ಬಸವರಾಜ ಬೊಮ್ಮಾಯಿ 
ರಾಜಕೀಯ

‘ಯಾವನ್ ಹೇಳಿದ್ದು'? ಶಿಗ್ಗಾವಿ ಬಿಡ್ತಿನಿ ಅಂತಾ, ಯಾವುದೇ ಕಾರಣಕ್ಕೂ ಕ್ಷೇತ್ರ ಬಿಡೋದಿಲ್ಲ: ಸಿಎಂ ಬೊಮ್ಮಾಯಿ ಕೆಂಡಾ ಮಂಡಲ

‘ನಾನು ಕ್ಷೇತ್ರ ಬಿಡ್ತೀನಿ ಅಂತ ಯಾವನ್ ಹೇಳಿದ್ದು?’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಧ್ಯಮದವರ ಮೇಲೆ ಸಿಟ್ಟಿನಿಂದ ಸೋಮವಾರ ಹರಿಹಾಯ್ದರು.

ಹಾವೇರಿ: ‘ನಾನು ಕ್ಷೇತ್ರ ಬಿಡ್ತೀನಿ ಅಂತ ಯಾವನ್ ಹೇಳಿದ್ದು?’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಧ್ಯಮದವರ ಮೇಲೆ ಸಿಟ್ಟಿನಿಂದ ಸೋಮವಾರ ಹರಿಹಾಯ್ದರು.

ಸವಣೂರಿನ ಉಪವಿಭಾಗಾಧಿಕಾರಿಗಳ ನೂತನ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುವಾಗ, ‘ಬೊಮ್ಮಾಯಿ ಅವರು ಶಿಗ್ಗಾವಿ ಕ್ಷೇತ್ರ ಬಿಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ’ ಎಂಬ ಪ್ರಶ್ನೆ ಎದುರಾಯಿತು. ‘ಯಾವನ್ ಹೇಳಿದ್ದು..?. ಯಾವುದೇ ಕಾರಣಕ್ಕೂ ಶಿಗ್ಗಾವಿ ಕ್ಷೇತ್ರ ಬಿಡೋದಿಲ್ಲ‘ ಎಂದು ಕೋಪದಿಂದ ಹೇಳಿದರು.

ನಾನು ಯಾವುದೇ ಕಾರಣಕ್ಕೂ ಶಿಗ್ಗಾಂವಿ ಕ್ಷೇತ್ರ ಬಿಟ್ಟು ಬೇರೆಡೆ ಹೋಗುವುದಿಲ್ಲ, ನಾನು ಕ್ಷೇತ್ರ ಬಿಡುತ್ತೇನೆ ಅಂತ ಯಾರ್ ಹೇಳಿದ್ರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮರುಪ್ರಶ್ನೆ ಹಾಕಿದ್ದಾರೆ. ಈ ಮೂಲಕ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬೊಮ್ಮಾಯಿ ಬೇರೆ ಕ್ಷೇತ್ರದಿಂದ ಸ್ಪರ್ಧೆಗಿಳಿಯುತ್ತಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಈ ಕ್ಷೇತ್ರದಲ್ಲಿ ಆರೋಗ್ಯ ಮತ್ತು ಶಿಕ್ಷಣ ರಂಗದಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಹಿಂದೆಂದೂ ಆಗದಷ್ಟು ಅಭಿವೃದ್ಧಿ ಕೆಲಸಗಳು ಈ ಕ್ಷೇತ್ರದಲ್ಲಿ ಆಗಿವೆ. ಕ್ಷೇತ್ರದ ಜನರ ನಿರೀಕ್ಷೆಗೆ ತಕ್ಕಂತೆ ಎಲ್ಲ ಕೆಲಸಗಳನ್ನು ಮಾಡಿದ್ದೇನೆ. ಶೀಘ್ರದಲ್ಲಿ ಹಾವೇರಿ ಮೆಡಿಕಲ್ ಕಾಲೇಜು ಉದ್ಘಾಟಿಸಲಿದ್ದೇನೆ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT