ವಿನಯ್ ಕುಲಕರ್ಣಿ 
ರಾಜಕೀಯ

ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಮಹಿಳಾಮಣಿಯರ ಪೈಪೋಟಿ: ವಿನಯ್ ಕುಲಕರ್ಣಿ ಪತ್ನಿ v/s ಸೀಮಾ ಸಾದಿಖಾ; ಯಾರಿಗೆ ಕಾಂಗ್ರೆಸ್ ಟಿಕೆಟ್?

ಮುಂಬರುವ ವಿಧಾನಸಭಾ ಚುನಾವಣೆಗೂ ಮುನ್ನ ಧಾರವಾಡ ಗ್ರಾಮೀಣ ಕ್ಷೇತ್ರದ ಟಿಕೆಟ್‌ಗಾಗಿ ಕಾಂಗ್ರೆಸ್‌ನಲ್ಲಿ ಪೈಪೋಟಿ ಏರ್ಪಟ್ಟಿದೆ. ಇದುವರೆಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಮಾತ್ರ  ಆಕಾಂಕ್ಷಿಯಾಗಿದ್ದರು.

ಧಾರವಾಡ: ಮುಂಬರುವ ವಿಧಾನಸಭಾ ಚುನಾವಣೆಗೂ ಮುನ್ನ ಧಾರವಾಡ ಗ್ರಾಮೀಣ ಕ್ಷೇತ್ರದ ಟಿಕೆಟ್‌ಗಾಗಿ ಕಾಂಗ್ರೆಸ್‌ನಲ್ಲಿ ಪೈಪೋಟಿ ಏರ್ಪಟ್ಟಿದೆ. ಇದುವರೆಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಮಾತ್ರ  ಆಕಾಂಕ್ಷಿಯಾಗಿದ್ದರು. ಇದೀಗ ವೈದ್ಯೆ ಸೀಮಾ ಸಾದಿಖಾ ಕೂಡ ಆಕಾಂಕ್ಷಿಯಾಗಿ ಮುನ್ನೆಲೆಗೆ ಬಂದಿದ್ದಾರೆ.

ಸಾದಿಖಾ ಅವರು 'ನಮ್ಮ ಮಿತ್ರ ಫೌಂಡೇಶನ್' ಅಡಿಯಲ್ಲಿ ಹಲವು ಸಮಾಜಮುಖಿ ಕೆಲಸ ಮಾಡಿದ್ದಾರೆ. ಬಡ ಮತ್ತು ನಿರ್ಗತಿಕರಿಗೆ ಆರೋಗ್ಯ ಆಧಾರಿತ ಸೇವೆಗಳನ್ನು ಒದಗಿಸಿದ್ದಾರೆ. ಅವರು ಸಾಮಾಜಿಕ ಸಮಸ್ಯೆಗಳ ಬಗ್ಗೆ ಕೆಲಸ ಮಾಡಿದ್ದಾರೆ.

ಬೀದಿ ದೀಪಗಳು, ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ಮತ್ತು ಇತರ ಮೂಲ ಸೌಕರ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ಈ ಹಿಂದೆ 2018ರ ಚುನಾವಣೆಯ ವೇಳೆ ಟಿಕೆಟ್ ಪಡೆಯಲು ಯತ್ನಿಸಿದ್ದರು, ಆದರೆ ಮಾಜಿ ಸಚಿವ ವಿನಯ್ ಕುಲಕರ್ಣಿ ವಿರುದ್ಧ ಟಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ.

ಅವರು ದೂರದ ಹಳ್ಳಿಗಳಲ್ಲಿ ಹಲವಾರು ವರ್ಷಗಳಿಂದ ಕೆಲಸ ಮಾಡಿದ್ದಾರೆ, ಈ ಪ್ರದೇಶಗಳಲ್ಲಿ ಆರೋಗ್ಯ ಮತ್ತು ಶಿಕ್ಷಣವನ್ನು ಸುಧಾರಿಸಲು ತಮ್ಮ ಅತ್ಯುತ್ತಮ ಕೊಡುಗೆ ನೀಡಿದ್ದಾರೆ ಎಂದು ಕ್ಷೇತ್ರದ ಜನರು ಹೇಳಿದ್ದಾರೆ. ಅನೇಕ ಅವಿದ್ಯಾವಂತ ಯುವಕರು ಆಕೆ ಆಯೋಜಿಸಿದ ವಿವಿಧ ಉದ್ಯೋಗ ಆಧಾರಿತ ಕೋರ್ಸ್‌ಗಳ ತರಬೇತಿಯನ್ನು ಪಡೆದಿದ್ದಾರೆ.

ಕ್ಷೇತ್ರದಲ್ಲಿ ಟಿಕೆಟ್‌ಗಾಗಿ ತೀವ್ರ ಪೈಪೋಟಿ ಏರ್ಪಟ್ಟಿದೆ,  ಸ್ಪರ್ಧೆಯು ಅದೇ ವೇಗದಲ್ಲಿ ಬೆಳೆದರೆ,  ಇದರ ಲಾಭ ಪಡೆದು ಎದುರಾಳಿ ಪಕ್ಷವು ಗೆಲುವು ಸಾಧಿಸಬಹುದು ಎಂದು ಕಾರ್ಯಕರ್ತರು ಹೇಳಿದ್ದಾರೆ. ಪ್ರಸಾದ್ ಅಬಯ್ಯ ಅಭ್ಯರ್ಥಿಯಾಗಬಹುದು ಎಂದು ಪಕ್ಷದ ಹಿರಿಯ ನಾಯಕರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!