದಕ್ಷಿಣ ಕರ್ನಾಟಕದ ಸುಮಾರು 100 ಕ್ಷೇತ್ರಗಳಲ್ಲಿ ಉತ್ತಮ ಪ್ರಾತಿನಿಧ್ಯಕ್ಕಾಗಿ ಅವರು ಕಸರತ್ತು ನಡೆಸುತ್ತಿದ್ದಾರೆ ಮತ್ತು ಈ ಪ್ರದೇಶದಲ್ಲಿ ಕನಿಷ್ಠ 10 ಸ್ಥಾನಗಳನ್ನು ಕೇಳುತ್ತಿದ್ದಾರೆ.

28 ಸ್ಥಾನಗಳಿರುವ ಬೆಂಗಳೂರು ನಗರದಲ್ಲಿ ಲಿಂಗಾಯತರಿಗೆ ಒಂದು ಅಥವಾ ಎರಡು ಸ್ಥಾನಗಳನ್ನು ನೀಡಬೇಕು, ಅಲ್ಲದೆ ದಕ್ಷಿಣದ ಎಲ್ಲಾ ಜಿಲ್ಲೆಗಳಾದ ತಿಪಟೂರು ಮತ್ತು ತುಮಕೂರಿನ ಚಿಕ್ಕನಾಯಕನಹಳ್ಳಿ, ಕೋಲಾರ, ಹಾಸನ, ಚಿಕ್ಕಬಳ್ಳಾಪುರದಲ್ಲಿ ಒಂದು ಅಥವಾ ಎರಡು ಸ್ಥಾನಗಳನ್ನು ನೀಡಬೇಕು. ಮಂಡ್ಯ, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ. ಚಾಮರಾಜನಗರದ ಗುಂಡ್ಲುಪೇಟೆ, ಮೈಸೂರಿನ ಕೃಷ್ಣರಾಜ ಮತ್ತು ಕೊಡಗಿನ ಮಡಿಕೇರಿ-ಸೋಮವಾರಪೇಟೆಯಲ್ಲೂ ಇದೇ ಮಾದರಿಯನ್ನು ಪರಿಗಣಿಸಬೇಕು ಎಂದು ಸಮುದಾಯ ಹೇಳಿದೆ.

ಸಿಎಲ್‌ಪಿ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಮುಖ್ಯಸ್ಥ ಡಿ ಕೆ ಶಿವಕುಮಾರ್  ಹಾಗೂ ಸ್ಕ್ರೀನಿಂಗ್ ಕಮಿಟಿ ಅಂತಿಮ ಪಟ್ಟಿಯ ಕೆಲಸ ಮಾಡುತ್ತಿದ್ದು, ಲಿಂಗಾಯತ ನಾಯಕರು  ಖರ್ಗೆ ಅವರಿಗೆ ಸೂಕ್ತ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸಿದ್ದಾರೆ.

ಮುಖಂಡರ ಮಾತುಗಳನ್ನು ಆಲಿಸಿರುವ  ಖರ್ಗೆ ಸ್ಕ್ರೀನಿಂಗ್ ಕಮಿಟಿಯು ಪಟ್ಟಿ ಸಿದ್ಧಪಡಿಸುವವರೆಗೆ ಕಾದು ನಂತರ ಸಲಹೆಗಳನ್ನು ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಅಖಿಲ ಭಾರತ ವೀರಶೈವ ಮಹಾಸಭಾ ಕಾರ್ಯದರ್ಶಿ ರೇಣುಕಾ ಪ್ರಸನ್ನ ಮಾತನಾಡಿ, ಹೆಚ್ಚಿನ ಸ್ಥಾನ ಗೆಲ್ಲಬೇಕಾದರೆ ಲಿಂಗಾಯತ ಮತಗಳು ಬೇಕು ಎಂಬುದನ್ನು ಕಾಂಗ್ರೆಸ್ ಅರ್ಥಮಾಡಿಕೊಳ್ಳಬೇಕು ಎಂದಿದ್ದಾರೆ.

ನಾವು ಸಮಾಜದ ಎಲ್ಲಾ ವರ್ಗಗಳನ್ನು ಗೌರವಿಸುತ್ತೇವೆ ಮತ್ತು ಎಲ್ಲರಿಗೂ ಸೂಕ್ತ ಪ್ರಾತಿನಿಧ್ಯವನ್ನು ನೀಡುತ್ತೇವೆ. ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನಮ್ಮ ಮಾನದಂಡಗಳಿವೆ, ಅವುಗಳನ್ನು ಎಲ್ಲರಿಗೂ ಅನ್ವಯಿಸುತ್ತೇವೆ ಎಂದು ಶಿವಕುಮಾರ್ ಹೇಳಿದರು.

ಸುಮಾರು 20 ವರ್ಷಗಳ ನಂತರ  ಮೊದಲ ಬಾರಿಗೆ ಕಾಂಗ್ರೆಸ್ ಲಿಂಗಾಯತ ಮತಗಳಲ್ಲಿ ಬಿರುಕು ಕಾಣುತ್ತಿದೆ. ಉತ್ತಮ ಸಂಖ್ಯೆಯ ಮತಗಳನ್ನು ಮೂಲೆಗುಂಪು ಮಾಡುವ ನಿರೀಕ್ಷೆಯಿದೆ. ಸಮುದಾಯವು ಬಿಜೆಪಿಯ ಹಿಂದೆ ಗಟ್ಟಿಯಾಗಿಲ್ಲ, ಹೀಗಾಗಿ ಲಿಂಗಾಯತ ಸಮುದಾಯದ ಅಸಮಾಧಾನವನ್ನು  ಬಂಡವಾಳ ಮಾಡಿಕೊಳ್ಳಲು  ಕಾಂಗ್ರೆಸ್ ಯತ್ನಿಸುತ್ತಿದೆ.  ಲಿಂಗಾಯತರಿಗೆ ಸುಮಾರು 44-45 ಸ್ಥಾನಗಳನ್ನು ನೀಡುವ ನಿರೀಕ್ಷೆಯಲ್ಲಿರುವ ಕಾಂಗ್ರೆಸ್, 60 ಕ್ಕಿಂತ ಹೆಚ್ಚು ಸ್ಥಾನಗಳನ್ನು ಹೊಂದಿಸಲು ಸಾಧ್ಯವಾಗದಿರಬಹುದು ಎಂದು ರಾಜಕೀಯ ವಿಶ್ಲೇಷಕ ಬಿ.ಎಸ್ ಮೂರ್ತಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT