ರಕ್ಷಾ ರಾಮಯ್ಯ 
ರಾಜಕೀಯ

ಮೊದಲ ಬಾರಿ ಮತದಾನ ಮಾಡುವ 'ಯುವಜನರ' ಸೆಳೆಯಲು ರಕ್ಷಾ ರಾಮಯ್ಯಗೆ ಜವಾಬ್ದಾರಿ

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಯುವ ಜನತೆ ಸೆಳೆಯಲು ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ  ರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಹೊಸ ಜವಾಬ್ದಾರಿ ನೀಡಿದೆ.

ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಯುವ ಜನತೆ ಸೆಳೆಯಲು ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ  ರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಹೊಸ ಜವಾಬ್ದಾರಿ ನೀಡಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು  ಅಧಿಕಾರಕ್ಕೆತರುವಲ್ಲಿ ಯುವ ಅದರಲ್ಲೂ ಮೊದಲ ಬಾರಿಗೆ ಮತದಾನ ಮಾಡುತ್ತಿರುವವರನ್ನು ಸೆಳೆಯುವ ಜವಾಬ್ದಾರಿ ವಹಿಸಿದ್ದಾರೆ.

ರಾಜ್ಯದ  ಕಾಂಗ್ರೆಸ್ ಉಸ್ತುವಾರಿ ಹಾಗೂ ಎಐಸಿಸಿ ಪ್ರದಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಈ ನೇಮಕ ಮಾಡಿದ್ದು, ರಾಜ್ಯದಲ್ಲಿ ಮೊದಲ ಬಾರಿ ಮತದಾನ ಮಾಡುತ್ತಿರುವವರನ್ನು ಪತ್ತೆ ಮಾಡಿ ಅವರನ್ನು ಪಕ್ಷದತ್ತ ಸೆಳೆಯುವ ಕೆಲಸವನ್ನು ಕೂಡಲೇ ಆರಂಭಿಸುವಂತೆ ಸೂಚಿಸಿದ್ದಾರೆ. 

ಈ ಕುರಿತು ಪ್ರತಿಕ್ರಿಯಿಸಿರುವ ರಕ್ಷಾ ರಾಮಯ್ಯ, ಚುನಾವಣೆ ಪ್ರಜಾಪ್ರಭುತ್ವದ ಹಬ್ಬ, ಉತ್ಸವ. ಹೀಗಾಗಿ ಈ ಚುನಾವಣೆಯಲ್ಲಿ ವಿಶೇಷವಾಗಿ ಯುವ ಜನಾಂಗವನ್ನು ಸೆಳೆದು ವರಿಷ್ಠರು ತಮ್ಮ ಮೇಲಿಟ್ಟಿರುವ ನಿರೀಕ್ಷೆಯನ್ನು ಸಾಕಾರಗೊಳಿಸಲು ಪ್ರಯತ್ನಿಸುತ್ತೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನಾಯಕತ್ವ ಹಾಗೂ ಮಾರ್ಗದರ್ಶನದಲ್ಲಿ ರಚನಾತ್ಮಕ ಕಾರ್ಯಕ್ರಮಗಳನ್ನು ಕೈಗೊಂಡು ಪಕ್ಷದ ಪರ ಪ್ರಚಾರ ಬಿರುಸುಗೊಳಿಸುವುದಾಗಿ ತಿಳಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT