ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಸಾಲಾಗಿ ನಿಂತ ವಾಹನಗಳು 
ರಾಜಕೀಯ

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಮಳೆ ನೀರು: ನರೇಂದ್ರ ಮೋದಿ ರೋಡ್ ಶೋ ಮಾಡಲು ಕಾಂಗ್ರೆಸ್ ಆಹ್ವಾನ

ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಶುಕ್ರವಾರ ರಾತ್ರಿ ಮಳೆ ನೀರಿನಿಂದ ತುಂಬಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು. ಈ ಕುರಿತ ವಿಡಿಯೋವೊಂದನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. 

ಬೆಂಗಳೂರು: ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಶುಕ್ರವಾರ ರಾತ್ರಿ ಮಳೆ ನೀರಿನಿಂದ ತುಂಬಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು. ಈ ಕುರಿತ ವಿಡಿಯೋವೊಂದನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. 

ಕಳೆದ ವರ್ಷವೇ ಈ ಹೆದ್ದಾರಿ ಮಳೆಯಿಂದ ಮುಳುಗಿತ್ತು. ಈಗ ಮತ್ತೊಮ್ಮೆ ಸಮ್ಣ ಮಳೆಗೆ ಅವಾಂತರ ಸೃಷ್ಟಿಯಾಗಿದೆ ಎಂದರೆ ಇದು ಅವೈಜ್ಞಾನಿಕವಾಗಿರುವ ಬಿಜೆಪಿ ಭ್ರಷ್ಟಪಥ ಅಲ್ಲವೇ ಎಂದು ಪ್ರಶ್ನಿಸಿದೆ. ನರೇಂದ್ರ ಮೋದಿ ಅವರು ಈಗ ಬಂದು ರೋಡ್ ಶೋ ಮಾಡಬೇಕೆಂದು ಆಹ್ವಾನಿಸಿದೆ.  ಕಾರಿನಲ್ಲಿ ರೋಡ್ ಶೋ  ಮಾಡುವರೋ, ಬೋಟಿನಲ್ಲಿ ಮಾಡುವರೋ ಅವರೇ ನಿರ್ಧರಿಸಲಿ! ಎಂದು ವ್ಯಂಗ್ಯವಾಡಿದೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿನ ಅವ್ಯವಸ್ಥೆ ಖಂಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪ್ರಯಾಣಕರ ಜೀವನ್ನು ಬಿಜೆಪಿ ಪಣಕ್ಕಿಟ್ಟಿದೆ ಎಂದು ಆರೋಪಿಸಿದ್ದಾರೆ.

ಬೆಂಗಳೂರು-ಮೈಸೂರು ದಶಪಥ ರಸ್ತೆ ಕ್ರೆಡಿಟ್ ತೆಗೆದುಕೊಳ್ಳುತ್ತಿರುವ ಪುಣ್ಯಾತ್ಮರೆಲ್ಲ ಹೆದ್ದಾರಿ ಜಲಾವೃತ್ತವಾಗಿರುವ ಬಗ್ಗೆ ಮಾತನಾಡಬೇಕು, ದುಬಾರಿ ಟೋಲ್ ಮಾತ್ರ ಬೇಕು ಆದರೆ, ಅದಕ್ಕೆ ತಕ್ಕ ಸೇವೆ ಒದಗಿಸುವುದು ಸಾಧ್ಯವಿಲ್ಲ. ಪ್ರಯಾಣಿಕರ ಜೀವವನ್ನು ಬಿಜೆಪಿಯ ಶೇ. 40 ರಷ್ಟು ವ್ಯವಹಾರ ಸರ್ಕಾರ ಪಣಕ್ಕಿಟ್ಟಿದೆ. ಭ್ರಷ್ಟಚಾರ ಬಿಟ್ಟರೆ ನಿಮ್ಮ ಕೊಡುಗೆ ಏನಿದೆ ಎಂದು ಪ್ರಶ್ನೆ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT