ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ 
ರಾಜಕೀಯ

ಕ್ಷೇತ್ರ ಆಯ್ಕೆ ಗೊಂದಲ: ಮತ್ತೆ ವರಿಷ್ಠರ ಭೇಟಿಗೆ ಸಿದ್ದರಾಮಯ್ಯ ನಿರ್ಧಾರ, ಶೀಘ್ರ ದೆಹಲಿಗೆ!

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸಬೇಕೇ ಇಲ್ಲವೇ ಮೈಸೂರಿನ ವರುಣಾ ಕ್ಷೇತ್ರದಿಂದ ಸ್ಪರ್ಧಿಸಬೇಕೇ ಅಥವಾ ಎರಡೂ ಕ್ಷೇತ್ರದಿಂದ ಸ್ಪರ್ಧೆಗಿಳಿಯಬೇಕೇ ಎಂಬ ಬಗ್ಗೆ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವರಿಷ್ಠರ ಸಲಹೆ ಪಡೆಯಲು ನಿರ್ಧರಿಸಿದ್ದಾರೆ.

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸಬೇಕೇ ಇಲ್ಲವೇ ಮೈಸೂರಿನ ವರುಣಾ ಕ್ಷೇತ್ರದಿಂದ ಸ್ಪರ್ಧಿಸಬೇಕೇ ಅಥವಾ ಎರಡೂ ಕ್ಷೇತ್ರದಿಂದ ಸ್ಪರ್ಧೆಗಿಳಿಯಬೇಕೇ ಎಂಬ ಬಗ್ಗೆ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವರಿಷ್ಠರ ಸಲಹೆ ಪಡೆಯಲು ನಿರ್ಧರಿಸಿದ್ದಾರೆ.

ಮೂಲಗಳ ಪ್ರಕಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನವಾರ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬ ಬಗ್ಗೆ ಅಂತಿಮ ತೀರ್ಮಾನ ಮಾಡಲಿದ್ದಾರೆ ಎಂದು ಹೇಳಲಾಗಿದೆ. ನಾಳೆ ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ರಾಜ್ಯಕ್ಕೆ ಆಗಮಿಸಲಿದ್ದು, ರಾಜ್ಯ ಕಾಂಗ್ರೆಸ್ ಬೆಳಗಾವಿಯಲ್ಲಿ ಆಯೋಜಿಸಿರುವ ಯುವ ಸಮಾವೇಶದಲ್ಲಿ ಭಾಗಿಯಾಗುವರು. ಈ ಸಮಾವೇಶದಲ್ಲಿ ಸಿದ್ದರಾಮಯ್ಯರವರು ಪಾಲ್ಗೊಳ್ಳಲಿದ್ದು, ಈ ಸಮಾವೇಶ ಮುಗಿಸಿಕೊಂಡು ಸಿದ್ದರಾಮಯ್ಯ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.

ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡಿ ಎಲ್ಲವನ್ನೂ ಚರ್ಚಿಸಿದ ನಂತರ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂಬುದು ಅಂತಿಮಗೊಳ್ಳಲಿದೆ. ಈ ಮೊದಲು ಸಿದ್ದರಾಮಯ್ಯರವರು ಕೋಲಾರದಿಂದ ಕಣಕ್ಕಿಳಿಯಲು ನಿರ್ಧರಿಸಿದ್ದರು. ಆದರೆ, ರಾಹುಲ್‌ಗಾಂಧಿ ಅವರು ಕೋಲಾರಕ್ಷೇತ್ರ ಅಷ್ಟು ಸುರಕ್ಷಿತವಲ್ಲ. ಕೋಲಾರದ ಬದಲು ವರುಣಾದಿಂದ ಸ್ಪರ್ಧಿಸಿ ಎಂದು ಸಲಹೆ ಮಾಡಿದರು. ಇದರಿಂದ ಸಿದ್ದರಾಮಯ್ಯ ಅವರು ಕ್ಷೇತ್ರ ಆಯ್ಕೆ ಬಗ್ಗೆ ಗೊಂದಲಕ್ಕೆ ಒಳಗಾಗಿದ್ದರು. ಈ ಎಲ್ಲ ಗೊಂದಲಗಳನ್ನು ಬಗೆಹರಿಸಿಕೊಳ್ಳಲು ಗೊಂದಲಗಳಿಗೆ ತೆರೆ ಎಳೆದು ಅಂತಿಮ ತೀರ್ಮಾನ ಕೈಗೊಳ್ಳಲು ವರಿಷ್ಠರನ್ನು ಸಿದ್ದರಾಮಯ್ಯ ಮತ್ತೆ ಭೇಟಿ ಮಾಡಲಿದ್ದಾರೆ.

ಅವರ ಮುಂದಿನ ದೆಹಲಿ ಭೇಟಿಯಲ್ಲಿ ಕ್ಷೇತ್ರ ಗೊಂದಲ ಇತ್ಯರ್ಥವಾಗಲಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT