ಮೋದಿ-ಅಮಿತ್ ಶಾ 
ರಾಜಕೀಯ

ಮತ್ತೆ ಅಧಿಕಾರಕ್ಕೇರುವ ಹಠ ತೊಟ್ಟ ಬಿಜೆಪಿ; ರಾಜ್ಯಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ ಸತತ ಭೇಟಿ

ರಾಜ್ಯ ವಿಧಾನಸಭೆ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಆಡಳಿತರೂಢ ಬಿಜೆಪಿ ಮತ್ತೆ ಅಧಿಕಾರ ಹಿಡಿಯಲು ಹಠ ತೊಟ್ಟಂತಿದೆ.

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಆಡಳಿತರೂಢ ಬಿಜೆಪಿ ಮತ್ತೆ ಅಧಿಕಾರ ಹಿಡಿಯಲು ಹಠ ತೊಟ್ಟಂತಿದೆ.

ಪ್ರಧಾನಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜ್ಯಕ್ಕೆ ಸತತ ಭೇಟಿ ನೀಡುವ ಮೂಲಕ ಚುನಾವಣಾ ಕಾವು ಏರಿಸುತ್ತಿದ್ದು, ಬಿಜೆಪಿ ತನ್ನ ಪ್ರಚಾರಕ್ಕೆ ಹೊಸ ಹುರುಪು ತುಂಬಲು ಈ ಇಬ್ಬರು ಹಿರಿಯ ನಾಯಕರನ್ನೇ ನೆಚ್ಚಿಕೊಂಡಿದೆ.

ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸುತ್ತಿರುವ ಅಮಿತ್ ಶಾ ಅವರು ಶುಕ್ರವಾರ ರಾಜ್ಯ ಬಿಜೆಪಿಯ ಪ್ರಬಲ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಅವರ ನಿವಾಸದಲ್ಲಿ ಉಪಹಾರ ಸಭೆ ನಡೆಸಲಿದ್ದಾರೆ.

ನಂತರ ಅಮಿತ್ ಶಾ ಅವರು, ದಕ್ಷಿಣ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಮಾದಕ ದ್ರವ್ಯಗಳ ಕಳ್ಳಸಾಗಣೆ ಮತ್ತು ರಾಷ್ಟ್ರೀಯ ಭದ್ರತೆಯ ಪ್ರಾದೇಶಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.

ಸಹಕಾರ ಖಾತೆಯನ್ನು ಹೊಂದಿರುವ ಅಮಿತ್ ಶಾ, ನಂತರ ಬೆಂಗಳೂರಿನ ಹೊರವಲಯದಲ್ಲಿರುವ ಕೊಮ್ಮಘಟ್ಟ ಗ್ರಾಮಕ್ಕೆ ಭೇಟಿ ನೀಡಲಿದ್ದು, ಅಲ್ಲಿ 'ಸಹಕಾರ ಸಮೃದ್ಧಿ ಸೌಧ'ಕ್ಕೆ ಶಂಕುಸ್ಥಾಪನೆ ಮತ್ತು ಸಹಕಾರ ಸಚಿವಾಲಯದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ.

ಬಿಜೆಪಿ ಮೂಲಗಳ ಪ್ರಕಾರ, ಅಮಿತ್ ಶಾ ಅವರು ಮಾರ್ಚ್ 26ರಂದು ಮತ್ತೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.

ಇನ್ನು ಪ್ರಧಾನಿ ಮೋದಿ ಅವರು ಕಳೆದ ಮೂರು ತಿಂಗಳಲ್ಲಿ ರಾಜ್ಯಕ್ಕೆ ಆರು ಬಾರಿ ಭೇಟಿ ನೀಡಿದ್ದು,  ಶನಿವಾರ ಏಳನೇ ಬಾರಿ ಭೇಟಿ ನೀಡುತ್ತಿದ್ದಾರೆ. ಅಂದು ಕೆಆರ್‌ ಪುರಂ-ವೈಟ್‌ಫೀಲ್ಡ್ ಮೆಟ್ರೋಗೆ ಚಾಲನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಮತ್ತು ಬಿಜೆಪಿ ಆಯೋಜಿಸಿದ್ದ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ನಂತರ ಚಿಕ್ಕಬಳ್ಳಾಪುರ, ಬೆಂಗಳೂರು, ದಾವಣಗೆರೆ ಜಿಲ್ಲೆಗಳಲ್ಲಿ ಆಯೋಜಿಸಿರುವ ಕಾರ್ಯಕ್ರಮಗಳಲ್ಲಿ ಮೋದಿ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT