ಪ್ರತಾಪ್ ಸಿಂಹ 
ರಾಜಕೀಯ

ರೇವಣ್ಣಗೆ ಭವಾನಿ ಚಿಂತೆ, ಕುಮಾರಣ್ಣನಿಗೆ ನಿಖಿಲ್ ಚಿಂತೆ, ಭಾಗ್ಯವಿಧಾತ ಸಿದ್ದರಾಮಯ್ಯಗೆ ಕ್ಷೇತ್ರದ್ದೇ ಚಿಂತೆ: ಪ್ರತಾಪ್ ಸಿಂಹ ವ್ಯಂಗ್ಯ

ಅನ್ನಭಾಗ್ಯ, ಶಾದಿ ಭಾಗ್ಯ, ಕ್ಷೀರಭಾಗ್ಯ ಮುಂತಾದ ಭಾಗ್ಯಗಳನ್ನು ಕೊಟ್ಟ ಸಿದ್ದರಾಮ್ಯನವರಿಗೆ ಕ್ಷೇತ್ರ ಭಾಗ್ಯವೇ ಇಲ್ಲ. ಅವರು ಕ್ಷೇತ್ರವನ್ನು ಹುಡುಕುವ ದುಃಸ್ಥಿತಿ ಬಂದಿದೆ ಎಂದು ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ.

ಕೊಡಗು: ಅನ್ನಭಾಗ್ಯ, ಶಾದಿ ಭಾಗ್ಯ, ಕ್ಷೀರಭಾಗ್ಯ ಮುಂತಾದ ಭಾಗ್ಯಗಳನ್ನು ಕೊಟ್ಟ ಸಿದ್ದರಾಮ್ಯನವರಿಗೆ ಕ್ಷೇತ್ರ ಭಾಗ್ಯವೇ ಇಲ್ಲ. ಅವರು ಕ್ಷೇತ್ರವನ್ನು ಹುಡುಕುವ ದುಃಸ್ಥಿತಿ ಬಂದಿದೆ ಎಂದು ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ.

ಕೊಡಗಿನಲ್ಲಿ ಮಾತನಾಡಿದ ಅವರು, ಎಲ್ಲಾ ಭಾಗ್ಯಗಳನ್ನು ಕೊಟ್ಟು ಈಗ ಒಂದು ಕ್ಷೇತ್ರಕ್ಕಾಗಿ ಹುಡುಕಾಡುತ್ತಿರುವುದನ್ನು ನೋಡಿದರೆ ಆಶ್ಚರ್ಯ ಮತ್ತು ಸೋಜಿವಾಗುತ್ತದೆ ಎಂದರು.

ಯುಗಾದಿ ಹಬ್ಬದ ದಿನದಂದು ಕಾಂಗ್ರೆಸ್ ಅಭ್ಯರ್ಥಿಗಳ ಟಿಕೆಟ್ ಘೋಷಣೆ ಆಗಬೇಕಾಗಿತ್ತು. ಆದರೆ ಯಾಕೆ ಇವತ್ತಿನವರೆಗೆ ಟಿಕೆಟ್ ಘೋಷಣೆ ಆಗಿಲ್ಲ. ಇವರಿಗೆ ಯಾರಿಗೂ ರಾಜ್ಯ ಮತ್ತು ದೇಶದ ಚಿಂತೆಯಿಲ್ಲ. ಸಿದ್ದರಾಮಯ್ಯಗೆ ಕ್ಷೇತ್ರದ ಚಿಂತೆ ಆದರೆ ಅವರ ಧರ್ಮಪತ್ನಿಗೆ ಪುತ್ರನ ಚಿಂತೆ.

ರೇವಣ್ಣ ಅವರಿಗೆ ಭವಾನಿಯವರ ಚಿಂತೆಯಾದರೆ, ಕುಮಾರಣ್ಣನಿಗೆ ನಿಖಿಲ್ ನ ಚಿಂತೆ. ಹೀಗಾಗಿ ಇವರಿಗೆಲ್ಲ ಅವರವರ ಕುಟುಂಬಗಳ ಚಿಂತೆ ಇದೆಯೇ ಹೊರತ್ತು, ಇವರಿಗೆ ರಾಜ್ಯದ ಚಿಂತೆ ಇಲ್ಲ. ಹೀಗಾಗಿ ರಾಜ್ಯದ ಚಿಂತೆ ಇದೆ ಎಂದು ಯಾರು ಮಂಗಗಳಾಗಬೇಡಿ ಎಂದು ಜನರಿಗೆ ಮನವಿ ಮಾಡಿದರು.

ಇವರು ಕೊಡುವ 200 ಯುನಿಟ್ ವಿದ್ಯುತ್, ಗೃಹಿಣಿಯರಿಗೆ 2000 ಗೃಹಲಕ್ಷ್ಮಿ ಯೋಜನೆ ಕೊಡುತ್ತೇವೆ ಎನ್ನುವುದೆನ್ನೆಲ್ಲ ನಂಬಬೇಡಿ. ಪಂಜಾಬ್ ನಲ್ಲಿ ಎಎಪಿಯವರು ಇದನ್ನೇ ಹೇಳಿ ಟೋಪಿ ಹಾಕಿದ್ದಾರೆ. ಈಗ ರಾಜ್ಯದ ಜನತೆಗೆ ಟೋಪಿಹಾಕಲು ಬರುತ್ತಿದ್ದಾರೆ. ಹೀಗಾಗಿ ಇವರನ್ನು ನಂಬಬೇಡಿ ಎಂದು ಪ್ರತಾಪ್ ಸಿಂಹತಿರುಗೇಟು ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

Karnataka CM News LIVE Updates | ಸಿದ್ದರಾಮಯ್ಯ ರಾಜೀನಾಮೆ; ಸಿಎಲ್‌ಪಿ ಸಭೆ ಶನಿವಾರ; ಅಂದೇ ನೂತನ ಸಿಎಂ ಪ್ರಮಾಣ ವಚನ ಸಾಧ್ಯತೆ!

Siddaramaiah Resign: ಇನ್ಮುಂದೆ ಗ್ಯಾರಂಟಿ ಯೋಜನೆಗಳು ಇರಲ್ಲ, 2028ರಲ್ಲಿ ಕಾಂಗ್ರೆಸ್ 40 ಸ್ಥಾನ ಕೂಡಾ ಗೆಲ್ಲಲ್ಲ- ಲಖನ್ ಜಾರಕಿಹೊಳಿ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

ನಿಮ್ಮ ಪ್ರೀತಿಗೆ ಧನ್ಯವಾದ: ರಾಜೀನಾಮೆ ನೀಡಿದ ಬಳಿಕ ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಭಾವುಕ ಪೋಸ್ಟ್!

SCROLL FOR NEXT