ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ 
ರಾಜಕೀಯ

ಕ್ಷೇತ್ರ ಆಯ್ಕೆ ಗೊಂದಲ: ಮತ್ತೆ ವರಿಷ್ಠರ ಭೇಟಿಗೆ ಸಿದ್ದರಾಮಯ್ಯ ನಿರ್ಧಾರ, ಶೀಘ್ರ ದೆಹಲಿಗೆ!

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸಬೇಕೇ ಇಲ್ಲವೇ ಮೈಸೂರಿನ ವರುಣಾ ಕ್ಷೇತ್ರದಿಂದ ಸ್ಪರ್ಧಿಸಬೇಕೇ ಅಥವಾ ಎರಡೂ ಕ್ಷೇತ್ರದಿಂದ ಸ್ಪರ್ಧೆಗಿಳಿಯಬೇಕೇ ಎಂಬ ಬಗ್ಗೆ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವರಿಷ್ಠರ ಸಲಹೆ ಪಡೆಯಲು ನಿರ್ಧರಿಸಿದ್ದಾರೆ.

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸಬೇಕೇ ಇಲ್ಲವೇ ಮೈಸೂರಿನ ವರುಣಾ ಕ್ಷೇತ್ರದಿಂದ ಸ್ಪರ್ಧಿಸಬೇಕೇ ಅಥವಾ ಎರಡೂ ಕ್ಷೇತ್ರದಿಂದ ಸ್ಪರ್ಧೆಗಿಳಿಯಬೇಕೇ ಎಂಬ ಬಗ್ಗೆ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವರಿಷ್ಠರ ಸಲಹೆ ಪಡೆಯಲು ನಿರ್ಧರಿಸಿದ್ದಾರೆ.

ಮೂಲಗಳ ಪ್ರಕಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನವಾರ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬ ಬಗ್ಗೆ ಅಂತಿಮ ತೀರ್ಮಾನ ಮಾಡಲಿದ್ದಾರೆ ಎಂದು ಹೇಳಲಾಗಿದೆ. ನಾಳೆ ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ರಾಜ್ಯಕ್ಕೆ ಆಗಮಿಸಲಿದ್ದು, ರಾಜ್ಯ ಕಾಂಗ್ರೆಸ್ ಬೆಳಗಾವಿಯಲ್ಲಿ ಆಯೋಜಿಸಿರುವ ಯುವ ಸಮಾವೇಶದಲ್ಲಿ ಭಾಗಿಯಾಗುವರು. ಈ ಸಮಾವೇಶದಲ್ಲಿ ಸಿದ್ದರಾಮಯ್ಯರವರು ಪಾಲ್ಗೊಳ್ಳಲಿದ್ದು, ಈ ಸಮಾವೇಶ ಮುಗಿಸಿಕೊಂಡು ಸಿದ್ದರಾಮಯ್ಯ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.

ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡಿ ಎಲ್ಲವನ್ನೂ ಚರ್ಚಿಸಿದ ನಂತರ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂಬುದು ಅಂತಿಮಗೊಳ್ಳಲಿದೆ. ಈ ಮೊದಲು ಸಿದ್ದರಾಮಯ್ಯರವರು ಕೋಲಾರದಿಂದ ಕಣಕ್ಕಿಳಿಯಲು ನಿರ್ಧರಿಸಿದ್ದರು. ಆದರೆ, ರಾಹುಲ್‌ಗಾಂಧಿ ಅವರು ಕೋಲಾರಕ್ಷೇತ್ರ ಅಷ್ಟು ಸುರಕ್ಷಿತವಲ್ಲ. ಕೋಲಾರದ ಬದಲು ವರುಣಾದಿಂದ ಸ್ಪರ್ಧಿಸಿ ಎಂದು ಸಲಹೆ ಮಾಡಿದರು. ಇದರಿಂದ ಸಿದ್ದರಾಮಯ್ಯ ಅವರು ಕ್ಷೇತ್ರ ಆಯ್ಕೆ ಬಗ್ಗೆ ಗೊಂದಲಕ್ಕೆ ಒಳಗಾಗಿದ್ದರು. ಈ ಎಲ್ಲ ಗೊಂದಲಗಳನ್ನು ಬಗೆಹರಿಸಿಕೊಳ್ಳಲು ಗೊಂದಲಗಳಿಗೆ ತೆರೆ ಎಳೆದು ಅಂತಿಮ ತೀರ್ಮಾನ ಕೈಗೊಳ್ಳಲು ವರಿಷ್ಠರನ್ನು ಸಿದ್ದರಾಮಯ್ಯ ಮತ್ತೆ ಭೇಟಿ ಮಾಡಲಿದ್ದಾರೆ.

ಅವರ ಮುಂದಿನ ದೆಹಲಿ ಭೇಟಿಯಲ್ಲಿ ಕ್ಷೇತ್ರ ಗೊಂದಲ ಇತ್ಯರ್ಥವಾಗಲಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ