ಬಿಜೆಪಿ ಕಾರ್ಯಕ್ರಮದಲ್ಲಿ ಶಿವರಾಮೇಗೌಡ 
ರಾಜಕೀಯ

ಸೈಲೆಂಟ್ ಸುನೀಲ್ ಬೆನ್ನಲ್ಲೇ ಫೈಟರ್ ರವಿಗೂ ಬಿಜೆಪಿ ಶಾಕ್; ಶಿವರಾಮೇಗೌಡಗೆ ನಾಗಮಂಗಲ ಟಿಕೆಟ್?

ಚಾಮರಾಜಪೇಟೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ರೌಡಿಶೀಟರ್ ಸೈಲೆಂಟ್ ಸುನೀಲ್ ಗೆ ಶಾಕ್ ಕೊಟ್ಟಿದ್ದ ಬಿಜೆಪಿ ಇದೀಗ ಫೈಟರ್ ರವಿಗೂ ಆಘಾತ ನೀಡಿದ್ದು, ನಾಗಮಂಗಲ ಕ್ಷೇತ್ರದ ಟಿಕೆಟ್ ಅನ್ನು ಎಲ್. ಆರ್. ಶಿವರಾಮೇಗೌಡಗೆ ನೀಡುವ ಕುರಿತು ನಿರ್ಧರಿಸಿದೆ ಎನ್ನಲಾಗಿದೆ.

ಮಂಡ್ಯ: ಚಾಮರಾಜಪೇಟೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ರೌಡಿಶೀಟರ್ ಸೈಲೆಂಟ್ ಸುನೀಲ್ ಗೆ ಶಾಕ್ ಕೊಟ್ಟಿದ್ದ ಬಿಜೆಪಿ ಇದೀಗ ಫೈಟರ್ ರವಿಗೂ ಆಘಾತ ನೀಡಿದ್ದು, ನಾಗಮಂಗಲ ಕ್ಷೇತ್ರದ ಟಿಕೆಟ್ ಅನ್ನು ಎಲ್. ಆರ್. ಶಿವರಾಮೇಗೌಡಗೆ ನೀಡುವ ಕುರಿತು ನಿರ್ಧರಿಸಿದೆ ಎನ್ನಲಾಗಿದೆ.

ಹೌದು.. ನಾಗಮಂಗಲ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಫೈಟರ್ ರವಿಗೂ ಶಾಕಿಂಗ್ ನ್ಯೂಸ್ ಸಿಕ್ಕಿದ್ದು, ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಶ್ ಬೆಂಬಲಿಸಿದ ಬಳಿಕ ಮಾಜಿ ಸಂಸದ L.R ಶಿವರಾಮೇಗೌಡರು ಬಿಜೆಪಿ ಪಕ್ಷ ಸೇರೋದು ಪಕ್ಕಾ ಆಗಿದೆ. ಇಂದು ಬೆಂಗಳೂರಿನಲ್ಲಿ ನಾಗಮಂಗಲ ನಿವಾಸಿಗಳ ಸಮಾವೇಶ ನಡೆದಿದ್ದು, ಈ ಸಭೆಯಲ್ಲಿ ಬಿಜೆಪಿ ಸೇರ್ಪಡೆ ಬಗ್ಗೆ ಶಿವರಾಮೇಗೌಡರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ನಾಗಮಂಗಲ ನಿವಾಸಿಗಳ ಸಮಾವೇಶದಲ್ಲಿ ಸಚಿವ ಮುನಿರತ್ನ ಭಾಗಿಯಾಗಿದ್ದರು. ಸಚಿವ ಮುನಿರತ್ನ ಇದ್ದ ವೇದಿಕೆಯಲ್ಲೇ ಎಲ್.ಆರ್. ಶಿವರಾಮೇಗೌಡ, ಇನ್ನು ಮೂರರಿಂದ ನಾಲ್ಕು ದಿನದಲ್ಲಿ ಬಿಜೆಪಿ ಸೇರುತ್ತೇನೆ. ನಾಗಮಂಗಲದಲ್ಲಿ ಬೃಹತ್ ಸಮಾವೇಶ ಮಾಡಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ. ಮಂಡ್ಯದ ಎಲ್ಲಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸಲು ನಾನು ಶ್ರಮಿಸುತ್ತೇನೆ ಎಂದು ಘೋಷಣೆ ಮಾಡಿದರು.

ಮೂಲಗಳ ಪ್ರಕಾರ L.R ಶಿವರಾಮೇಗೌಡರು ಈಗಾಗಲೇ ಬಿಜೆಪಿ ನಾಯಕರೊಂದಿಗೆ ಪಕ್ಷ ಸೇರ್ಪಡೆ ಕುರಿತು ಮಾತುಕತೆ ಮಾಡಿ ಮುಗಿಸಿದ್ದಾರೆ. ನಾಗಮಂಗಲದಲ್ಲಿ ಫೈಟರ್ ರವಿ ಬದಲಿಗೆ ಶಿವರಾಮೇಗೌಡರಿಗೆ ಟಿಕೆಟ್ ನೀಡಲು ಬಿಜೆಪಿ ನಿರ್ಧರಿಸಿದೆ ಎನ್ನಲಾಗಿದೆ.
 
ಕೆಲ ತಿಂಗಳ ಹಿಂದಷ್ಟೇ ಫೈಟರ್ ರವಿ ಬಿಜೆಪಿ ಪಕ್ಷವನ್ನ ಸೇರಿದ್ದರು. ಫೈಟರ್ ರವಿ ಕಮಲ ಹಿಡಿಯುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸುದ್ದಿಯಾಗಿತ್ತು. ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಮಂಡ್ಯಕ್ಕೆ ಆಗಮಿಸಿದ ವೇಳೆ ಫೈಟರ್ ರವಿ ನಮಸ್ಕರಿಸಿದ್ದು ವಿರೋಧ ಪಕ್ಷಗಳ ಟೀಕೆಗೆ ಗುರಿಯಾಗಿತ್ತು. ಈ ಎಲ್ಲಾ ಬೆಳವಣಿಗೆಗಳು ಬಿಜೆಪಿ ನಾಯಕರಿಗೆ ಇರಿಸು ಮುರಿಸು ತಂದಿತ್ತು. ವಿರೋಧಿಗಳ ಬಾಯಿ ಮುಚ್ಚಿಸಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿದೆ.

ನಾಗಮಂಗಲದಲ್ಲಿ ಫೈಟರ್ ರವಿ ಬದಲು ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡರನ್ನ ಕರೆತಂದು ಬಿಜೆಪಿ ಟಿಕೆಟ್ ಕೊಡಲು ತಯಾರಿ ನಡೆಸಿದೆ. ಶಿವರಾಮೇಗೌಡರು ಬಿಜೆಪಿ ಸೇರ್ಪಡೆಯೊಂದಿಗೆ ಫೈಟರ್ ರವಿಗೆ ನಾಗಮಂಗಲ ಬಿಜೆಪಿ ಟಿಕೆಟ್ ಇಲ್ಲ ಎನ್ನುವ ಸ್ಪಷ್ಟ ಸಂದೇಶ ರವಾನೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT