ಬಿ.ಎಸ್ ಪುಟ್ಟರಾಜು 
ರಾಜಕೀಯ

ಬಿಜೆಪಿಯಿಂದ ವಲಸೆ ಬಂದ ಪುಟ್ಟಣ್ಣಗೆ ರಾಜಾಜಿನಗರ 'ಕೈ' ಟಿಕೆಟ್: ಬಂಡಾಯ ಸಾರಿದ ಲಿಂಗಾಯತ ನಾಯಕ ಬಿ.ಎಸ್ ಪುಟ್ಟರಾಜು!

ರಾಜಾಜಿನಗರದಿಂದ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಬೆಂಗಳೂರು ಮಾಜಿ ಉಪಮೇಯರ್ ಬಿಎಸ್ ಪುಟ್ಟರಾಜು ಬಂಡಾಯವೆದ್ದಿದ್ದಾರೆ.

ಬೆಂಗಳೂರು: ರಾಜಾಜಿನಗರದಿಂದ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಬೆಂಗಳೂರು ಮಾಜಿ ಉಪಮೇಯರ್ ಬಿಎಸ್ ಪುಟ್ಟರಾಜು ಬಂಡಾಯವೆದ್ದಿದ್ದಾರೆ. ಲಿಂಗಾಯತ ಪ್ರಮುಖ ನಾಯಕರಾದ ಪುಟ್ಟರಾಜು ಸೋಮವಾರ ರಾಮಮಂದಿರ ಮೈದಾನದಲ್ಲಿ ಬೆಂಬಲಿಗರ ಸಭೆ ನಡೆಸಿದರು.

ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ವಿಧಾನಸಭೆ ಟಿಕೆಟ್‌ಗಾಗಿ ಚರ್ಚಿಸಿದ ವೇಳೆಯಲ್ಲಿ, ಅವರು ಸೂಚಿಸಿದ ಕೆಲ ಹೆಸರುಗಳಲ್ಲಿ ಪುಟ್ಟರಾಜು ಕೂಡ ಸೇರಿದ್ದರು.

ರಾಜ್ಯದ ದಕ್ಷಿಣದಲ್ಲಿ ಸುಮಾರು 100 ಕ್ಷೇತ್ರಗಳಿದ್ದು, ಅದರಲ್ಲಿ ಸಮುದಾಯವು 10 ಸ್ಥಾನಗಳನ್ನು ಬಯಸುತ್ತಿದೆ ಎಂದು ಮಹಾಸಭಾ ಖರ್ಗೆ ಅವರಿಗೆ ತಿಳಿಸಿತ್ತು.

ಬೆಂಗಳೂರಿನಲ್ಲಿ 10 ಸೀಟು ಕೇಳಿದ್ದೇವೆ, ಆರು ಅಥವಾ ಏಳು ಸೀಟು ಕೊಟ್ಟರೂ ಪರವಾಗಿಲ್ಲ ಎಂದು ಮಹಾಸಭಾ ಕಾರ್ಯದರ್ಶಿ ರೇಣುಕಾ ಪ್ರಸನ್ನ ಹೇಳಿದ್ದರು.

ಲಿಂಗಾಯತರು ಈ ಬಾರಿ ಕಾಂಗ್ರೆಸ್  ಪಕ್ಷವನ್ನು ದೊಡ್ಡ ರೀತಿಯಲ್ಲಿ ಬೆಂಬಲಿಸುತ್ತಿದ್ದಾರೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರದಲ್ಲಿ 15 ಲಕ್ಷ ಲಿಂಗಾಯತರು ಇದ್ದಾರೆ, ಆದರೆ ನಮಗೆ ಒಂದೇ ಒಂದು ಟಿಕೆಟ್ ಸಿಕ್ಕಿಲ್ಲ. ಇದಕ್ಕೆ ವ್ಯತಿರಿಕ್ತವಾಗಿ, ಶೇ.25 ರಷ್ಟಿರುವ ಒಕ್ಕಲಿಗರು 18 ಸ್ಥಾನಗಳನ್ನು ಪಡೆದಿದ್ದಾರೆ. ಬ್ರಾಹ್ಮಣರು ಮೂರು ಸ್ಥಾನಗಳನ್ನು ಪಡೆದಿದ್ದಾರೆ, ಆದರೂ ಅವರ ಸಂಖ್ಯೆ ಅತ್ಯಲ್ಪವಾಗಿದೆ, ಲಿಂಗಾಯತರು ರಾಜ್ಯದ ಜನಸಂಖ್ಯೆಯ 17-18% ರಷ್ಟಿದ್ದಾರೆ ಎಂದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಬಿ.ಎಸ್ ಪುಟ್ಟರಾಜು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಚಿಕ್ಕನಾಯಕನಹಳ್ಳಿ, ತಿಪಟೂರು, ಗುಂಡ್ಲುಪೇಟೆಯಲ್ಲಿ ಲಿಂಗಾಯತರು ತಮಗೆ ಸೀಟು ಸಿಕ್ಕದ್ದಕ್ಕೆ ಖುಷಿಯಲ್ಲಿದ್ದಾರೆ. ಚಿಕ್ಕಮಗಳೂರು, ಕಡೂರು-ತರೀಕೆರೆ, ಚಿತ್ರದುರ್ಗ, ಹಾಸನದ ಬೇಲೂರು ಕ್ಷೇತ್ರಗಳಲ್ಲಿಯೂ ಲಿಂಗಾಯತ ಸಮುದಾಯದ ಮುಖಂಡರು ಟಿಕೆಟ್‌ ಬಯಸಿದ್ದು, ಅವರನ್ನು ಇನ್ನು ಪರಿಗಣಿಸಿಲ್ಲ.

ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಚಿಕ್ಕಪೇಟೆಯಿಂದ ಮಾಜಿ ಮೇಯರ್ ಗಂಗಾಂಬಿಕೆ ಅವರಿಗೆ ಟಿಕೆಟ್ ನೀಡಬೇಕೆಂದು ಸಮುದಾಯದ ಮುಖಂಡರು ಒತ್ತಾಯಿಸುತ್ತಿದ್ದಾರೆ.

ಲಿಂಗಾಯತರಿಗೆ ಟಿಕೆಟ್ ನೀಡುವ ಮೂಲಕ ಉತ್ತಮ ಪ್ರಾತಿನಿಧ್ಯ ನೀಡಿದರೆ ಮಾತ್ರ ಸಮುದಾಯ ಕಾಂಗ್ರೆಸ್‌ಗೆ ಹೆಚ್ಚಿನ ಬೆಂಬಲ ನೀಡುತ್ತದೆ ಎಂಬುದು ಅವರ ವಾದ. ವೀರಶೈವ ಮಹಾಸಭಾದ ಜೊತೆಗೆ ವಿವಿಧ ಮಠಾಧೀಶರು ಖರ್ಗೆ, ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ಮಾತನಾಡಿ ಹೆಚ್ಚಿನ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT